ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದು ಮೀಟಿಂಗ್…ಜಿಟಿಡಿ ಹಣೆಯಲು ತಂತ್ರ ರೂಪಿಸುತ್ತಿದ್ದಾರೆ ಮಾಜಿ ಸಿಎಂ…?

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದು ಮೀಟಿಂಗ್…ಜಿಟಿಡಿ ಹಣೆಯಲು ತಂತ್ರ ರೂಪಿಸುತ್ತಿದ್ದಾರೆ ಮಾಜಿ ಸಿಎಂ…?

ಮೈಸೂರು,ಮಾ13,Tv10 ಕನ್ನಡ
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ.ಚುನಾವಣೆ ಇನ್ನೂ ಘೋಷಣೆ ಆಗುವ ಮುನ್ನವೇ ಮಾಜಿ ಸಿಎಂ ಸಿದ್ದರಾಮಯ್ಯ ಸೋಲುಂಡ ಕ್ಷೇತ್ರದಲ್ಲಿ ಆಪ್ತರ ಸಭೆಯಲ್ಲಿ ಭಾಗವಹಿಸಿದ್ದಾರೆ.
ಚಾಮುಂಡೇಶ್ವರಿ ಸೋಲನ್ನು ಸವಾಲಾಗಿ ತೆಗೆದುಕೊಂಡ ಸಿದ್ದು ಈ ಬಾರಿ ಜಿಟಿಡಿ ಯನ್ನ ಸೋಲಿಸಲು ತಂತ್ರ ಹಣೆಯುತ್ತಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಹೈವೋಲ್ಟೇಜ್ ಮೀಟಿಂಗ್ ಇದು ಎನ್ನಲಾಗಿದೆ.
ಹಳೇ ಮೈಸೂರು ಭಾಗದಲ್ಲಿ ಚಾಮುಂಡೇಶ್ವರಿ ಪ್ರತಿಷ್ಟಿತ ಕಣವಾಗಿದೆ.ಸಿದ್ದರಾಮಯ್ಯ ರವರಿಗೆ ಭವಿಷ್ಯ ಕೊಟ್ಟ ಕ್ಷೇತ್ರ ಇದಾಗಿದೆ.
ನಗರದ ಖಾಸಗಿ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಭಾಗಿಯಾಗಿದ್ದ ಚಾಮುಂಡೇಶ್ವರಿ ಕ್ಷೇತ್ರದ ನಾಯಕರು ಭಾಗವಹಿಸಿದ್ದಾರೆ.
ಈ ಬಾರಿ ಜಿಟಿಡಿಯನ್ನು ಸೋಲಿಸಲು ಖುದ್ದು ಅಖಾಡಕ್ಕೆ ದುಮುಕಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಳ ಮಟ್ಟದಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ಟಿಕೆಟ್ ಫೈನಲ್‌ ಮಾಡಲು ದೆಹಲಿಗೆ ತೆರಳುವ ಮುನ್ನ ಕ್ಷೇತ್ರದಲ್ಲಿ ಹೈವೋಲ್ಟೇಜ್ ಮೀಟಿಂಗ್ ನಡೆಸಿದ್ದಾರೆ.
ಒಗ್ಗಟ್ಟಿನ ಮಂತ್ರದ ಮೂಲಕ ಚುನಾವಣೆ ಎದುರಿಸಲು ನಾಯಕರು ನಿರ್ಧರಿಸಿದ್ದಾರೆ.
ಯಾರಿಗೇ ಟಿಕೆಟ್ ನೀಡಿದರೂ ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡುವಂತೆ ಆಪ್ತರೊಂದಿಗೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಶಾಸಕ ಜಿ.ಟಿ ದೇವೇಗೌಡರನ್ನ ಸೇಲಿಸಲೇಬೇಕೆಂದು ಪಣ ತೊಟ್ಟಿರುವ ಕೈ ನಾಯಕರ ಈ ಸಭೆ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುತ್ತಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *