ರೇಷ್ಮೆ ಕೃಷಿಯು ವಿಫುಲ ಉದ್ಯೋಗಾವಕಾಶ ಹೊಂದಿದೆ: ಎಂ.ಬಿ ರಾಜೇಶ್ ಗೌಡ

ರೇಷ್ಮೆ ಕೃಷಿಯು ವಿಫುಲ ಉದ್ಯೋಗಾವಕಾಶ ಹೊಂದಿದೆ: ಎಂ.ಬಿ ರಾಜೇಶ್ ಗೌಡ

ರೇಷ್ಮೆ ಕೃಷಿಯು ವಿಫುಲ ಉದ್ಯೋಗಾವಕಾಶ ಹೊಂದಿದೆ: ಎಂ.ಬಿ ರಾಜೇಶ್ ಗೌಡ

ರೇಷ್ಮೆ ಕೃಷಿಯು ಕೃಷಿ ಆಧಾರಿತ ಗ್ರಾಮೀಣ ಗುಡಿ ಕೈಗಾರಿಕೆಯಾಗಿದ್ದು, ವಿಫುಲ ಉದ್ಯೋಗಾವಕಾಶವನ್ನು ಹೊಂದಿದೆ ಎಂದು ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತ ಎಂ.ಬಿ. ರಾಜೇಶ್ ಗೌಡ ಅವರು ತಿಳಿಸಿದರು.

ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ, ಕರ್ನಾಟಕ ರಾಜ್ಯ ರೇಷ್ಮೆ ಇಲಾಖೆ‌ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಅಂಬೇಡ್ಕರ್ ಭವನದಲ್ಲಿಂದು ನಡೆದ ರೇಷ್ಮೆ ಕೃಷಿಮೇಳ ಮತ್ತು ಪ್ರಶಸ್ತಿ ವಿತರಣೆ ಸಮಾರಂಭ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ರೇಷ್ಮೆ ಇಲಾಖೆಯು ಜಂಟಿಯಾಗಿ ಆಯೋಜಿಸಿರುವ ರೇಷ್ಮೆ ಕೃಷಿ ಮೇಳ ಮತ್ತು ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ರಾಜ್ಯದ ರೇಷ್ಮೆ ಬೆಳೆಗಾರರ ಸಾಧನೆಗಳನ್ನು ಗುರುತಿಸಿ ಸನ್ಮಾನ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಹಿಪ್ಪುನೇರಳೆ ರೇಷ್ಮೆ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದು, ವಾರ್ಷಿಕ 11,191 ಮೆ.ಟನ್ ಕಚ್ಚಾ ರೇಷ್ಮೆ ಉತ್ಪಾದನೆ ಮಾಡುತ್ತಿದೆ, ಈ ಪೈಕಿ 2,438 ಮೆ.ಟನ್ ದ್ವಿತಳಿ ರೇಷ್ಮೆ ಉತ್ಪಾದನೆ ಆಗುತ್ತಿದೆ ಎಂದರು.

ರಾಜ್ಯದಲ್ಲಿ 1,38,000 ರೇಷ್ಮೆ ಬೆಳೆಗಾರರು 2,87,500 ಎಕರೆ ಪ್ರದೇಶದಲ್ಲಿ ಹಿಪ್ಪುನೇರಳೆ ಬೇಸಾಯವನ್ನು ಮಾಡುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಬಿತ್ತನೆ ಪ್ರದೇಶದ ರೇಷ್ಮೆ ಬೆಳೆಗಾರರು, ರೇಷ್ಮೆ ಭಾಗೀದಾರರು, ರೇಷ್ಮೆ ಮೊಟ್ಟೆ ತಯಾರಕರು ಮತ್ತು ಚಾಕಿ ಸಾಕಾಣಿಕೆ ಕೇಂದ್ರಗಳು ಕೆಲಸ ನಿರ್ವಹಿಸುತ್ತಿವೆ ಎಂದರು.

ಗುಣಮಟ್ಟದ ಕಚ್ಚಾ ರೇಷ್ಮೆ ಬೇಡಿಕೆಯನ್ನು ಪೂರೈಸುವಲ್ಲಿ ಕಳೆದ ಒಂದು ದಶಕದಿಂದಲೂ ಸ್ವಯಂಚಾಲಿತ ರೇಷ್ಮೆ ನೂಲು ಬಿಚ್ಚಾಣಿಕೆ ಘಟಕ ಸ್ಥಾಪನೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದೇವೆ ಎಂದು ಹೇಳಿದರು.

ಇದಕ್ಕೂ ಮುನ್ನ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ. ಶ್ರೀನಿವಾಸ್ ಅವರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ರೇಷ್ಮೆ ವಸ್ತುಪ್ರದರ್ಶನವನ್ನು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ರೇಷ್ಮೆ ಕೃಷಿಮೇಳದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ ನಿರ್ದೇಶಕರಾದ ಡಾ. ಬಿ.ಟಿ. ಶ್ರೀನಿವಾಸ್, ರೇಷ್ಮೆ ಇಲಾಖೆ ನಿರ್ದೇಶಕರಾದ ಮೇಘಲಾ, ಕೇಂದ್ರ ರೇಷ್ಮೆ ಸಂಶೋಧನ ತರಬೇತಿ ನಿರ್ದೇಶಕರಾದ ಡಾ. ಮೇರಿ ಜೋಸೆಫ್, ನಗರಾಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ಕೆ.ಶ್ರೀನಿವಾಸ್, ರಾಜ್ಯ ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಮಳ್ಳೂರು ಶಿವಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *