ಕೊ.ಆಪರೇಟಿವ್ ಬ್ಯಾಂಕ್ ಮ್ನಾನೇಜರ್ ಆತ್ಮಹತ್ಯೆ…ಐವರ ವಿರುದ್ದ ದೂರು ದಾಖಲು…

ಕೊ.ಆಪರೇಟಿವ್ ಬ್ಯಾಂಕ್ ಮ್ನಾನೇಜರ್ ಆತ್ಮಹತ್ಯೆ…ಐವರ ವಿರುದ್ದ ದೂರು ದಾಖಲು…

  • Crime
  • March 12, 2023
  • No Comment
  • 194

ಕೊ.ಆಪರೇಟಿವ್ ಬ್ಯಾಂಕ್ ಮ್ನಾನೇಜರ್ ಆತ್ಮಹತ್ಯೆ…ಐವರ ವಿರುದ್ದ ದೂರು ದಾಖಲು…

ಉಡುಪಿ,ಮಾ12,Tv10,ಕನ್ನಡ
ಉಡುಪಿ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್ ಸುಬ್ಬಣ್ಣ (50) ಎಂಬವರು ಲಾಡ್ಜ್ ಒಂದರಲ್ಲಿ ಡೆತ್ ನೋಟ್ ಬರೆದು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಅಧ್ಯಕ್ಷ, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ವಾಲ್ ಸುವರ್ಣ ಸೇರಿದಂತೆ ಐವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಿಶಿಷ್ಟ ಜಾತಿಗೆ ಸೇರಿದ ಸುಬ್ಬಣ್ಣ ಮಾ.8ರಂದು ರಾತ್ರಿ ವೇಳೆ ಮಲ್ಪೆಯ ರಾಜ್ ಮಹಲ್ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹದ ಬಳಿ ಡೆತ್ ನೋಟ್ ದೊರಕಿದ್ದು, ಸಾವಿಗೆ ಬ್ಯಾಂಕಿನ ಆಡಳಿತ ಮಂಡಳಿಯ ಒತ್ತಡ ಮೇಲಾಧಿಕಾರಿಯ ಅಸಹಕಾರ ಮತ್ತು ಸಾಲಗಾರನ ಮೋಸದ ನಡವಳಿಕೆ ಕಾರಣ ಎಂದು ದೂರಲಾಗಿದೆ.
ಬ್ಯಾಂಕಿನ ಅಧ್ಯಕ್ಷ ಯಶಪಾಲ್ ಸುವರ್ಣ, ಆಡಳಿತ ನಿರ್ದೇಶಕ ಜಗದೀಶ್ ಮೊಗವೀರ, ಮಾಜಿ ಆಡಳಿತ ನಿರ್ದೇಶಕ ಜೆ.ಕೆ ಸೀನ ಗಂಗೊಳ್ಳಿ, ಮ್ಯಾನೇಜರ್ ಸಾರಿಕಾ, ಸಾಲಗಾರ ರಿಯಾಝ್ ಎಂಬವರು ನೀಡಿದ ಮಾನಸಿಕ ಒತ್ತಡ ಹಾಗೂ ಬ್ಯಾಂಕಿನ ಆಡಳಿತ ಮಂಡಳಿ ಸಾಲ ವಸೂಲಾತಿಯನ್ನು ಮಾಡಿ ಕೊಡದಿದ್ದರೆ ನಿನ್ನ ಮನೆಯನ್ನಾದರೂ ಮಾರಿ ಬ್ಯಾಂಕಿನ ಸಾಲ ತೀರಿಸಬೇಕು. ಇಲ್ಲದಿದ್ದರೆ ನಿನ್ನ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮೃತರ ಸಹೋದರ ಸುರೇಶ್ ಕೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಾವಿನ ಬಗ್ಗೆ ಸಂಶಯ ಇದ್ದು, ಆದುದರಿಂದ ಆಡಳಿತ ಮಂಡಳಿ ಮತ್ತು ಸಾಲಗಾರನ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಅದರಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *