ಗ್ರಾಮ ಪಂಚಾಯತಿ ಸ್ವಚ್ಛತಾಗಾರರು ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಗ್ರಾಮ ಪಂಚಾಯತಿ ಸ್ವಚ್ಛತಾಗಾರರು ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಗ್ರಾಮ ಪಂಚಾಯತಿ ಸ್ವಚ್ಛತಾಗಾರರು ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ,ಮಾ,21-ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾಗಾರರು ತಪ್ಪದೇ ಗ್ರಾಮ ಒನ್ ಕೇಂದ್ರದಲ್ಲಿ ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ:ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಮ್ಯಾನ್ಯುಯಲ್ ‌ಸ್ಕ್ಯಾವೆಂಜರ್ ವೃತ್ತಿ ನಿಷೇಧ ಮತ್ತು ಅವರ ಪುನರ್ ಕಾಯ್ದೆ 2013 ರ ಮತ್ತು ನಿಯಮ 2013 ರನ್ನು ಅನುಷ್ಠಾನ ಗೊಳಿಸಿವ ಸಂಬಂಧ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ‌ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿಗಳಲ್ಲಿ 10ಕ್ಕಿಂತ ಮೇಲ್ಪಟ್ಟ ಹೊರಗುತ್ತಿಗೆ ಕಾರ್ಮಿಕರಿದ್ದಲ್ಲಿ ಇಎಸ್ಐ ಹಾಗೂ 20 ಕ್ಕಿಂತ ಮೇಲ್ಪಟ್ಟ ಕಾರ್ಮಿಕರಿದ್ದಲ್ಲಿ ಪಿ.ಎಫ್ ಅನ್ವಯಿಸುತ್ತದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ವರದಿ ನೀಡಿರುತ್ತಾರೆ. ಆರೋಗ್ಯ ಸಮಸ್ಯೆ ಉಂಟಾದ ಸಂದರ್ಭದಲ್ಲಿ ಆಯುಷ್ಮಾನ ಆರೋಗ್ಯ ಯೋಜನೆ ಮೂಲಕ ಸೌಲಭ್ಯ ಪಡೆದುಕೊಳ್ಳಬಹುದು ಎಂದರು.

ಮಂಡ್ಯ ಟೌನ್ ಕುರುಬರ ಹಾಸ್ಟಲ್ ಹಿಂಭಾಗ ವಿನಾಯಕ ಬಡಾವಣೆಯಲ್ಲಿ ರೈಲ್ವೆ ಇಲಾಖೆಯಿಂದ ಪೌರಕಾರ್ಮಿಕರ ಮನೆ ತೆರವುಗೊಳಿಸಲು ಮುಂದಾಗಿದ್ದು, ಇವರಿಗೆ ಪುನರ್ವಸತಿ ಕಲ್ಪಿಸುವ ಅವಶ್ಯಕತೆ ಇದೆ. ಇಲ್ಲಿ ವಾಸವಿರುವ ಕುಟುಮಬಗಳ ಸರ್ವೆ ನಗರಸಭೆಯಿಂದ ನಡೆಸಲಾಗಿದ್ದು, ಇವರಿಗೆ ಸ್ಲಮ್ ಬೋಡ್೯ನಲ್ಲಿ ಮನೆಗಳಿದ್ದಲ್ಲಿ ಪ್ರಸ್ತಾವನೆ ಸಲ್ಲಿಸಿ ಮಾಹಿತಿ ಪಡೆದುಕೊಳ್ಳಿ ಎಂದರು.

ಸಭೆಯಲ್ಲಿ ಜಿಲ್ಲಾ ಜಾಗೃತ ಸಮಿತಿ‌ ಸದಸ್ಯರಾದ ನಂಜುಮಡ ಮೌರ್ಯ, ಪಾಪಮ್ಮ, ಕೃಷ್ಣ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಂಜೀವಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಡಾ: ಸಿದ್ದಲಿಂಗೇಶ್, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *