ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾ,ಮಾ22,Tv10 ಕನ್ನಡ
ಮಂಡ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್ ಆರಂಭವಾಗಿದೆ.
ಶಿಸ್ತಿನ ಪಕ್ಷದಿಂದ ಆಮಿಷದ ರಾಜಕಾರಣ ಆರೋಪ ಕೇಳಿ ಬಂದಿದೆ.
ಬಿಜೆಪಿ ಟಿಕೆಟ್ ಆಕಾಂಕ್ಷಿಯಿಂದ ಉಡುಗೊರೆ ಹಂಚಿಕೆ ಆರೋಪ ಕೇಳಿಬಂದಿದೆ.
ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮತದಾರರಿಗೆ ಆಮಿಷ ಒಡ್ಡಿದ್ದಾರೆ.ಎರಡು ಕಡೆ ಪ್ರತ್ಯೇಕ ದಾಳಿ ನಡೆದಿದ್ದು
600ಕ್ಕೂ ಹೆಚ್ಚು ಬ್ಯಾಗ್ ಗಳನ್ನ ವಶಕ್ಕೆ ಪಡೆಯಲಾಗಿದೆ.
ಆಕಾಂಕ್ಷಿ ಭಾವಚಿತ್ರ ಇರುವ ಬ್ಯಾಗ್ ಜೊತೆ ಅಪಾರ ಪ್ರಮಾಣದ ಉಡುಗೊರೆ ಸೀಜ್ ಮಾಡಲಾಗಿದೆ.
ಮಹಿಳೆಯರಿಗೆ ಹಂಚಲು ಇಟ್ಟಿದ್ದ ಸೀರೆ, ತಟ್ಟೆ, ಅರಿಶಿಣ-ಕುಂಕುಮ ಇರುವ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ.ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ, ನೇರಳಕೆರೆ ಗ್ರಾಮಗಳಲ್ಲಿ ಪ್ರತ್ಯೇಕ ದಾಳಿ ನಡೆದಿದೆ.
ನೇರಳೆಕೆರೆ ಗ್ರಾಮದ ಬಿಜೆಪಿ ಮುಖಂಡ ಜವರೇಗೌಡರ ಮನೆಯಲ್ಲಿದ್ದ 400 ಬ್ಯಾಗ್ ವಶಕ್ಕೆ ಪಡೆಯಲಾಗಿದೆ.
ಕೊಡಿಯಾಲದ ರೈಸ್ ಮಿಲ್ ಒಂದರಲ್ಲಿ 180 ಬ್ಯಾಗ್ ವಶಕ್ಕೆ ಪಡೆಯಲಾಗಿದೆ.
ಟಿಕೆಟ್ ಆಕಾಂಕ್ಷಿ ಭಾವಚಿತ್ರ ಇರುವ ಬ್ಯಾಗ್ ನಲ್ಲಿದ್ದ ಸೀರೆ, ತಟ್ಟೆ, ಅರಿಶಿಣ ಕುಂಕುಮ ವಶಕ್ಕೆ ಪಡೆಯಲಾಗಿದೆ.
ಮನೆ ಮಾಲೀಕ, ರೈಸ್ ಮಿಲ್ ಮಾಲೀಕನ ವಿರುದ್ಧ
ಅರಕೆರೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *