ಶೇ 50-50 ರಂತೆ ಭೂ ಪರಿಹಾರ ವಿತರಣೆಯಲ್ಲಿ ಅಕ್ರಮ ವಾಸನೆ…ಮುಡಾಗೆ ಚಾಟಿ ಬೀಸಿದ ಸರ್ಕಾರ…

ಶೇ 50-50 ರಂತೆ ಭೂ ಪರಿಹಾರ ವಿತರಣೆಯಲ್ಲಿ ಅಕ್ರಮ ವಾಸನೆ…ಮುಡಾಗೆ ಚಾಟಿ ಬೀಸಿದ ಸರ್ಕಾರ…

ಶೇ 50-50 ರಂತೆ ಭೂ ಪರಿಹಾರ ವಿತರಣೆಯಲ್ಲಿ ಅಕ್ರಮ ವಾಸನೆ…ಮುಡಾಗೆ ಚಾಟಿ ಬೀಸಿದ ಸರ್ಕಾರ…

ಮೈಸೂರು,ಮಾ17,Tv10 ಕನ್ನಡ
ಭೂ ಮಾಲೀಕರಿಗೆ ಶೇ.50-50 ರಂತೆ ಭೂ ಪರಿಹಾರ ನೀಡುವ ವಿಚಾರದಲ್ಲಿ ನಿಯಮಗಳನ್ನ ಹಾಗೂ ಕಾಯ್ದೆಗಳನ್ನ ಗಾಳಿಗೆ ತೂಗುತ್ತಿರುವ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಸರ್ಕಾರ ಚಾಟಿ ಬೀಸಿದೆ.ಬದಲಿ ನಿವೇಶನ ಮಂಜೂರು ಮಾಡುವ ನೆಪದಲ್ಲಿ ನಿಯಮಗಳನ್ನ ಉಲ್ಲಂಘಿಸಿ ಅಭಿವೃದ್ದಿ ಹೊಂದಿದ ಜಾಗಗಳಲ್ಲಿ ಶೇ 50-50 ರಂತೆ ಆಸ್ತಿಗಳನ್ನ ನೀಡುತ್ತಿರುವ ಮುಡಾ ಕ್ರಮಕ್ಕೆ ಬ್ರೇಕ್ ಹಾಕಿದೆ.ಅಗತ್ಯ ಮಾರ್ಗಸೂಚಿ ಸಿದ್ದವಾಗುವವರೆಗೆ ಸಭೆಗಳಲ್ಲಿ ಇಂತಹ ನಿರ್ಣಯ ಕೈಗೊಳ್ಳಬಾರದೆಂದು ಮುಡಾ ಆಯುಕ್ತರಿಗೆ ನಗರಾಭಿವೃದ್ದಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಸತೀಶ್ ಕಬಾಡಿ ಸೂಚನೆ ನೀಡಿದ್ದಾರೆ.

2019 ರಿಂದ 2022 ರವರೆಗೆ ಮುಡಾ ದಲ್ಲಿ ನಡೆದ ಕೆಲವು ಸಭೆಗಳಲ್ಲಿ ಭೂ ಪರಿಹಾರವಾಗಿ ಬದಲಿ ನಿವೇಶನ ಮಂಜೂರು ಮಾಡಲು ತೀರ್ಮಾನಿಸಿ ನಿರ್ಣಯಗಳನ್ನ ಕೈಗೊಂಡಿದೆ.ನಿಯಮ 16(1) ಅನ್ವಯದಂತೆ ಬದಲಿ ನಿವೇಶನ ನೀಡಲು ಅವಕಾಶವಿರುತ್ತದೆ.ಆದ್ರೆ ಕಾಯ್ದೆಗಳನ್ನ ಉಲ್ಲಂಘಿಸಿ ನೀಡುತ್ತಿರುವುದು ಸಹ ಸರ್ಕಾರದ ಗಮನಕ್ಕೆ ಬಂದಿದೆ.ಬದಲಿ ನಿವೇಶನ ಮಂಜೂರು ಮಾಡುವಾಗ ಯಾವ ನಿಯಮಗಳನ್ನ ಅನುಸರಿಸಲಾಗಿದೆ ಎಂಬ ಬಗ್ಗೆ ಟಿಪ್ಪಣಿಯಲ್ಲಿ ಉಲ್ಲೇಖಿಸಿರುವುದಿಲ್ಲ.ಹೀಗಾಗಿ ನಿಯಮಗಳು ಉಲ್ಲಂಘನೆಯಾಗಿದೆ ಎಂಬ ಸರ್ಕಾರಕ್ಕೆ ಧೃಢವಾಗಿರುವ ಹಿನ್ನಲೆ ಅಗತ್ಯ ಮಾರ್ಗಸೂಚಿ ತಯಾರಿಸುವ ವರೆಗೂ ಮುಂದಿನ ಸಭೆಗಳಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಬಾರದೆಂದು ಸೂಚನೆ ನೀಡಿ ಮುಡಾ ಆಯುಕ್ತರಿಗೆ ಪತ್ರ ರವಾನಿಸಿದೆ….

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *