ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ

ಮಂಡ್ಯ: 15 ಕೋಟಿ ವೆಚ್ಚದಲ್ಲಿ ಶ್ರೀರಂಗಪಟ್ಟಣ-ಕೆಆರ್ ಪೇಟೆ- ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ಶ್ರೀರಂಗಪಟ್ಟಣ -ಕೆಆರ್ ಪೇಟೆ-ಅರಸೀಕೆರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ಸಚಿವ ಡಾ.ನಾರಾಯಣಗೌಡ ಅವರು ಲೋಕೋಪಯೋಗಿ ಸಚಿವರ ಗಮನಕ್ಕೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು. ಸಚಿವ ನಾರಾಯಣಗೌಡ ಅವರು ಒತ್ತಾಯದಂತೆ ಕೆಆರ್ ಪೇಟೆ ವ್ಯಾಪ್ತಿಯಲ್ಲಿನ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 15 ಕೋಟಿ ರೂಪಾಯಿ ಬಿಡುಗಡೆ ಮಾಡಿ ಲೋಕೋಪಯೋಗಿ ಇಲಾಖೆಯಿಂದ ಆದೇಶ ಹೊರಡಿಸಲಾಗಿತ್ತು. ಟೆಂಡರ್ ಪ್ರಕ್ರಿಯೆ ಮುಗಿದು ಇಂದು ಡಾಂಬರೀಕರಣ ಆರಂಭವಾಗಿದ್ದು, ಶೀಘ್ರದಲ್ಲೇ ಮುಕ್ತಾಯಗೊಳಿಸಲಾಗುತ್ತದೆ.

ಇದರ ಜೊತೆಗೆ ಶ್ರೀರಂಗಪಟ್ಟಣ to ಅರಸೀಕೆರೆ ನಡುವಿನ ಚತುಷ್ಪತ ರಸ್ತೆಗೆ ಅಭಿವೃದ್ಧಿಗೊಳಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚಿಸಲಾಗಿದೆ. ಅದು ನೀತಿ ಆಯೋಗದ ಕ್ರಮ ಸಂಖ್ಯೆ 67 ರಲ್ಲಿ ಇದ್ದುದರಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆಯಲ್ಲಿ ಈ ಡಾಂಬರೀಕರಣ ವಿಳಂಬವಾಗಿತ್ತು. ಇದೀಗ ಚತುಷ್ಪತ ಹೆದ್ದಾರಿಯಾಗುವರೆಗೂ ರಸ್ತೆಯನ್ನು ಡಾಂಬರೀಕರಣ ಕೈಗೊಂಡು ಸುಸ್ಥಿತಿಯಲ್ಲಿಡಲಾಗುತ್ತದೆ.

ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ- ಅಭಿವೃದ್ಧಿಯೇ ನನ್ನ ಗುರಿ : ಸಚಿವ ಡಾ.ನಾರಾಯಣಗೌಡ

ಶ್ರೀರಂಗಪಟ್ಟಣ- ಚನ್ನರಾಯಪಟ್ಟಣ ರಸ್ತೆ ಹದಗೆಟ್ಟಿದ್ದರಿಂದ ವಾಹನ ಸವಾರರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿದ್ದು 15 ಕೋಟಿ ವೆಚ್ಚದಲ್ಲಿ, ಡಾಂಬರೀಕರಣ ಆರಂಭವಾಗಿದೆ. ಕೆಆರ್ ಪೇಟೆಯ ಸರ್ವಾಂಗೀಣ ಅಭಿವೃದ್ಧಿಗೆ ಪಣ ತೊಟ್ಟಿದ್ದು, ಕೆಲಸವೇ ನನ್ನ ಗುರಿ. ಯಾವುದೇ ರೀತಿಯ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *