ಯುವಕ ಅನುಮಾನಾಸ್ಪದ ಸಾವು…ಅಂತ್ಯಕ್ರಿಯೆ ವೇಳೆ ದೇಹದ ಮೇಲೆ ಗಾಯಗಳು ಪತ್ತೆ…

ಯುವಕ ಅನುಮಾನಾಸ್ಪದ ಸಾವು…ಅಂತ್ಯಕ್ರಿಯೆ ವೇಳೆ ದೇಹದ ಮೇಲೆ ಗಾಯಗಳು ಪತ್ತೆ…

ಹುಣಸೂರು,ಮಾ14,Tv10 ಕನ್ನಡ
ಸಂಭಂಧಿಕರ ಹುಟ್ಟುಹಬ್ಬ ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ಮಲಗಿದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ವಿನಯ್ (22) ಮೃತ ದುರ್ದೈವಿ.ಅಂತ್ಯಕ್ರಿಯೆಗೆ ಸಿದ್ದಪಡಿಸುತ್ತಿದ್ದ ವೇಳೆ ವಿನಯ್ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದೆ.ಪೋಷಕರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಎರಡು ದಿನಗಳ ಹಿಂದೆ ಚಿಲಕುಂದ ಗ್ರಾಮದಲ್ಲಿ ಸಂಭಂಧಿಕರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವಿನಯ್ ಭಾಗವಹಿಸಿದ್ದ.ತನ್ನ ತಾಯಿ ಬಳಿ ಒಂದು ಸಾವಿರ ಪಡೆದು ತೆರಳಿದ್ದ ವಿನಯ್ ಸ್ನೇಹಿತರ ಜೊತೆ ಪಾರ್ಟಿ ಮಾಡಿದ್ದ.ರಾತ್ರಿ ಮನೆಗೆ ಹಿಂದಿರುಗಿದ ವಿನಯ್ ಬೆಳಿಗ್ಗೆ ಶವವಾಗಿದ್ದ.ಕತ್ತಿನಲ್ಲಿ ಸೀರೆ ಸುತ್ತಿಕೊಂಡಿದ್ದ ಸ್ಥತಿಯಲ್ಲಿ ವಿನಯ್ ಶವ ಪತ್ತೆಯಾಗಿತ್ತು.ಸಹಜ ಸಾವೆಂದು ತಿಳಿದ ಪೋಷಕರು ಅಂತ್ಯಕ್ರಿಯೆಗೆ ಸಿದ್ದತೆ ಮಾಡಿಕಡಿದ್ದರು.ಮೃತದೇಹಕ್ಕೆ ಸಂಪ್ರದಾಯವಾಗಿ ಸ್ನಾನ ಮಾಡಿಸುವ ವೇಳೆ ಬೆನ್ನಿನಲ್ಲಿ ಗಾಯದ ಗುರುತು ಪತ್ತೆಯಾಗಿದೆ.ಬಲಗಾಲಿನಲ್ಲಿ ಕಚ್ಚಿದ ಹಲ್ಲಿನ ಗುರುತು ಕಂಡು ಬಂದಿದೆ.ಕೂಡಲೇ ಎಚ್ಚೆತ್ತ ಪೋಷಕರು ಅನುಮಾನ ವ್ಯಕ್ತಪಡಿಸಿ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *