*ಇಂದು ಬಾಂಬೆ ರಿಟರ್ನ್ ಡೇಸ್ ಪುಸ್ತಕ ರಿಲೀಸ್…ಸಾಹಿತಿ ವೀರಭದ್ರಪ್ಪ ಬಿಸ್ಲಳ್ಳಿ ಬರೆದ ಬುಕ್

*ಇಂದು ಬಾಂಬೆ ರಿಟರ್ನ್ ಡೇಸ್ ಪುಸ್ತಕ ರಿಲೀಸ್…ಸಾಹಿತಿ ವೀರಭದ್ರಪ್ಪ ಬಿಸ್ಲಳ್ಳಿ ಬರೆದ ಬುಕ್

ಮೈಸೂರು,ಮಾ15,Tv10 ಕನ್ನಡ
ಮೈಸೂರಿನ ಸಾಹಿತಿ ವೀರಭದ್ರಪ್ಪ ಬಿಸ್ಲಳ್ಳಿ ಬರೆದ ಪುಸ್ತಕ ರೂಪದಲ್ಲಿ ಬಾಂಬೆ ಡೇಸ್ ಸ್ಟೋರಿ ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಲೋಕಾರ್ಪಣೆಯಾಗಲಿದೆ.ಆಪರೇಷನ್ ಕಮಲಕ್ಕೆ ಒಳಗಾಗಿದ್ದ 17 ಶಾಸಕರ ಬಗೆಗಿನ ಪುಸ್ತಕ ಇಂದು ಬಿಡುಗಡೆಯಾಗಲಿದೆ.ಸಂಜೆ 6:30 ಕ್ಕೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜೆಡಿಎಸ್, ಕಾಂಗ್ರೆಸ್‌ಗೆ ಕೈ ಕೊಟ್ಟು ಬಾಂಬೆ ಸೇರಿದ್ದ ಶಾಸಕರ ಸ್ಟೋರಿ ಇದಾಗಿದೆ.
ಚುನಾವಣೆ ಹೊಸ್ತಿಲಲ್ಲಿ ಲೋಕಾರ್ಪಣೆಯಾಗುತ್ತಿರುವುದು ಗಮನ ಸೆಳೆಯುತ್ತಿದೆ.
ಬಾಂಬೆ ರಿಟರ್ನ್ ಡೇಸ್ ಸೆನ್ಸ್‌ಲೆಸ್ ಪಾಲಿಟ್ರಿಕ್ಸ್ ಎಂಬ ಶೀರ್ಷಿಕೆಯಲ್ಲಿ ಪುಸ್ತಕ ಬಿಡುಗಡೆಯಾಗಲಿದೆ. ಎಂಎಲ್ಸಿ ವಿಶ್ವನಾಥ್ ರವರ ಪುಸ್ತಕ ಬಿಡುಗಡೆಗೆ ಮುನ್ನವೇ ಮೈಸೂರಿನವರೇ ಆದ ವೀರಭದ್ರಪ್ಪ ಬಿಸ್ಲಳ್ಳಿ ಪುಸ್ತಕ ರಚಿಸಿ
ಬಿಡುಗಡೆ ಮಾಡಲಿದ್ದಾರೆ.
200 ಪುಟಗಳ ಪುಸ್ತಕ ಇದಾಗಿದೆ.ಬಸವನಗುಡಿ ಸುಜಯ್ ಪಬ್ಲಿಕೇಷನ್ಸ್‌ನಲ್ಲಿ ಪುಸ್ತಕ ಮುದ್ರಣಗೊಂಡಿದೆ.
ಮೈಸೂರು ವಿಶ್ವಯ್ಯ ಬುಕ್‌ಹೌಸ್‌ಗೆ ಮಾರಾಟದ ಅನುಮತಿ ನೀಡಲಾಗಿದೆ.
ರಾಜ್ಯ ಉಚ್ಚ ನ್ಯಾಯಾಲಯ ವಕೀಲ ಸಿ.ಎನ್ ಹನುಮಂತರಾಯಪ್ಪ ರಿಂದ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಆಪರೇಷನ್ ಕಮಲಕ್ಕೆ ಒಳಗಾಗಿ ಬಾಂಬೆ ಸೇರಿದ್ದ ಹದಿನೇಳು ಮಂದಿ ಶಾಸಕರು.
ಮುಂಬೈ ಖಾಸಗಿ ಹೊಟೇಲ್‌ನಲ್ಲಿ ಕಳೆದ ದಿನಗಳು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದೇಗೆ, ಸಿದ್ದು ಡಿಕೆಶಿ ಪಾತ್ರ, ಜಾರಕಿಹೊಳಿ ರಾಜೀನಾಮೆ ಪ್ರಕರಣ, ಬಿಎಸ್‌ವೈ ರಾಜೀನಾಮೆ ಹೀಗೆ ಹಲವಾರು ಸಂಗತಿಗಳ ಬಗ್ಗೆ ಉಲ್ಲೇಖವಾಗಿದೆ.
ಮುಂಬೈಗೆ ತೆರಳಿದ್ದ ಕೆಲವರಿಗೆ ಪುಸ್ತಕ ಬಿಡುಗಡೆಗೆ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.
ಬಾಂಬೆ ಮಿತ್ರಮಂಡಳಿಗೆ ಮುಳುವಾಗುತ್ತಾ ಬಾಂಬೆ ರಿಟರ್ನ್ ಡೇಸ್ ಪುಸ್ತಕ..?

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *