ಗ್ರಾಮ ಪಂಚಾಯತಿ ಸ್ವಚ್ಛತಾಗಾರರು ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಗ್ರಾಮ ಪಂಚಾಯತಿ ಸ್ವಚ್ಛತಾಗಾರರು ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಗ್ರಾಮ ಪಂಚಾಯತಿ ಸ್ವಚ್ಛತಾಗಾರರು ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ,ಮಾ,21-ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾಗಾರರು ತಪ್ಪದೇ ಗ್ರಾಮ ಒನ್ ಕೇಂದ್ರದಲ್ಲಿ ಆಯುಷ್ಮಾನ ಆರೋಗ್ಯ ಕಾಡ್೯ಗೆ ನೊಂದಣಿ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ:ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಮ್ಯಾನ್ಯುಯಲ್ ‌ಸ್ಕ್ಯಾವೆಂಜರ್ ವೃತ್ತಿ ನಿಷೇಧ ಮತ್ತು ಅವರ ಪುನರ್ ಕಾಯ್ದೆ 2013 ರ ಮತ್ತು ನಿಯಮ 2013 ರನ್ನು ಅನುಷ್ಠಾನ ಗೊಳಿಸಿವ ಸಂಬಂಧ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ‌ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿಗಳಲ್ಲಿ 10ಕ್ಕಿಂತ ಮೇಲ್ಪಟ್ಟ ಹೊರಗುತ್ತಿಗೆ ಕಾರ್ಮಿಕರಿದ್ದಲ್ಲಿ ಇಎಸ್ಐ ಹಾಗೂ 20 ಕ್ಕಿಂತ ಮೇಲ್ಪಟ್ಟ ಕಾರ್ಮಿಕರಿದ್ದಲ್ಲಿ ಪಿ.ಎಫ್ ಅನ್ವಯಿಸುತ್ತದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ವರದಿ ನೀಡಿರುತ್ತಾರೆ. ಆರೋಗ್ಯ ಸಮಸ್ಯೆ ಉಂಟಾದ ಸಂದರ್ಭದಲ್ಲಿ ಆಯುಷ್ಮಾನ ಆರೋಗ್ಯ ಯೋಜನೆ ಮೂಲಕ ಸೌಲಭ್ಯ ಪಡೆದುಕೊಳ್ಳಬಹುದು ಎಂದರು.

ಮಂಡ್ಯ ಟೌನ್ ಕುರುಬರ ಹಾಸ್ಟಲ್ ಹಿಂಭಾಗ ವಿನಾಯಕ ಬಡಾವಣೆಯಲ್ಲಿ ರೈಲ್ವೆ ಇಲಾಖೆಯಿಂದ ಪೌರಕಾರ್ಮಿಕರ ಮನೆ ತೆರವುಗೊಳಿಸಲು ಮುಂದಾಗಿದ್ದು, ಇವರಿಗೆ ಪುನರ್ವಸತಿ ಕಲ್ಪಿಸುವ ಅವಶ್ಯಕತೆ ಇದೆ. ಇಲ್ಲಿ ವಾಸವಿರುವ ಕುಟುಮಬಗಳ ಸರ್ವೆ ನಗರಸಭೆಯಿಂದ ನಡೆಸಲಾಗಿದ್ದು, ಇವರಿಗೆ ಸ್ಲಮ್ ಬೋಡ್೯ನಲ್ಲಿ ಮನೆಗಳಿದ್ದಲ್ಲಿ ಪ್ರಸ್ತಾವನೆ ಸಲ್ಲಿಸಿ ಮಾಹಿತಿ ಪಡೆದುಕೊಳ್ಳಿ ಎಂದರು.

ಸಭೆಯಲ್ಲಿ ಜಿಲ್ಲಾ ಜಾಗೃತ ಸಮಿತಿ‌ ಸದಸ್ಯರಾದ ನಂಜುಮಡ ಮೌರ್ಯ, ಪಾಪಮ್ಮ, ಕೃಷ್ಣ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಂಜೀವಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಡಾ: ಸಿದ್ದಲಿಂಗೇಶ್, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Related post

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ ವಂಚನೆ ಪ್ರಕರಣ ದಾಖಲು…

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…

ಮೈಸೂರು,ಮೇ15,Tv10 ಕನ್ನಡ ವ್ಯವಹಾರದ ನಿಮಿತ್ತ ನೀಡಿದ್ದ ಮುಂಗಡ ಹಣಕ್ಕೆ ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನಲೆ ಮೈಸೂರು ಮಹಾನಗರ ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…
ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…

Leave a Reply

Your email address will not be published. Required fields are marked *