ಮಠದ ಚಿನ್ನದ ತಟ್ಟೆ ಗಿರವಿ ಇಟ್ಟ ಪ್ರಕರಣ…ಆರೋಪ ಸಾಬೀತು…ಮೂವರಿಗೆ ದಂಡ ವಿಧಿಸಿದ ನ್ಯಾಯಾಲಯ…

ಮಠದ ಚಿನ್ನದ ತಟ್ಟೆ ಗಿರವಿ ಇಟ್ಟ ಪ್ರಕರಣ…ಆರೋಪ ಸಾಬೀತು…ಮೂವರಿಗೆ ದಂಡ ವಿಧಿಸಿದ ನ್ಯಾಯಾಲಯ…

ಮೈಸೂರು,ಮಾ24,Tv10 ಕನ್ನಡ
ಸೋಸಲೆ ಮಠಕ್ಕೆ ಸೇರಿದ ಚಿನ್ನದ ತಟ್ಟೆಗಳನ್ನ ಗಿರವಿ ಇಟ್ಟ ಆರೋಪ ಸಾಬೀತಾದ ಹಿನ್ನಲೆ ಆಡಳತಾಧಿಕಾರಿ ಸೇರಿದಂತೆ ಮೂವರಿಗೆ ಮೈಸೂರು ನ್ಯಾಯಾಲಯ ದಂಡ ವಿಧಿಸಿದೆ.ಕೃಷ್ಣಮೂರ್ತಿ ಪುರಂ ನಲ್ಲಿರುವ ಸೋಸಲೆ ಶ್ರೀ ವ್ಯಾಸರಾಜ ಮಠದ ಹಿಂದಿನ ಸ್ವಾಮೀಜಿಗಳಾದ ಶ್ರೀ ವಿದ್ಯಾಮನೋಹರ ತೀರ್ಥ,ಇವರ ತಾಯಿ ಶ್ರೀಮತಿ ಹಾಗೂ ಆಡಳಿತಾಧಿಕಾರಿ ನಟರಾಜ್ ರವರ ಮೇಲಿದ್ದ ಆರೋಪ ಸಾವ
ಬೀತಾಗಿದೆ.ಮೈಸೀರಿನ 6 ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ಗುರುರಾಜ ಸೋಮಲಕ್ಕಲವರ್ ರವರು ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ. ಶ್ರೀ ವಿದ್ಯಾ ಮನೋಹರ ತೀರ್ಥ ರವರು ಈ ಹಿಂದೆ ಮಠದ ಸ್ವಾಮೀಜಿಗಳಾಗಿದ್ದ ಸಮಯದಲ್ಲಿ ಮಠಕ್ಕೆ ಸೇರಿದ ಎರಡು ಚಿನ್ನದ ತಟ್ಟೆಗಳನ್ನ ದೇವರಾಜ ಅರಸ್ ರಸ್ತೆಯಲ್ಲಿರುವ ಖಾಸಗಿ ಗಿರವಿ ಅಂಗಡಿಯಲ್ಲಿ ಗಿರವಿ ಇಟ್ಟು 5 ಲಕ್ಷ ಸಾಲ ಪಡೆದಿದ್ದರು.ಬೆಂಗಳೂರಿನ ನಿವಾಸಿ ನರೇಂದ್ರ ಎಂಬುವರು ಈ ವಿಚಾರವನ್ನ ಬಯಲಿಗೆಳೆದು ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಎರಡೂ ಕಡೆಯ ವಾದ ವಿವಾದಗಳನ್ನ ಆಲಿಸಿದ ನ್ಯಾಯಾಧೀಶರು ಆರೋಪಿಗಳನ್ನ ಅಪರಾಧಿಗಳೆಂದು ಪರಿಗಣಿಸಿ ದಂಡ ವಿಧಿಸಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *