ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ,ಫೆ,28:-ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.

ಅವರು ಇಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಬಹಳಷ್ಟು ಮತಗಟ್ಟೆಗಳು ಶಾಲೆ ಹಾಗೂ ಅಂಗನವಾಡಿಗಳಲ್ಲಿ ಇದೆ. ಮತಗಟ್ಟೆಗಳಲ್ಲಿ ಮತದಾನದ ಕೆಲಸಕ್ಕಾಗಿ ಟೇಬಲ್, ಚೇರ್, ವಿದ್ಯುತ್ ದೀಪಗಳು, ಶೌಚಾಲಯದ ವ್ಯವಸ್ಥೆ, ನೀರಿನ ವ್ಯವಸ್ಥೆ ಗಳನ್ನು ಪರಿಶೀಲಿಸಿ ಸಣ್ಣ ಪುಟ್ಟ ರಿಪೇರಿಗಳಿದ್ದಲ್ಲಿ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಗಮನಕ್ಕೆ ತಂದು ಸರಿಪಡಿಸಿಕೊಳ್ಳಿ. ಮತದಾನದ ದಿನದಂದು ಗ್ರಾಮ ಪಂಚಾಯಿತಿ ಕಚೇರಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಮತಗಟ್ಟೆಗಳಲ್ಲಿ ನೆರಳಿನ ವ್ಯವಸ್ಥೆ ಇಲ್ಲದಿದ್ದರೆ ಶ್ಯಾಮಿಯಾನದ ವ್ಯವಸ್ಥೆ ಮಾಡಬೇಕು. ಶಾಲೆಗಳಲ್ಲಿರುವ ಬೆಂಚ್ ಗಳನ್ನು ಸರಣಿ ಸಾಲಿನಲ್ಲಿ ಜೋಡಿಸಿದರೆ ಮತದಾರರು ಕುಳಿತುಕೊಳ್ಳಲು ಸಹಾಯವಾಗುತ್ತದೆ ಎಂದರು.

ಮತಗಟ್ಟೆ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರಿಗೆ ರ್ಯಾಂಪ್ ವ್ಯವಸ್ಥೆ , ವೀಲ್ ಚೇರ್, ಮ್ಯಾಗ್ನಿಫೈಯಿಂಗ್ ಗ್ಲಾಸ್ ಸೇರಿದಂತೆ ಇನ್ನಿತರೆ ವ್ಯವಸ್ಥೆಯ ಬಗ್ಗೆ ವರದಿ ನೀಡುವಂತೆ ತಿಳಿಸಿದರು.

2018 ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಕಾರಣ ತಿಳಿದುಕೊಂಡು, ಹೆಚ್ಚು ಸ್ವೀಪ್ ಚಟುವಟಿಕೆಗಳನ್ನು ಆಯೋಜಿಸಿ ಮತದಾನದ ಪ್ರಮಾಣವನ್ನು ಹೆಚ್ಚಿಸಿ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು, ಜಿ.ಪಂ.ಉಪ ಕಾರ್ಯದರ್ಶಿ ಸಂಜೀವಪ್ಪ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *