ಸಾವಿನಲ್ಲಿ ಒಂದಾದ ತಂದೆಮಗ…ಎಚ್.ಡಿ.ಕೋಟೆಯಲ್ಲಿ ಮನಕಲುಕುವ ಘಟನೆ…

ಸಾವಿನಲ್ಲಿ ಒಂದಾದ ತಂದೆಮಗ…ಎಚ್.ಡಿ.ಕೋಟೆಯಲ್ಲಿ ಮನಕಲುಕುವ ಘಟನೆ…

ಸಾವಿನಲ್ಲಿ ಒಂದಾದ ತಂದೆಮಗ…ಎಚ್.ಡಿ.ಕೋಟೆಯಲ್ಲಿ ಮನಕಲುಕುವ ಘಟನೆ…

ಹೆಚ್.ಡಿ.ಕೋಟೆ,ಮಾ15,Tv10 ಕನ್ನಡ
ತಂದೆಯ ಸಾವಿನ ಬೆನ್ನ ಹಿಂದೆಯೇ ಮಗ ಸಾವನ್ನಪ್ಪಿದ ಮನಕಲುಕುವ ಘಟನೆ ಹೆಚ್.ಡಿ.ಕೋಟೆಯ ಜಕ್ಕಳ್ಳಿ ಕಾಲೋನಿಯಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆ ನಿನ್ನೆ ತಂದೆ ನೇಣಿಗೆ ಶರಣಾದರೆ ತಂದೆ ಸಾವಿನಿಂದ ಮನನೊಂದ ಮಗ ಕೂಡ ನೇಣಿಗೆ ಶರಣಾಗಿದ್ದಾನೆ.
ಜಕ್ಕಳ್ಳಿ ಕಾಲೋನಿಯ ನಾಗೇಗೌಡ ಮತ್ತು ಮಧು ಆತ್ಮಹತ್ಯೆಗೆ ಶರಣಾದ ಅಪ್ಪಮಗ.
ಕೌಟುಂಬಿಕ ಕಲಹದಿಂದ ಬೇಸೆತ್ತಿದ್ದ ತಂದೆ ನಾಗೇಗೌಡ(55) ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ಬೇಳೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದರು.
ತಂದೆ ಸಾವಿನ ಸುದ್ದಿ ತಿಳಿದು ಮನನೊಂದ ಮಗ ಮಧು (24) ತಡರಾತ್ರಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಒಂದೇ ಕುಟುಂಬದ ತಂದೆ ಮಗನ ಎರಡು ಮೃತದೇಹಗಳ ಅಂತ್ಯಸಂಸ್ಕಾರವನ್ನ ಗ್ರಾಮದಲ್ಲಿ ಏಕಕಾಲದಲ್ಲಿ ನೆರವೇರಿಸಲಾಗಿದೆ.ಸಾವಿನಲ್ಲೂ ತಂದೆ ಮಗ ಒಂದಾಗಿದ್ದಾರೆ
ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ದೂರು ನೀಡದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿಲ್ಲ…

Spread the love

Related post

ಆನ್ ಲೈನ್ ಧೋಖಾ: 19 ಕೋಟಿ ಆಮಿಷ ತೋರಿಸಿ 99.50 ಲಕ್ಷಕ್ಕೆ ಉಂಡೆನಾಮ…

ಆನ್ ಲೈನ್ ಧೋಖಾ: 19 ಕೋಟಿ ಆಮಿಷ ತೋರಿಸಿ 99.50 ಲಕ್ಷಕ್ಕೆ…

ಮೈಸೂರು,ಏ25,Tv10 ಕನ್ನಡ ಸ್ಟಾಕ್ಸ್ ಟ್ರೇಡಿಂಗ್ ವ್ಯವಹಾರದಲ್ಲಿ 19 ಕೋಟಿ ಲಾಭಾಂಶ ತೋರಿಸಿ 99.50 ಲಕ್ಷ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.ಮೈಸೂರಿನ ಕನಕದಾಸ ನಗರದ ನಿಚಾಸಿ ಚಿದಾನಂದ್ ಎಂಬುವರು 99.50…
ಕುವೆಂಪುನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಸರಗಳ್ಳನ ಬಂಧನ…3.30 ಲಕ್ಷ ಮೌಲ್ಯದ ಸರ ವಶ…

ಕುವೆಂಪುನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಸರಗಳ್ಳನ ಬಂಧನ…3.30 ಲಕ್ಷ ಮೌಲ್ಯದ ಸರ…

ಮೈಸೂರು,ಏ24,Tv10 ಕನ್ನಡ ವಾಕಿಂಗ್ ಮಾಡುತ್ತಿದ್ದ ವೃದ್ದೆಯ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಚಾಮರಾಜನಗರ ನಿವಾಸಿ ರಂಗಸ್ವಾಮಿ ಸಿಕ್ಕಿಬಿದ್ದ ಸರಗಳ್ಳ.ಬಂಧಿತನಿಂದ 3.30 ಲಕ್ಷ…
ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ ಭಾಗಿ…ಮಕ್ಕಳ ಮುಂದೆಯೇ ಕೃತ್ಯ…

ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ…

ಮೈಸೂರು,ಏ23,Tv10 ಕನ್ನಡ ಮಹಿಳೆ ಸೇರಿದಂತೆ 6 ಮಂದಿ ತಂಡವೊಂದು ಮನೆಗೆ ನುಗ್ಗಿ ಗೃಹಿಣಿಯನ್ನ ಬಲವಂತವಾಗಿ ಎಳೆದೊಯ್ದ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಎಜೆ ಬ್ಲಾಕ್ ನಲ್ಲಿ ನಡೆದಿದೆ.ಮಗ…

Leave a Reply

Your email address will not be published. Required fields are marked *