ಮಾ.12 ರಂದು ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೆದ್ದಾರಿಯ ಉದ್ಘಾಟನೆಪ್ರಹ್ಲಾದ್ ಜೋಶಿ

ಮಾ.12 ರಂದು ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೆದ್ದಾರಿಯ ಉದ್ಘಾಟನೆಪ್ರಹ್ಲಾದ್ ಜೋಶಿ

ಮಾ.12 ರಂದು ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೆದ್ದಾರಿಯ ಉದ್ಘಾಟನೆಪ್ರಹ್ಲಾದ್ ಜೋಶಿ

ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೈವೇ ಉದ್ಘಾಟನೆ ಹಾಗೂ ಮೈಸೂರು – ಕುಶಲನಗರ ಹೆದ್ದಾರಿಯ ಶಂಕುಸ್ಥಾಪನೆ ಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಗೆಜ್ಜಲಗೆರೆ ಕಾಲೋನಿಯಲ್ಲಿ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ರವರು ತಿಳಿಸಿದರು.

ಅವರು ಇಂದು ಗೆಜ್ಜಲಗೆರೆ ಕಾಲೋನಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು, ಭಾರತದಲ್ಲಿ ಲಾಜಿಸ್ಟಿಕ್ ಕಾಸ್ಟ್ ಹೆಚ್ಚಿದೆ ಉತ್ತಮವಾದ ರಾಷ್ಟೀಯ ಹೆದ್ದಾರಿ, ರೈಲ್ವೆ, ಜಲಸಾರಿಗೆ ಮೂಲಕ ಸಮಯದ ಉಳಿತಾಯ ಮಾಡಿ ಲಾಜಿಸ್ಟಿಕ್ ಕಾಸ್ಟ್ ಕಡಿಮೆ ಮಾಡಬಹುದು ಎಂದರು

ಲಾಜಿಸ್ಟಿಕ್ ಕಾಸ್ಟ್ ಶೇಕಡ 12 ರಷ್ಟು ಇದ್ದು 2030ರ ಒಳಗಾಗಿ ಇದನ್ನು ಶೇಕಡ 7 ರಿಂದ 8 ಕ್ಕೆ ಇಳಿಸಲು .
ರಸ್ತೆ, ಪೋರ್ಟ್ ಗಳು, ವಿಮಾನ ನಿಲ್ದಾಣ, ಇಂಟರ್ ನಲ್ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯಕ್ಕಾಗಿ ಆಯವ್ಯಯದಲ್ಲಿ 10 ಲಕ್ಷ ಕೋಟಿಯನ್ನು ಮೀಸಲಿರಿಸಲಾಗಿದೆ ಎಂದರು.

ಬೆಂಗಳೂರು- ಮೈಸೂರು ಏಕ್ಸಪ್ರಸ್ ಹೈವೆಯಿಂದ ಸಂಚಾರದ ಸಮಯ ಉಳಿತಾಯವಾಗಿದ್ದು, 75 ನಿಮಿಷದಲ್ಲಿ ಸಂಚರಿಸಬಹುದು. 3550 ಕೋಟಿ ರೂ ವೆಚ್ಚದಲ್ಲಿ ಮೈಸೂರು ಕುಶಾಲನಗರ ಹೆದ್ದಾರಿಯ ಶಂಕುಸ್ಥಾಪನೆ, ಮೈಸೂರು- ಬೆಂಗಳೂರು ಹೆದ್ದಾರಿಯ ಉದ್ಘಾಟನೆಯನ್ನು ಒಂದೇ ವೇದಿಕೆಯಲ್ಲಿ ನೆರವೇರಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಅಬಕಾರಿ ಸಚಿವ ಗೋಪಾಲಯ್ಯ ಕೆ, ರೇಷ್ಮ ಹಾಗೂ ಕ್ರೀಡಾ ಸಚಿವ ಡಾ: ಕೆ.ಸಿ ನಾರಾಯಣ ಗೌಡ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ‌ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ
ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *