ಕಾಡಾನೆ ದಾಳಿ…ವಾಚರ್ ಸಾವು…

ಕಾಡಾನೆ ದಾಳಿ…ವಾಚರ್ ಸಾವು…

ಎಚ್.ಡಿ.ಕೋಟೆ,ಮಾ4,Tv10 ಕನ್ನಡ
ಕಾಡಾನೆ ದಾಳಿಗೆ ವಾಚರ್ ಸಾವನ್ನಪ್ಪಿದ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕಲ್ಕೆರೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ದಡದಹಳ್ಳಿ ಹಾಡಿಯ ಆದಿವಾಸಿ ವಾಚರ್ ಬೊಮ್ಮ ಸಾವನ್ನಪ್ಪಿದ ದುರ್ದೈವಿ.ಬೊಮ್ಮ ಮತ್ತು ಮಧುಕೊಯ್ಲರ್ ಎಂಬ ಇಬ್ಬರು ವಾಚರ್ ಗಳು ಅರಣ್ಯದ ಗಸ್ತಿನಲ್ಲಿದ್ದಾಗ ಕಾಡಾನೆ ಹಠಾತ್ ಎದುರಾಗಿದೆ.
ಕಾಡಾನೆಯಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಬೊಮ್ಮ ಕಂದಕಕ್ಕೆ ಬಿದ್ದಿದ್ದಾನೆ.
ಕಂದಕದಲ್ಲಿ ಬಿದ್ದ ಬೊಮ್ಮನನ್ನು ಕಾಡಾನೆ ಸೊಂಡಲಿನಿಂದ ಮೇಲಕ್ಕೆಸೆದು ಗಾಯಗೊಳಿಸಿದೆ.
ಕಂದಕದಲ್ಲಿ ಸಿಲಿಕಿದ್ದರೂ ಅರಣ್ಯ ಇಲಾಖೆ ಸಿಬ್ಬಂಧಿಗಳಿಗೆ ಕರೆ ಮಾಡಿ ಸ್ಥಳಕ್ಕೆ ಬರಮಾಡಿಕೊಂಡಿದ್ದಾನೆ.ಕೈಮೂಳೆ ಮುರಿದು ಗಂಭೀರ ಗಾಯವಾಗಿದ್ದ ಬೊಮ್ಮನನ್ನು ಆಸ್ಪತ್ರೆಗೆ ಸ್ಥಳಾಂತರಿಸುವಾಗ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಅರಣ್ಯ ಇಲಾಖೆ ಸಿ ಎಫ್ ಓ ರವಿಕುಮಾರ್ ಸೇರಿಸಂತೆ ಸಿಬ್ಬಂಧಿಗಳು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತನ ಕುಟುಂಬಕ್ಕೆ ಜೀವ ವಿಮೆ ಸೆರಿದಂತೆ ಇನ್ನಿತರ ಸವಲತ್ತು ಸೇರಿ 35ಲಕ್ಷ ಪರಿಹಾರ ಕೊಡಿಸುವ ಅರಣ್ಯ ಇಲಾಖೆ ಭರವಸೆ ನೀಡಿದೆ.ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *