ರೇಷ್ಮೆ ಕೃಷಿಯು ವಿಫುಲ ಉದ್ಯೋಗಾವಕಾಶ ಹೊಂದಿದೆ: ಎಂ.ಬಿ ರಾಜೇಶ್ ಗೌಡ

ರೇಷ್ಮೆ ಕೃಷಿಯು ವಿಫುಲ ಉದ್ಯೋಗಾವಕಾಶ ಹೊಂದಿದೆ: ಎಂ.ಬಿ ರಾಜೇಶ್ ಗೌಡ

ರೇಷ್ಮೆ ಕೃಷಿಯು ವಿಫುಲ ಉದ್ಯೋಗಾವಕಾಶ ಹೊಂದಿದೆ: ಎಂ.ಬಿ ರಾಜೇಶ್ ಗೌಡ

ರೇಷ್ಮೆ ಕೃಷಿಯು ಕೃಷಿ ಆಧಾರಿತ ಗ್ರಾಮೀಣ ಗುಡಿ ಕೈಗಾರಿಕೆಯಾಗಿದ್ದು, ವಿಫುಲ ಉದ್ಯೋಗಾವಕಾಶವನ್ನು ಹೊಂದಿದೆ ಎಂದು ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತ ಎಂ.ಬಿ. ರಾಜೇಶ್ ಗೌಡ ಅವರು ತಿಳಿಸಿದರು.

ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ, ಕರ್ನಾಟಕ ರಾಜ್ಯ ರೇಷ್ಮೆ ಇಲಾಖೆ‌ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಅಂಬೇಡ್ಕರ್ ಭವನದಲ್ಲಿಂದು ನಡೆದ ರೇಷ್ಮೆ ಕೃಷಿಮೇಳ ಮತ್ತು ಪ್ರಶಸ್ತಿ ವಿತರಣೆ ಸಮಾರಂಭ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ರೇಷ್ಮೆ ಇಲಾಖೆಯು ಜಂಟಿಯಾಗಿ ಆಯೋಜಿಸಿರುವ ರೇಷ್ಮೆ ಕೃಷಿ ಮೇಳ ಮತ್ತು ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ರಾಜ್ಯದ ರೇಷ್ಮೆ ಬೆಳೆಗಾರರ ಸಾಧನೆಗಳನ್ನು ಗುರುತಿಸಿ ಸನ್ಮಾನ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಹಿಪ್ಪುನೇರಳೆ ರೇಷ್ಮೆ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದು, ವಾರ್ಷಿಕ 11,191 ಮೆ.ಟನ್ ಕಚ್ಚಾ ರೇಷ್ಮೆ ಉತ್ಪಾದನೆ ಮಾಡುತ್ತಿದೆ, ಈ ಪೈಕಿ 2,438 ಮೆ.ಟನ್ ದ್ವಿತಳಿ ರೇಷ್ಮೆ ಉತ್ಪಾದನೆ ಆಗುತ್ತಿದೆ ಎಂದರು.

ರಾಜ್ಯದಲ್ಲಿ 1,38,000 ರೇಷ್ಮೆ ಬೆಳೆಗಾರರು 2,87,500 ಎಕರೆ ಪ್ರದೇಶದಲ್ಲಿ ಹಿಪ್ಪುನೇರಳೆ ಬೇಸಾಯವನ್ನು ಮಾಡುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಬಿತ್ತನೆ ಪ್ರದೇಶದ ರೇಷ್ಮೆ ಬೆಳೆಗಾರರು, ರೇಷ್ಮೆ ಭಾಗೀದಾರರು, ರೇಷ್ಮೆ ಮೊಟ್ಟೆ ತಯಾರಕರು ಮತ್ತು ಚಾಕಿ ಸಾಕಾಣಿಕೆ ಕೇಂದ್ರಗಳು ಕೆಲಸ ನಿರ್ವಹಿಸುತ್ತಿವೆ ಎಂದರು.

ಗುಣಮಟ್ಟದ ಕಚ್ಚಾ ರೇಷ್ಮೆ ಬೇಡಿಕೆಯನ್ನು ಪೂರೈಸುವಲ್ಲಿ ಕಳೆದ ಒಂದು ದಶಕದಿಂದಲೂ ಸ್ವಯಂಚಾಲಿತ ರೇಷ್ಮೆ ನೂಲು ಬಿಚ್ಚಾಣಿಕೆ ಘಟಕ ಸ್ಥಾಪನೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದೇವೆ ಎಂದು ಹೇಳಿದರು.

ಇದಕ್ಕೂ ಮುನ್ನ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ. ಶ್ರೀನಿವಾಸ್ ಅವರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ರೇಷ್ಮೆ ವಸ್ತುಪ್ರದರ್ಶನವನ್ನು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ರೇಷ್ಮೆ ಕೃಷಿಮೇಳದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ ನಿರ್ದೇಶಕರಾದ ಡಾ. ಬಿ.ಟಿ. ಶ್ರೀನಿವಾಸ್, ರೇಷ್ಮೆ ಇಲಾಖೆ ನಿರ್ದೇಶಕರಾದ ಮೇಘಲಾ, ಕೇಂದ್ರ ರೇಷ್ಮೆ ಸಂಶೋಧನ ತರಬೇತಿ ನಿರ್ದೇಶಕರಾದ ಡಾ. ಮೇರಿ ಜೋಸೆಫ್, ನಗರಾಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ಕೆ.ಶ್ರೀನಿವಾಸ್, ರಾಜ್ಯ ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಮಳ್ಳೂರು ಶಿವಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Spread the love

Related post

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ…

Leave a Reply

Your email address will not be published. Required fields are marked *