ಭಾರತ ಐಕ್ಯತೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಮಧು ಜಿ.ಮಾದೇಗೌಡ

ಭಾರತ ಐಕ್ಯತೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಮಧು ಜಿ.ಮಾದೇಗೌಡ

ಭಾರತ ಐಕ್ಯತೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಮಧು ಜಿ.ಮಾದೇಗೌಡ

ಮಂಡ್ಯ,ಫೆ,28:- ಮಹಾತ್ಮ ಗಾಂಧಿಜೀಯವರು ಸ್ವಾತಂತ್ರ್ಯ ಪೂರ್ವದಲ್ಲಿ ಮಹಿಳೆಯರ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟು ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಿದ್ದರು. ಈ ನಿಟ್ಟಿನಲ್ಲಿ ಭಾರತದ ಐಕ್ಯತೆಯಲ್ಲಿ ಮಹಿಳಾ ಪಾತ್ರ ಪ್ರಮುಖ ಎಂದು ವಿಧಾನ ಪರಿಷತ್ ಶಾಸಕ ಹಾಗೂ ಗಾಂಧಿ ಸ್ಮಾರಕ ಟ್ರಸ್ಟ್ ನ ಅಧ್ಯಕ್ಷರಾದ ಮಧು ಜಿ.ಮಾದೇಗೌಡ ಅವರು ತಿಳಿಸಿದರು.

ಅವರು ಇಂದು ಭಾರತ ಸರ್ಕಾರ ಕೇಂದ್ರ ಸಂವಹನ ಇಲಾಖೆ ಮೈಸೂರು, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಮಹಾತ್ಮ ಗಾಂಧೀ ಸ್ಮಾರಕ ಟ್ರಸ್ಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಛಾಯಾಚಿತ್ರ ಪ್ರದರ್ಶನ ಮತ್ತು ವಿಶೇಷ ಮಾಹಿತಿ ಕಾರ್ಯಕ್ರಮವನ್ನು ಮಂಡ್ಯ ನಗರದ ಗಾಂಧಿಭವನದಲ್ಲಿ ಉದ್ಘಾಟಿಸಿ ಮಾತನಾಡಿದರು.

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ರವರ ಕುರಿತ ಜೀವನ ಚರಿತ್ರೆ, ಸ್ವಾತಂತ್ರ್ಯ ಹೋರಾಟದ ಮಾಹಿತಿ. ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಛಾಯಾಚಿತ್ರ ಪ್ರದರ್ಶನ ಹಾಗೂ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕ ಮಹಿಳೆಯರ ಸಾಧನೆಯ ಮಾಹಿತಿಗಳನ್ನು ಒಳಗೊಂಡಂತೆ ಛಾಯಾಚಿತ್ರವನ್ನು ಪ್ರದರ್ಶಿಸಿಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿರುವ ಕೇಂದ್ರ ಸಂವಹನ ಇಲಾಖೆಯ ಕಾರ್ಯ ಶ್ಲಾಘನೀಯ ಎಂದರು.

ಮಹಿಳೆಯರಿಗಾಗಿ ಇಂತಹ ಹತ್ತು ಹಲವಾರು ಕಾರ್ಯಕ್ರಮವನ್ನು ಆಯೋಜಿಸಿ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕಿದೆ ಎಂದರು.

ಇಂದಿನ ಯುಗದಲ್ಲಿ ಮಹಿಳೆಯರು ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿರುವವರು ಸಾಕಷ್ಟಿದ್ದಾರೆ ಅಂತಹವರನ್ನು ಗುರುತಿಸಿ ಅವರನ್ನು ಪ್ರೋತ್ಸಹಿಸಬೇಕಿದೆ ಎಂದರು.

ಕ್ಷೇತ್ರ ಸಂವಹನ ಕಾರ್ಯಾಲಯದ ಉಪ ನಿರ್ದೇಶಕರಾದ ಡಾ.ಟಿ.ಸಿ ಪೂರ್ಣಿಮಾ ಅವರು ಮಾತನಾಡಿ ಸರ್ಕಾರದ ಯೋಜನೆಗಳಲ್ಲಿ ಸಾಕಷ್ಟು ಜನೋಪಯೋಗಿ ಯೋಜನೆಗಳು ಇವೆ, ಇವುಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.

ಆಯುಷ್ಮಾನ್ ಆರೋಗ್ಯ ಕಾರ್ಡ್, ಬೆಳೆ ವಿಮೆ ಹೀಗೆ ಹಲವಾರು ಯೋಜನೆಗಳಿವೆ. ಈ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದರು

ಇದೇ ಸಂದರ್ಭದಲ್ಲಿ ಮಹಿಳೆಯರು ಸಾಧನೆ ಮಾಡಿರುವ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು. ನಂತರ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಎಸ್ ಎಸ್ ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಎ.ಪಿ ರಮೇಶ್, ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೆಶಕರಾದ ಎಸ್.ಎಚ್ ನಿರ್ಮಲ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಂಬಿಕಾ, ಮೇಲ್ವಿಚಾರಕಿ ಲಕ್ಷ್ಮೀ, ಕ್ಷೇತ್ರ ಪ್ರಚಾರ ಸಹಾಯಕರಾದ ಪಿ.ದರ್ಶನ್ ಸೇರಿದಂತೆ ಇತರರು ಹಾಜರಿದ್ದರು.

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *