ಚುನಾವಣೆ ಎದುರಿಸಲು ಸಜ್ಜಾಗುತ್ತಿದೆ ಜಿಲ್ಲಾಡಳಿತ…ಸಾರ್ವಜನಿಕರಿಗೆ ಮತದಾನ ಪ್ರಾತ್ಯಕ್ಷಿಕೆ ಆರಂಭ…ವಿಶೇಷ ಏನು ಗೊತ್ತಾ…?

ಚುನಾವಣೆ ಎದುರಿಸಲು ಸಜ್ಜಾಗುತ್ತಿದೆ ಜಿಲ್ಲಾಡಳಿತ…ಸಾರ್ವಜನಿಕರಿಗೆ ಮತದಾನ ಪ್ರಾತ್ಯಕ್ಷಿಕೆ ಆರಂಭ…ವಿಶೇಷ ಏನು ಗೊತ್ತಾ…?

ಮೈಸೂರು,ಮಾ7,Tv10 ಕನ್ನಡ
ಯಾವುದೇ ಸಮಯದಲ್ಲಾದ್ರೂ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಲಿದೆ.ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಮೂಲಕ ತಮ್ಮ ಪ್ರಭುಗಳನ್ನ ಆಯ್ಕೆ ಮಾಡುವ ಪ್ರಕ್ರಿಯೆ ಇದೆ.ಮತದಾನಕ್ಕೆ ಭಾರತ ಚುನಾವಣಾ ಆಯೋಗ ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿದೆ.ವಿದ್ಯನ್ಮಾನ ಮತಯಂತ್ರಗಳ ಮೂಲಕ ಮತದಾನ ನಡೆಯುವ ಪದ್ದತಿ ಅನುಸರಿಸಲಾಗುತ್ತಿದೆ.ವಿದ್ಯುನ್ಮಾನ ಯಂತ್ರಗಳ ಮೂಲಕ ಮತದಾನ ಮಾಡುವ ಕುರಿತಂತೆ ಚುನಾವಣಾ ಆಯೋಗದ ವತಿಯಿಂದ ಪ್ರಾತ್ಯಕ್ಷಿಕೆ ಆರಂಭವಾಗಿದೆ.ಮೈಸೂರಿನ ಜಿಲ್ಕಾಧಿಕಾರಿಗಳ ಕಚೇರಿಯಲ್ಲಿ ಪ್ರಾತ್ಯಕ್ಷಿಕೆ ಕೇಂದ್ರ ಸ್ಥಾಪಿಸಲಾಗಿದೆ.ಇಂದಿನಿಂದ ಪ್ರಾತ್ಯಕ್ಷಿಕೆ ಸಹ ಆರಂಭವಾಗಿದೆ.ಈ ಬಾರಿ ವಿದ್ಯನ್ಮಾನ ಮತ ಯಂತ್ರಗಳಲ್ಲಿ ನೂತನ ವ್ಯವಸ್ಥೆ ಅಳವಡಿಸಲಾಗಿದೆ.ಮತಚಲಾಯಿಸಿದಾಗ ಒಂದೇ ಪಕ್ಷಕ್ಕೆ ಮತ ಸೇರುತ್ತಿದೆ ಎಂಬ ಆರೋಪಗಳು ಪ್ರತಿ ಚುನಾವಣೆಯಲ್ಲೂ ಕೇಳಿ ಬರುತ್ತಿತ್ತು.ಇಂತಹ ಆರೋಪಗಳಿಗೆ ಬ್ರೇಕ್ ಹಾಕಲು ಚುನಾವಣಾ ಆಯೋಗ ವಿಶೇಷವಾಗಿ ಮತಯಂತ್ರಗಳನ್ನ ಸಿದ್ದಪಡಿಸಿದೆ.ಮತದಾನ ಮಾಡಿದ ನಂತರ ಯಾವ ಚಿಹ್ನೆಗೆ ಮತ ಚಲಾವಣೆಯಾಗಿದೆ ಎಂದು ಖಚಿತಪಡಿಸಿಕೊಳ್ಳುವ ನೂತನ ವ್ಯವಸ್ಥೆಯನ್ನ ಈ ಬಾರಿಯ ವಿದ್ಯುನ್ಮಾನ ಮತ ಯಂತ್ರಗಳಲ್ಲಿ ಅಳವಡಿಸಲಾಗಿದೆ.ಪ್ರಾತ್ಯಕ್ಷಿಕೆಯಲ್ಲಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.ತಮ್ಮ ಮತ ಯಾವ ಅಭ್ಯರ್ಥಿಗೆ ಸೇರಿದೆ ಎಂದು ಖಚಿತಪಡಿಸಿಕೊಳ್ಳಬಹುದಾಗಿದೆ.ಚುನಾವಣೆಯಲ್ಲಿ ಅಕ್ರಮ ನಡೆಯುತ್ತಿರುವ ಆರೋಪಗಳಿಗೆ ಭಾರತ ಚುನಾವಣಾ ಆಯೋಗ ತಕ್ಕ ಉತ್ತರ ನೀಡಲಿದೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *