*ಇಂದು ಬಾಂಬೆ ರಿಟರ್ನ್ ಡೇಸ್ ಪುಸ್ತಕ ರಿಲೀಸ್…ಸಾಹಿತಿ ವೀರಭದ್ರಪ್ಪ ಬಿಸ್ಲಳ್ಳಿ ಬರೆದ ಬುಕ್

*ಇಂದು ಬಾಂಬೆ ರಿಟರ್ನ್ ಡೇಸ್ ಪುಸ್ತಕ ರಿಲೀಸ್…ಸಾಹಿತಿ ವೀರಭದ್ರಪ್ಪ ಬಿಸ್ಲಳ್ಳಿ ಬರೆದ ಬುಕ್

ಮೈಸೂರು,ಮಾ15,Tv10 ಕನ್ನಡ
ಮೈಸೂರಿನ ಸಾಹಿತಿ ವೀರಭದ್ರಪ್ಪ ಬಿಸ್ಲಳ್ಳಿ ಬರೆದ ಪುಸ್ತಕ ರೂಪದಲ್ಲಿ ಬಾಂಬೆ ಡೇಸ್ ಸ್ಟೋರಿ ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಲೋಕಾರ್ಪಣೆಯಾಗಲಿದೆ.ಆಪರೇಷನ್ ಕಮಲಕ್ಕೆ ಒಳಗಾಗಿದ್ದ 17 ಶಾಸಕರ ಬಗೆಗಿನ ಪುಸ್ತಕ ಇಂದು ಬಿಡುಗಡೆಯಾಗಲಿದೆ.ಸಂಜೆ 6:30 ಕ್ಕೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜೆಡಿಎಸ್, ಕಾಂಗ್ರೆಸ್‌ಗೆ ಕೈ ಕೊಟ್ಟು ಬಾಂಬೆ ಸೇರಿದ್ದ ಶಾಸಕರ ಸ್ಟೋರಿ ಇದಾಗಿದೆ.
ಚುನಾವಣೆ ಹೊಸ್ತಿಲಲ್ಲಿ ಲೋಕಾರ್ಪಣೆಯಾಗುತ್ತಿರುವುದು ಗಮನ ಸೆಳೆಯುತ್ತಿದೆ.
ಬಾಂಬೆ ರಿಟರ್ನ್ ಡೇಸ್ ಸೆನ್ಸ್‌ಲೆಸ್ ಪಾಲಿಟ್ರಿಕ್ಸ್ ಎಂಬ ಶೀರ್ಷಿಕೆಯಲ್ಲಿ ಪುಸ್ತಕ ಬಿಡುಗಡೆಯಾಗಲಿದೆ. ಎಂಎಲ್ಸಿ ವಿಶ್ವನಾಥ್ ರವರ ಪುಸ್ತಕ ಬಿಡುಗಡೆಗೆ ಮುನ್ನವೇ ಮೈಸೂರಿನವರೇ ಆದ ವೀರಭದ್ರಪ್ಪ ಬಿಸ್ಲಳ್ಳಿ ಪುಸ್ತಕ ರಚಿಸಿ
ಬಿಡುಗಡೆ ಮಾಡಲಿದ್ದಾರೆ.
200 ಪುಟಗಳ ಪುಸ್ತಕ ಇದಾಗಿದೆ.ಬಸವನಗುಡಿ ಸುಜಯ್ ಪಬ್ಲಿಕೇಷನ್ಸ್‌ನಲ್ಲಿ ಪುಸ್ತಕ ಮುದ್ರಣಗೊಂಡಿದೆ.
ಮೈಸೂರು ವಿಶ್ವಯ್ಯ ಬುಕ್‌ಹೌಸ್‌ಗೆ ಮಾರಾಟದ ಅನುಮತಿ ನೀಡಲಾಗಿದೆ.
ರಾಜ್ಯ ಉಚ್ಚ ನ್ಯಾಯಾಲಯ ವಕೀಲ ಸಿ.ಎನ್ ಹನುಮಂತರಾಯಪ್ಪ ರಿಂದ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಆಪರೇಷನ್ ಕಮಲಕ್ಕೆ ಒಳಗಾಗಿ ಬಾಂಬೆ ಸೇರಿದ್ದ ಹದಿನೇಳು ಮಂದಿ ಶಾಸಕರು.
ಮುಂಬೈ ಖಾಸಗಿ ಹೊಟೇಲ್‌ನಲ್ಲಿ ಕಳೆದ ದಿನಗಳು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದೇಗೆ, ಸಿದ್ದು ಡಿಕೆಶಿ ಪಾತ್ರ, ಜಾರಕಿಹೊಳಿ ರಾಜೀನಾಮೆ ಪ್ರಕರಣ, ಬಿಎಸ್‌ವೈ ರಾಜೀನಾಮೆ ಹೀಗೆ ಹಲವಾರು ಸಂಗತಿಗಳ ಬಗ್ಗೆ ಉಲ್ಲೇಖವಾಗಿದೆ.
ಮುಂಬೈಗೆ ತೆರಳಿದ್ದ ಕೆಲವರಿಗೆ ಪುಸ್ತಕ ಬಿಡುಗಡೆಗೆ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.
ಬಾಂಬೆ ಮಿತ್ರಮಂಡಳಿಗೆ ಮುಳುವಾಗುತ್ತಾ ಬಾಂಬೆ ರಿಟರ್ನ್ ಡೇಸ್ ಪುಸ್ತಕ..?

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *