ದೇವರಾಜ ಠಾಣೆ ಪೊಲೀಸರ ಕಾರ್ಯಾಚರಣೆ…ಕಳ್ಳತನವಾಗಿದ್ದ ಮಗು ಕೇವಲ ಐದು ಗಂಟೆಯಲ್ಲಿ ಪತ್ತೆ…ಆರೋಪಿ ಅಂದರ್…

ದೇವರಾಜ ಠಾಣೆ ಪೊಲೀಸರ ಕಾರ್ಯಾಚರಣೆ…ಕಳ್ಳತನವಾಗಿದ್ದ ಮಗು ಕೇವಲ ಐದು ಗಂಟೆಯಲ್ಲಿ ಪತ್ತೆ…ಆರೋಪಿ ಅಂದರ್…

ಮೈಸೂರು,ಮಾ18,Tv10 ಕನ್ನಡ
ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳತನ ಮಾಡಿದ್ದ ಮಗುವನ್ನ ಕೇವಲ 5 ಗಂಟೆಯಲ್ಲಿ ಪತ್ತೆ ಮಾಡಿ ತಾಯಿಗೊಪ್ಪಿಸಿದ ದೇವರಾಜ ಠಾಣೆ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.ಮಗು ಇಲ್ಲದ ಕಾರಣ ಕಳ್ಳತನ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ತಿಳಿಸಿದ್ದಾಳೆ.
ಚೆಲುವಾಂಬ ಆಸ್ಪತ್ರೆ ಯ ವಾರ್ಡ್ ನಲ್ಲಿ ಸುಶ್ರುಷೆ ಪಡೆಯುತ್ತಿದ್ದ ದಸುಮತಿ ಎಂಬುವವರ 11 ದಿನದ ಮಗುವನ್ನು ಅಪರಿಚಿತ ಹೆಂಗಸೊಬ್ಬರು ನಿನ್ನೆ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಮಗುವಿನ ತಂದೆ ಪ್ರೇಮಮಾಜಿಯನ್ನ ಸಂಪರ್ಕಿಸಿ ಸ್ಕ್ಯಾನಿಂಗ್ ಮಾಡಿಸಿಕೊಂಡು ಬರಬೇಕು ಅಲ್ಲಿ ಗಂಡಸರಿಗೆ ಪ್ರವೇಶ ಇಲ್ಲಾ ಎಂದು ಸುಳ್ಳು ಹೇಳಿ ನಂಬಿಸಿ ಮಗುವನ್ನು ಪಡೆದುಕೊಂಡು ಪರಾರಿಯಾಗಿದ್ದಳು. ನಂತರ ಪ್ರೇಮ ಹಾಗೂ ಆಸ್ಪತ್ರೆ ಯ ಸಿಬ್ಬಂದಿಗಳು ಮಗುವನ್ನು ಎಲ್ಲ ಕಡೆ ಹುಡುಕಿ ಸಿಗದೇ ಇದ್ದ ಕಾರಣ ದೇವರಾಜ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ವಿಷಯ ತಿಳಿದು ತಕ್ಷಣ ಆಸ್ಪತ್ರೆ ಧಾವಿಸಿದ ಪೊಲೀಸ್ ಇನ್ಸ್ ಪೆಕ್ಟರ್ ಬಿ. ಶಿವಕುಮಾರ್, ಸಬ್ ಇನ್ಸ್ ಪೆಕ್ಟರ್ ಎಂ. ಜೈ ಕೀರ್ತಿ ಹಾಗೂ ಸಿಬ್ಬಂದಿ ಪ್ರವೀಣ್, ಪ್ರದೀಪ್ ಹಾಗೂ ಸುರೇಶ್ ರವರುಗಳು ಕೂಡಲೇ ಕಾರ್ಯ ಪ್ರವೃತ್ತರಾಗಿ ಆಸ್ಪತ್ರೆ ಯ ಸಿಸಿ ಕ್ಯಾಮರಾ ಪರಿಶೀಲಿಸಿ ಹಾಗೂ ಪ್ರತ್ಯಕ್ಷ ದರ್ಶಿಗಳಿಂದ ಮಾಹಿತಿ ಸಂಗ್ರಹಿಸಿ ಅಪರಿಚಿತ ಮಹಿಳೆ ಹೋಗಿರುವ ದಾರಿಯಲ್ಲಿ ಪರಿಶೀಲನೆ ನಡೆಸಿ ಆಕೆ ಹೋಗಿದ್ದ ಆಟೋ ರಿಕ್ಷಾ ಪತ್ತೆ ಮಾಡಿ ಆಕೆ ಇಳಿದುಕೊಂಡಿದ್ದ ಕುಂಬಾರ ಕೊಪ್ಪಲು ಏರಿಯಾವನ್ನು ಪೂರ್ತಿಯಾಗಿ ಹುಡುಕಾಡಿ ಕೊನೆಗೆ ಆಕೆ ತೆರಳಿದ್ದ ಮನೆಯ ನ್ನು ಪತ್ತೆ ಮಾಡಿ ಮಗುವನ್ನು ರಕ್ಷಣೆ ಮಾಡಿದ್ದಾರೆ. ಮಗು ತಾಯಿಯ ಹಾಲಿಲ್ಲದೆ ನಿತ್ರಾಣವಾಗಿತ್ತು.ತಕ್ಷಣ ಮಗುವನ್ನು ತ್ವರಿತವಾಗಿ ತಾಯಿಗೆ ತಂದು ಒಪ್ಪಿಸಿದ್ದಾರೆ. ತಾಯಿಯ ಹಾಲಿಲ್ಲದೆ ಅಳುತ್ತಿದ್ದ ಕಂದಮ್ಮ ಹಾಗೂ ತನ್ನ ಮಗುವನ್ನು ಕಾಣದೆ ಅತ್ತು ನಿತ್ರಾಣಗೊಂಡಿದ್ದ ಬಾಣಂತಿ ತಾಯಿ ಒಂದಾಗಿದ್ದಾರೆ. ಸ್ಥಳದಲ್ಲಿದ್ದ ಜನರು, ಪೊಲೀಸರ ಕ್ಷಿಪ್ರ ಕಾರ್ಯಚರಣೆಯನ್ನ ಸಾರ್ವಜನಿಕರು ಶ್ಲಾಘಸಿ ಅಭಿನಂದಿಸಿದ್ದಾರೆ.
ಮಗು ಕಳ್ಳತನ ಮಾಡಿದ್ದ ಅಪರಿಚಿತ ಮಹಿಳೆ ಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಆಕೆ ತನಗೆ 7ವರ್ಷ ದಿಂದ ಮಗುವಿಲ್ಲದೇ ಇದ್ದ ಕಾರಣ ಈ ಕೃತ್ಯ ಮಾಡಿದ್ದಾಗಿ ವಿಚಾರಣೆಯಲ್ಲಿ ತಿಳಿಸಿದ್ದಾಳೆ. ತ
ತ್ವರಿತ ಕಾರ್ಯಾಚರಣೆ ಮಾಡಿ ಮಗುವನ್ನು ರಕ್ಷಣೆ ಮಾಡಿ ತಾಯಿಗೊಪ್ಪಿಸಿದ ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಬಿ. ಶಿವಕುಮಾರ್, ಸಬ್ ಇನ್ಸ್ ಪೆಕ್ಟರ್ ಎಂ. ಜೈ ಕೀರ್ತಿ ಹಾಗೂ ಸಿಬ್ಬಂದಿ ಪ್ರವೀಣ್, ಪ್ರದೀಪ್ ಹಾಗೂ ಸುರೇಶ್ ರವರುಗಳ ಕಾರ್ಯ ವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *