ಮೂಕಸ್ಪಂದನಾ ಜಾಗೃತಿ ಅಭಿಯಾನ…ಪ್ರಾಣಿ ಪಕ್ಷಿಗಳ ರಕ್ಷಣೆಗೆ ಮುಂದಾದ ಸಂಸ್ಥೆಗಳು…

ಮೂಕಸ್ಪಂದನಾ ಜಾಗೃತಿ ಅಭಿಯಾನ…ಪ್ರಾಣಿ ಪಕ್ಷಿಗಳ ರಕ್ಷಣೆಗೆ ಮುಂದಾದ ಸಂಸ್ಥೆಗಳು…

ಮೈಸೂರು,ಮಾ6,Tv10 ಕನ್ನಡ
ಬೇಸಿಗೆ ಶುರುವಾದ ಬೆನ್ನಹಿಂದೆಯೇ ಮೂಕಪ್ರಾಣಿಗಳ ನೆರವಿಗೆ ಕೆಎಂಪಿಕೆ ಟ್ರಸ್ಟ್ ಹಾಗೂ ಜೀವಧಾರಾ ರಕ್ತನಿಧಿ ಕೇಂದ್ರ ಧಾವಿಸಿದೆ.ಮೂಕ ಪ್ರಾಣಿಗಳ ರಕ್ಷಣೆಗಾಗಿ ಜಾಗೃತಿ ಅಭಿಯಾನ ಕೈಗೊಂಡಿದೆ.ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸುವ ಅಭಿಯಾನ ಇದಾಗಿದೆ.ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.ನೀರಿನ ತೊಟ್ಟಿಗಳಲ್ಲಿ ನೀರು ತುಂಬಿಸುವ ಹಾಗೂ ಸಾರ್ವಜನಿಕರಿಗೆ ನೀರಿನ ತೊಟ್ಟಿಗಳನ್ನ ಮತ್ತು ಆಹಾರದ ಬಟ್ಟಲುಗಳನ್ನ ವಿತರಿಸುವ ಮೂಲಕ ಮೇಯರ್ ಶಿವಕುಮಾರ್ ಚಾಲನೆ ನೀಡಿದ್ದಾರೆ.ಇದೇ ವೇಳೆ ಮಾತನಾಡಿ.ಕಾಲ
ಬದಲಾವಣೆ ಜಗದ ನಿಯಮ ಅದಕ್ಕೆ ಹೊಂದಿಕೊಂಡು‌‌ ಜೀವಿಸುವುದು ಪ್ರತಿಯೊಬ್ಬರ ಕರ್ತವ್ಯ, ಮನುಷ್ಯ ಪ್ರತಿಯೊಂದಕ್ಕೂ ಪರಿಸರದ ಮೇಲೆ ಅವಲಂಬಿತನಾಗುತ್ತಾನೆ ಆದರೆ ಪ್ರಾಣಿಪಕ್ಷಿಗಳ ಪರಿಸರ ಉಳಿಸುವ ಸೇವಾಮನೋಭಾವ ಬೆಳಸಿಕೊಳ್ಳಬೇಕು, ಹೆಚ್ಚು ಸಸಿಗಳನ್ನು ನೆಡಲು ಮುಂದಾದರೆ ಪ್ರಾಣಿಪಕ್ಷಿಗಳ ರಕ್ಷಣೆಯಾಗುತ್ತದೆ, ಭವಿಷ್ಯದ ಪರಿಸರ ಸಂರಕ್ಷಣೆಯ ಪರಿಕಲ್ಪನೆಯ ನಿಟ್ಟಿನಲ್ಲಿ ಮೈಸೂರು ಅರಸರು ಮೃಗಾಲಯ ಕುಕ್ಕರಹಳ್ಳಿ ಕೆರೆ ಕಾರಂಜಿ ಕೆರೆ ಮಾದರಿ ಬಡಾವಣೆಗಳ ಉದ್ಯಾನವನಗಳನ್ನು ನಿರ್ಮಿಸಿದ್ದಾರೆ ಅದನ್ನು ಉಳಿಸಿಕೊಂಡು ಹೋಗುವುದು ಮೈಸೂರಿಗರ ಕರ್ತವ್ಯ ಎಂದು ಕರೆ ನೀಡಿದರು.

ಅಭಿಯಾನದಲ್ಲಿ ಭಾಗವಹಿಸಿದ ಮೂಡ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್ ರವರು ಮಾತನಾಡಿ ಸಮಾರು ವರ್ಷಗಳ ಹಿಂದೆ ಮೈಸೂರಿನ ಮನೆಗಳ ಮುಂದೆ ಹಸುಕರು ಮೂಕ‌ ಪ್ರಾಣಿ ಪಕ್ಷಿಗಳು ನೀರು ಕುಡಿಯಲು ಕಲ್ಲಿನ ನೀರಿನ ತೊಟ್ಟಿಯನ್ನು ನಿರ್ಮಿಸಲಾಗುತ್ತಿತ್ತು, ಪಶು ಪಕ್ಷಿಗಳು ಆನಂದದಿಂದ ನೀರು ಕುಡಿದು ತಣಿವಾರಿಸಿಕೊಳ್ಳುತ್ತಿದ್ದವು , ಆದರೆ ಈ ದಿನಗಳಲ್ಲಿ ಅವೆಲ್ಲವೂ ಕಣ್ಮರೆಯಾಗಿರುವುದು ವಿಷಾದನೀಯ,
ನಿಸರ್ಗದಲ್ಲಿ ಪಶು ಪಕ್ಷಿ ಜಲಚರಗಳ ಹಿರಿತನದಲ್ಲಿ ಮಾನವ ಇತ್ತೀಚಿನ ಸಂಕುಲ ತನ್ನ ಕ್ಷೇಮಕ್ಕಾಗಿ ಬಡಾವಣೆಗಳನ್ನು ನಿರ್ಮಿಸಿ ಕೊಂಡು ಕೆರೆ ಕಟ್ಟೆ ಗಳನ್ನು ಮುಚ್ಚಿ ವೃಕ್ಷಗಳನ್ನು ಕಡಿದು ಅಮಾಯಕ್ಕೆ ಮೂಕ ಜೀವಿಗಳಿಗೆ ನೀರು ನೆರಳಿಲ್ಲದಂತೆ ಮಾಡಿರುವುದು ದುರಂತ. ಈ ನಿಟ್ಟಿನಲ್ಲಿ ಮಾನವೀಯತೆ ದೃಷ್ಟಿಕೋನದಿಂದ ನಾಗರೀಕರು ಈ ಬೇಸಿಗೆಯ ಧಗೆಯನ್ನು ನೀಗಿಸಲು ಮೂಕಪ್ರಾಣಿಗಳಿಗೆ ನೀರು ಆಹಾರವನ್ನು ನೀಡಿ ಸಕಲ ಜೀವರಾಶಿಗಳನ್ನು ಕಾಪಾಡಲು ಮುಂದಾಗಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಪ್ರಾಣಿಗಳ ಕಲ್ಯಾಣ ಮಂಡಳಿಯ ರಾಜ್ಯ ಚೇರ್ಮನ್ ಮಿತ್ತಲ್, ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಹೇಮ ನಂದೀಶ್,ಆಯುರ್ ಪೋರ್ಟ್ ವೆಲ್ ನೈಸ್ ವ್ಯವಸ್ಥಾಪಕ ನಿರ್ದೇಶಕ ಭರತ್ ರಾಜ್,ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕಡಕೋಳ ಜಗದೀಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್,
ಸವಿತಾ ಘಾಟ್ಕೆ , ಅಜಯ್ ಶಾಸ್ತ್ರಿ, ರವಿಶಂಕರ್, ಜಿ ರಾಘವೇಂದ್ರ, ರಾಕೇಶ್, ಸುಚೇಂದ್ರ ,ಚಕ್ರಪಾಣಿ, ಎಸ್ ಎನ್ ರಾಜೇಶ್, ಮೋಹನ್ ಕುಮಾರ್ ಗೌಡ, ರವಿಚಂದ್ರ, ರಂಗನಾಥ್, ಟಿ ಎಸ್ ಅರುಣ್, ರಾಜಗೋಪಾಲ್, ನವೀನ್, ಸುರೇಶ್ ಗೋಲ್ಡ್, ಮೈ ಲಾ ವಿಜಯ್ ಕುಮಾರ್, ಆನಂದ್, ಲಿಂಗರಾಜು, ಜೀವನ್, ವಾಸುದೇವಮೂರ್ತಿ,ಹಾಗೂ ಇನ್ನಿತರರು ಭಾಗಿಯಾಗಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *