ಕೊ.ಆಪರೇಟಿವ್ ಬ್ಯಾಂಕ್ ಮ್ನಾನೇಜರ್ ಆತ್ಮಹತ್ಯೆ…ಐವರ ವಿರುದ್ದ ದೂರು ದಾಖಲು…

ಕೊ.ಆಪರೇಟಿವ್ ಬ್ಯಾಂಕ್ ಮ್ನಾನೇಜರ್ ಆತ್ಮಹತ್ಯೆ…ಐವರ ವಿರುದ್ದ ದೂರು ದಾಖಲು…

  • Crime
  • March 12, 2023
  • No Comment
  • 137

ಕೊ.ಆಪರೇಟಿವ್ ಬ್ಯಾಂಕ್ ಮ್ನಾನೇಜರ್ ಆತ್ಮಹತ್ಯೆ…ಐವರ ವಿರುದ್ದ ದೂರು ದಾಖಲು…

ಉಡುಪಿ,ಮಾ12,Tv10,ಕನ್ನಡ
ಉಡುಪಿ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್ ಸುಬ್ಬಣ್ಣ (50) ಎಂಬವರು ಲಾಡ್ಜ್ ಒಂದರಲ್ಲಿ ಡೆತ್ ನೋಟ್ ಬರೆದು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಅಧ್ಯಕ್ಷ, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ವಾಲ್ ಸುವರ್ಣ ಸೇರಿದಂತೆ ಐವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಿಶಿಷ್ಟ ಜಾತಿಗೆ ಸೇರಿದ ಸುಬ್ಬಣ್ಣ ಮಾ.8ರಂದು ರಾತ್ರಿ ವೇಳೆ ಮಲ್ಪೆಯ ರಾಜ್ ಮಹಲ್ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹದ ಬಳಿ ಡೆತ್ ನೋಟ್ ದೊರಕಿದ್ದು, ಸಾವಿಗೆ ಬ್ಯಾಂಕಿನ ಆಡಳಿತ ಮಂಡಳಿಯ ಒತ್ತಡ ಮೇಲಾಧಿಕಾರಿಯ ಅಸಹಕಾರ ಮತ್ತು ಸಾಲಗಾರನ ಮೋಸದ ನಡವಳಿಕೆ ಕಾರಣ ಎಂದು ದೂರಲಾಗಿದೆ.
ಬ್ಯಾಂಕಿನ ಅಧ್ಯಕ್ಷ ಯಶಪಾಲ್ ಸುವರ್ಣ, ಆಡಳಿತ ನಿರ್ದೇಶಕ ಜಗದೀಶ್ ಮೊಗವೀರ, ಮಾಜಿ ಆಡಳಿತ ನಿರ್ದೇಶಕ ಜೆ.ಕೆ ಸೀನ ಗಂಗೊಳ್ಳಿ, ಮ್ಯಾನೇಜರ್ ಸಾರಿಕಾ, ಸಾಲಗಾರ ರಿಯಾಝ್ ಎಂಬವರು ನೀಡಿದ ಮಾನಸಿಕ ಒತ್ತಡ ಹಾಗೂ ಬ್ಯಾಂಕಿನ ಆಡಳಿತ ಮಂಡಳಿ ಸಾಲ ವಸೂಲಾತಿಯನ್ನು ಮಾಡಿ ಕೊಡದಿದ್ದರೆ ನಿನ್ನ ಮನೆಯನ್ನಾದರೂ ಮಾರಿ ಬ್ಯಾಂಕಿನ ಸಾಲ ತೀರಿಸಬೇಕು. ಇಲ್ಲದಿದ್ದರೆ ನಿನ್ನ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮೃತರ ಸಹೋದರ ಸುರೇಶ್ ಕೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಾವಿನ ಬಗ್ಗೆ ಸಂಶಯ ಇದ್ದು, ಆದುದರಿಂದ ಆಡಳಿತ ಮಂಡಳಿ ಮತ್ತು ಸಾಲಗಾರನ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಅದರಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *