ಶಾಸಕ ಮಂಜುನಾಥ್ ವಿರುದ್ದ ಗೂಂಡಾಗಿರಿ ಆರೋಪ…ಕುರುಬ ಸಮಾಜದ ಮುಖಂಡರಿಂದ ದೂರು…

ಶಾಸಕ ಮಂಜುನಾಥ್ ವಿರುದ್ದ ಗೂಂಡಾಗಿರಿ ಆರೋಪ…ಕುರುಬ ಸಮಾಜದ ಮುಖಂಡರಿಂದ ದೂರು…

  • Politics
  • March 24, 2023
  • No Comment
  • 190

ಶಾಸಕ ಮಂಜುನಾಥ್ ವಿರುದ್ದ ಗೂಂಡಾಗಿರಿ ಆರೋಪ…ಕುರುಬ ಸಮಾಜದ ಮುಖಂಡರಿಂದ ದೂರು…

ಹುಣಸೂರು,ಮಾ24,Tv10 ಕನ್ನಡ
ಶಿಷ್ಠಾಚಾರ ಪಾಲನೆ ಮಾಡದ ಹುಣಸೂರು ಶಾಸಕ ಹೆಚ್.ಪಿ.ಮಂಜುನಾಥ್ ರವರಿಗೆ ಪ್ರಶ್ನಿಸಿದ ಕುರುಬ ಸಮಾಜದ ಮುಖಂಡನಿಗೆ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದು ಹಾಗೂ ಗೂಂಡಾಗಿರಿ ಪ್ರದರ್ಶಿಸಿದರೆಂದ ಆರೋಪಿಸಿ ಹುಣಸೂರು ಉಪವಿಭಾಗಾಧಿಕಾರಿಗಳಿಗೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.ಮಾರ್ಚ್ 16 ರಂದು ಹುಣಸೂರಿನ ಕಲ್ಕುಣಿಕೆ ವೃತ್ತದಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಗುದ್ದಲಿಪೂಜೆ ನೆರವೇರಿಸಲು ಆಗಮಿಸಿದ ಶಾಸಕ ಮಂಜುನಾಥ್ ಶಿಷ್ಠಾಚಾರ ಪಾಲಿಸಿಲ್ಲವೆಂದು ಆರೋಪಿಸಿ ಸ್ಥಳದಲ್ಲಿದ್ದ ಅಧಿಕಾರಿಯನ್ನ ಕುರುಬಸಮಾಜದ ಮುಖಂಡರಾದ ಗಣೇಶ್ ಕುಮಾರ್ ಪ್ರಶ್ನಿಸಿದ್ದರು.ಈ ವೇಳೆ ಶಾಸಕ ಮಂಜುನಾಥ್ ಅವ್ಯಾಚ ಶಬ್ದಗಳಿಂದ ನಿಂದಿಸಿ ಗೂಂಡಾಗಿರಿ ಪ್ರದರ್ಶಿಸಿದರೆಂದು ಆರೋಪಿಸಿ ಗಣೇಶ್ ಕುಮಾರ್ ಹಾಗೂ ಕುರುಬಸಮಾಜದ ಮುಖಂಡರು ಇಂದು ಹುಣಸೂರು ಉಪವಿಭಾಗಾಧಿಕಾರಿಗಳಿಗೆ ದೂರು ನೀಡಿದ್ದಾರೆ.ಗೂಂಡಾಗಿರಿ ಪ್ರದರ್ಶಿಸಿ ಅವ್ಯಾಚ ಶಬ್ದಗಳಿಂದ ನಿಂದಿಸಿದ ಶಾಸಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಅಲ್ಲದೆ ಮುಂಬರುವ ಕಾರ್ಯಕ್ರಮಗಳಲ್ಲಿ ಶಿಷ್ಠಾಚಾರ ಪಾಲಿಸುವಂತೆ ಸೂಚನೆ ನೀಡುವಂತೆ ಕುರುಬ ಸಮಾಜದ ಮುಖಂಡರು ದೂರು ನೀಡಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *