ಚುನಾವಣೆ ಎದುರಿಸಲು ಸಜ್ಜಾಗುತ್ತಿದೆ ಜಿಲ್ಲಾಡಳಿತ…ಸಾರ್ವಜನಿಕರಿಗೆ ಮತದಾನ ಪ್ರಾತ್ಯಕ್ಷಿಕೆ ಆರಂಭ…ವಿಶೇಷ ಏನು ಗೊತ್ತಾ…?

ಚುನಾವಣೆ ಎದುರಿಸಲು ಸಜ್ಜಾಗುತ್ತಿದೆ ಜಿಲ್ಲಾಡಳಿತ…ಸಾರ್ವಜನಿಕರಿಗೆ ಮತದಾನ ಪ್ರಾತ್ಯಕ್ಷಿಕೆ ಆರಂಭ…ವಿಶೇಷ ಏನು ಗೊತ್ತಾ…?

ಮೈಸೂರು,ಮಾ7,Tv10 ಕನ್ನಡ
ಯಾವುದೇ ಸಮಯದಲ್ಲಾದ್ರೂ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಲಿದೆ.ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಮೂಲಕ ತಮ್ಮ ಪ್ರಭುಗಳನ್ನ ಆಯ್ಕೆ ಮಾಡುವ ಪ್ರಕ್ರಿಯೆ ಇದೆ.ಮತದಾನಕ್ಕೆ ಭಾರತ ಚುನಾವಣಾ ಆಯೋಗ ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿದೆ.ವಿದ್ಯನ್ಮಾನ ಮತಯಂತ್ರಗಳ ಮೂಲಕ ಮತದಾನ ನಡೆಯುವ ಪದ್ದತಿ ಅನುಸರಿಸಲಾಗುತ್ತಿದೆ.ವಿದ್ಯುನ್ಮಾನ ಯಂತ್ರಗಳ ಮೂಲಕ ಮತದಾನ ಮಾಡುವ ಕುರಿತಂತೆ ಚುನಾವಣಾ ಆಯೋಗದ ವತಿಯಿಂದ ಪ್ರಾತ್ಯಕ್ಷಿಕೆ ಆರಂಭವಾಗಿದೆ.ಮೈಸೂರಿನ ಜಿಲ್ಕಾಧಿಕಾರಿಗಳ ಕಚೇರಿಯಲ್ಲಿ ಪ್ರಾತ್ಯಕ್ಷಿಕೆ ಕೇಂದ್ರ ಸ್ಥಾಪಿಸಲಾಗಿದೆ.ಇಂದಿನಿಂದ ಪ್ರಾತ್ಯಕ್ಷಿಕೆ ಸಹ ಆರಂಭವಾಗಿದೆ.ಈ ಬಾರಿ ವಿದ್ಯನ್ಮಾನ ಮತ ಯಂತ್ರಗಳಲ್ಲಿ ನೂತನ ವ್ಯವಸ್ಥೆ ಅಳವಡಿಸಲಾಗಿದೆ.ಮತಚಲಾಯಿಸಿದಾಗ ಒಂದೇ ಪಕ್ಷಕ್ಕೆ ಮತ ಸೇರುತ್ತಿದೆ ಎಂಬ ಆರೋಪಗಳು ಪ್ರತಿ ಚುನಾವಣೆಯಲ್ಲೂ ಕೇಳಿ ಬರುತ್ತಿತ್ತು.ಇಂತಹ ಆರೋಪಗಳಿಗೆ ಬ್ರೇಕ್ ಹಾಕಲು ಚುನಾವಣಾ ಆಯೋಗ ವಿಶೇಷವಾಗಿ ಮತಯಂತ್ರಗಳನ್ನ ಸಿದ್ದಪಡಿಸಿದೆ.ಮತದಾನ ಮಾಡಿದ ನಂತರ ಯಾವ ಚಿಹ್ನೆಗೆ ಮತ ಚಲಾವಣೆಯಾಗಿದೆ ಎಂದು ಖಚಿತಪಡಿಸಿಕೊಳ್ಳುವ ನೂತನ ವ್ಯವಸ್ಥೆಯನ್ನ ಈ ಬಾರಿಯ ವಿದ್ಯುನ್ಮಾನ ಮತ ಯಂತ್ರಗಳಲ್ಲಿ ಅಳವಡಿಸಲಾಗಿದೆ.ಪ್ರಾತ್ಯಕ್ಷಿಕೆಯಲ್ಲಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.ತಮ್ಮ ಮತ ಯಾವ ಅಭ್ಯರ್ಥಿಗೆ ಸೇರಿದೆ ಎಂದು ಖಚಿತಪಡಿಸಿಕೊಳ್ಳಬಹುದಾಗಿದೆ.ಚುನಾವಣೆಯಲ್ಲಿ ಅಕ್ರಮ ನಡೆಯುತ್ತಿರುವ ಆರೋಪಗಳಿಗೆ ಭಾರತ ಚುನಾವಣಾ ಆಯೋಗ ತಕ್ಕ ಉತ್ತರ ನೀಡಲಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *