ಚುನಾವಣೆ ಎದುರಿಸಲು ಸಜ್ಜಾಗುತ್ತಿದೆ ಜಿಲ್ಲಾಡಳಿತ…ಸಾರ್ವಜನಿಕರಿಗೆ ಮತದಾನ ಪ್ರಾತ್ಯಕ್ಷಿಕೆ ಆರಂಭ…ವಿಶೇಷ ಏನು ಗೊತ್ತಾ…?

ಚುನಾವಣೆ ಎದುರಿಸಲು ಸಜ್ಜಾಗುತ್ತಿದೆ ಜಿಲ್ಲಾಡಳಿತ…ಸಾರ್ವಜನಿಕರಿಗೆ ಮತದಾನ ಪ್ರಾತ್ಯಕ್ಷಿಕೆ ಆರಂಭ…ವಿಶೇಷ ಏನು ಗೊತ್ತಾ…?

ಮೈಸೂರು,ಮಾ7,Tv10 ಕನ್ನಡ
ಯಾವುದೇ ಸಮಯದಲ್ಲಾದ್ರೂ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಲಿದೆ.ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಮೂಲಕ ತಮ್ಮ ಪ್ರಭುಗಳನ್ನ ಆಯ್ಕೆ ಮಾಡುವ ಪ್ರಕ್ರಿಯೆ ಇದೆ.ಮತದಾನಕ್ಕೆ ಭಾರತ ಚುನಾವಣಾ ಆಯೋಗ ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿದೆ.ವಿದ್ಯನ್ಮಾನ ಮತಯಂತ್ರಗಳ ಮೂಲಕ ಮತದಾನ ನಡೆಯುವ ಪದ್ದತಿ ಅನುಸರಿಸಲಾಗುತ್ತಿದೆ.ವಿದ್ಯುನ್ಮಾನ ಯಂತ್ರಗಳ ಮೂಲಕ ಮತದಾನ ಮಾಡುವ ಕುರಿತಂತೆ ಚುನಾವಣಾ ಆಯೋಗದ ವತಿಯಿಂದ ಪ್ರಾತ್ಯಕ್ಷಿಕೆ ಆರಂಭವಾಗಿದೆ.ಮೈಸೂರಿನ ಜಿಲ್ಕಾಧಿಕಾರಿಗಳ ಕಚೇರಿಯಲ್ಲಿ ಪ್ರಾತ್ಯಕ್ಷಿಕೆ ಕೇಂದ್ರ ಸ್ಥಾಪಿಸಲಾಗಿದೆ.ಇಂದಿನಿಂದ ಪ್ರಾತ್ಯಕ್ಷಿಕೆ ಸಹ ಆರಂಭವಾಗಿದೆ.ಈ ಬಾರಿ ವಿದ್ಯನ್ಮಾನ ಮತ ಯಂತ್ರಗಳಲ್ಲಿ ನೂತನ ವ್ಯವಸ್ಥೆ ಅಳವಡಿಸಲಾಗಿದೆ.ಮತಚಲಾಯಿಸಿದಾಗ ಒಂದೇ ಪಕ್ಷಕ್ಕೆ ಮತ ಸೇರುತ್ತಿದೆ ಎಂಬ ಆರೋಪಗಳು ಪ್ರತಿ ಚುನಾವಣೆಯಲ್ಲೂ ಕೇಳಿ ಬರುತ್ತಿತ್ತು.ಇಂತಹ ಆರೋಪಗಳಿಗೆ ಬ್ರೇಕ್ ಹಾಕಲು ಚುನಾವಣಾ ಆಯೋಗ ವಿಶೇಷವಾಗಿ ಮತಯಂತ್ರಗಳನ್ನ ಸಿದ್ದಪಡಿಸಿದೆ.ಮತದಾನ ಮಾಡಿದ ನಂತರ ಯಾವ ಚಿಹ್ನೆಗೆ ಮತ ಚಲಾವಣೆಯಾಗಿದೆ ಎಂದು ಖಚಿತಪಡಿಸಿಕೊಳ್ಳುವ ನೂತನ ವ್ಯವಸ್ಥೆಯನ್ನ ಈ ಬಾರಿಯ ವಿದ್ಯುನ್ಮಾನ ಮತ ಯಂತ್ರಗಳಲ್ಲಿ ಅಳವಡಿಸಲಾಗಿದೆ.ಪ್ರಾತ್ಯಕ್ಷಿಕೆಯಲ್ಲಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.ತಮ್ಮ ಮತ ಯಾವ ಅಭ್ಯರ್ಥಿಗೆ ಸೇರಿದೆ ಎಂದು ಖಚಿತಪಡಿಸಿಕೊಳ್ಳಬಹುದಾಗಿದೆ.ಚುನಾವಣೆಯಲ್ಲಿ ಅಕ್ರಮ ನಡೆಯುತ್ತಿರುವ ಆರೋಪಗಳಿಗೆ ಭಾರತ ಚುನಾವಣಾ ಆಯೋಗ ತಕ್ಕ ಉತ್ತರ ನೀಡಲಿದೆ…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *