ಎನ್.ಆರ್.ಎಸಿಪಿ ಸ್ಕ್ವಾಡ್ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…7.10 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

ಎನ್.ಆರ್.ಎಸಿಪಿ ಸ್ಕ್ವಾಡ್ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…7.10 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

ಮೈಸೂರು,ಮಾ4,Tv10 ಕನ್ನಡ
ಎನ್.ಆರ್.ಎಸಿಪಿ ವಿಶೇಷ ಅಪರಾಧ ಪತ್ತೆ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಸರಗಳ್ಳರು ಸಿಕ್ಕಿಬಿದ್ದಿದ್ದಾರೆ.ಬಂಧಿತರಿಂದ 7.10 ಲಕ್ಷ ಮೌಲ್ಯದ 205 ಗ್ರಾಂ ತೂಕದ 5 ಚಿನ್ನದ ಸರಗಳನ್ನ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಮೂರು ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.

ರುಮಾನ್(25) ಹಾಗೂ ಸುಹಾಲ್(26) ಬಂಧಿತರು.
2021 ರಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪಿಗಳನ್ನ ಬಂಧಿಸಲು ವಿಶೇಷ ತಂಡವನ್ನ ರಚಿಸಲಾಗಿತ್ತು.ಅಪರಾಧ ಮತ್ತು ಸಂಚಾರ ಡಿಸಿಪಿ ಎಸ್.ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಹಾಗೂ ಎನ್.ಆರ್.ವಿಭಾಗದ ಎಸಿಪಿ ಅಶ್ವತ್ಥ್ ನಾರಾಯಣ್ ಉಸ್ತುವಾರಿಯಲ್ಲಿ ರಚಿಸಿದ ವಿಶೇಷ ತಂಡ ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದೆ.ಶೋಕಿಗಾಗಿ ಆರೋಪಿಗಳು ಕೃತ್ಯವೆಸಗುತ್ತಿದ್ದರೆಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಎನ್.ಆರ್.ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತ್.ಕೆ.ತಳವಾರ್,ಹೆಬ್ಬಾಳ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪ್ರಸಾದ್ ನೇತೃತ್ವದಲ್ಲಿ ಪಿಎಸ್ಸೈ ಗಳಾದ ರಾಜು,ಎಸ್.ಗಂಗಾಧರ್,ಚಂದ್ರಶೇಖರ್ ಇಟಗಿ.ಎನ್.ಆರ್.ವಿಭಾಗದ ವಿಶೇಷ ಅಪರಾಧ ಪತ್ತೆ ತಂಡದ ಎಎಸ್ಸೈ ಅನಿಲ್.ಕೆ.ಶಂಖಪಾಲ್,ಸಿಬ್ಬಂದಿಗಳಾದ ಲಿಂಗರಾಜಪ್ಪ,ರಮೇಶ್,ಸುರೇಶ್,ಜೀವನ್,ಹರೀಶ್,ಹನುಮಂತ ಕಲ್ಲೇದ್.ಹೆಬ್ಬಾಳ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಮಲ್ಲಿಕಾರ್ಜುನಪ್ಪ,ಹರೀಶ್,ಮಹೇಶ್ ಹೊಸಮನಿ.ಎನ್.ಆರ್.ಠಾಣೆಯ ಸಿಬ್ಬಂದಿಗಳಾದ ಮಂಜುನಾಥ್,ಸುನಿಲ್ ಕುಮಾರ್,ಮಹೇಶ್.ಸಿಡಿಆರ್ ಸೆಲ್ ನ ಕುಮಾರ್,ಆರಾಧ್ಯ,ಮಂಜುನಾಥ್,ಶ್ಯಾಂ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಕಾರ್ಯಾಚರಣೆಯನ್ನ ಪೊಲೀಸ್ ಆಯುಕ್ತ ಬಿ.ರಮೇಶ್ ಪ್ರಶಂಸಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *