ಮೈಸೂರು ನಗರ ಪೊಲೀಸರಿಂದ 27.29 ಲಕ್ಷ ಮೌಲ್ಯದ ಮಾದಕ ದ್ರವ್ಯಗಳು ನಾಶ…

ಮೈಸೂರು ನಗರ ಪೊಲೀಸರಿಂದ 27.29 ಲಕ್ಷ ಮೌಲ್ಯದ ಮಾದಕ ದ್ರವ್ಯಗಳು ನಾಶ…

ಮೈಸೂರು,ಮಾ24,Tv10 ಕನ್ನಡ
ಮೈಸೂರು ನಗರದ ವಿವಿದ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್.ಕಾಯ್ದೆ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ದ್ರವ್ಯಗಳನ್ನ ನಾಶಪಡಿಸಲಾಗಿದೆ.ಮೈಸೂರು ತಾಲೂಕು ಜಯಪುರ ಹೋಬಳಿ ಗುಜ್ಜೇಗೌಡನ ಪುರ ಗ್ರಾಮದಲ್ಲಿ ನಿಯಮಾನುಸಾರ ಪರಿಸರ ಮಾಲಿನ್ಯವಾಗದಂತೆ ಇನ್ಸಿನಿರೇಟರ್ ಯಂತ್ರದಲ್ಲಿ ಹಾಕಿ ಸುಟ್ಟು ನಾಶಪಡಿಸಲಾಗಿದೆ.23 ಪ್ರಕರಣಗಳಿಗೆ ಸಂಭಂಧಪಟ್ಟಂತೆ 99 kg 122 gm ಗಾಂಜಾ ಹಾಗೂ 37 ಗ್ರಾಂ 679 ಮಿಲಿ ಮಾದಕ ದ್ರವ್ಯಗಳನ್ನ ನಾಶಪಡಿಸಲಾಗಿದೆ.ಇದರ ಒಟ್ಟು ಮೌಲ್ಯ ರೂ 27,29,780/- ಆಗಿದೆ.

ಅಪರಾಧ ಮತ್ತು ಸಂಚಾರದ ಡಿಸಿಪಿ ಎಸ್.ಜಾಹ್ನವಿ,ಸಿಸಿಬಿ ಎಸಿಪಿ ಸಂದೇಶ್ ಕುಮಾರ್,ಸಿಸಿಆರ್ ಬಿ ಪಿಐ ಮಹಮದ್ ಇರ್ಷಾದ್ ,ಪರಿಸರ ಮಾಲಿನ್ಯ ಇಲಾಖೆ ಉಪ ಪರಿಸರ ಅಧಿಕಾರಿ ಜಯಲಕ್ಷ್ಮಿ ಹಾಗೂ ವಿವಿದ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಳ ಸಮ್ಮುಖದಲ್ಲಿ ನಾಶಪಡಿಸಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *