ತವರಿಗೆ ಮರಳಿದ ಮಾಜಿ ಸಿಎಂ ಸಿದ್ದರಾಮಯ್ಯ…ಮೈಸೂರು ಭಾಗದ ಕಾಂಗ್ರೆಸ್ ಗೆ ಹೆಚ್ಚಿದ ಬಲ…

ತವರಿಗೆ ಮರಳಿದ ಮಾಜಿ ಸಿಎಂ ಸಿದ್ದರಾಮಯ್ಯ…ಮೈಸೂರು ಭಾಗದ ಕಾಂಗ್ರೆಸ್ ಗೆ ಹೆಚ್ಚಿದ ಬಲ…

ಮೈಸೂರು,ಮಾ25,Tv10 ಕನ್ನಡ
ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.ಮಾಜಿ ಸಿಎಂ ಸಿದ್ದರಾಮಯ್ಯ ಸೇರದಂತೆ 124 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.ಒಂದು ವಿಚಾರ ಅಂದರೆ ಮಾಜಿ ಸಿಎಂ ಸಿದ್ದರಾಮಯ್ಯ ತವರಿಗೆ ಮರಳಿದ್ದಾರೆ.ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಊಹಾಪೋಹಗಳಿಗೆ ಇಂದು ಅಂತ್ಯ ಹಾಡಲಾಗಿದೆ.ಸಿದ್ದರಾಮಯ್ಯ ತಮ್ಮ ತವರು ಕ್ಷೇತ್ರದ ವರುಣಾದಿಂದ ಸ್ಪರ್ಧಿಸಲಿದ್ದಾರೆ.ತಂದೆಗಾಗಿ ಪುತ್ರ ಡಾ.ಯತೀಂದ್ತ ಸಿದ್ದರಾಮಯ್ಯ ಕ್ಷೇತ್ರ ತ್ಯಾಗ ಮಾಡಿದ್ದಾರೆ.ಸಧ್ಯ ವರುಣಾ ಕ್ಷೇತ್ರದಲ್ಲಿ ಸಿದ್ದು ಅಭಿಮಾನಿಗಳಲ್ಲಿ ಸಂತಸ ಮೂಡಿದೆ.ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿಯುವುದರಿಂದ
ಮೈಸೂರು ಭಾಗದ ಕಾಂಗ್ರೆಸ್ ಗೆ ಬಲ ಹೆಚ್ಚಿದಂತಾಗಿದೆ.
ಹಳೇ ಮೈಸೂರು ಭಾಗದಲ್ಲಿ ಮತ್ತೆ ಕೈ ಬಲಾಢ್ಯವಾಗಲಿದೆ.ಕಳೆದ ಬಾರಿ ಬಾದಾಮಿಯಲ್ಲಿ ಗೆದ್ದ ಕಾರಣ ಬಹುತೇಕ ಸಮಯ ಆ ಕ್ಷೇತ್ರದ ಅಭಿವೃದ್ದಿಗೆ ಸಿದ್ದರಾಮಯ್ಯ ಒತ್ತು ನೀಡಿದ್ದರು.ಇದೀಗ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದರಿಂದ
ಮೈಸೂರು, ಮಂಡ್ಯ, ಚಾಮರಾಜನಗರದ ಅಭ್ಯರ್ಥಿಗಳಿಗೆ ಸಿದ್ದು ಶ್ರೀರಕ್ಷೆಯಾಗಲಿದ್ದಾರೆ.
ಸಿದ್ದರಾಮಯ್ಯರನ್ನೇ ನಂಬಿರುವ ಕೈ ಅಭ್ಯರ್ಥಿಗಳಲ್ಲಿ ಸಂಚಲನ ಮೂಡಿದೆ.
ಕೈ ಅಭ್ಯರ್ಥಿಗಳಿಗೆ ಸಿದ್ದು ವರ್ಚಸ್ಸು, ಪ್ರಭಾವ ವರದಾನವಾಗಲಿದೆ.
ಮೈಸೂರಿನ ಕೈ ಅಭ್ಯರ್ಥಿಗಳಾದ
ಟಿ. ನರಸೀಪುರ ಹೆಚ್.ಸಿ ಮಹದೇವಪ್ಪ
ಕೆ.ಆರ್ ನಗರ ರವಿಶಂಕರ್, ಹುಣಸೂರು ಹೆಚ್.ಪಿ ಮಂಜುನಾಥ್,
ಹೆಚ್.ಡಿ ಕೋಟೆ ಅನಿಲ್ ಚಿಕ್ಕಮಾದು.
ಪಿರಿಯಾಪಟ್ಟಣ ವೆಂಕಟೇಶ್.
ನರಸಿಂಹರಾಜ ತನ್ವೀರ್ ಸೇಠ್‌ಗೆ ಬಲ ಹೆಚ್ಚಿದಂತಾಗಿದೆ.
ತವರು ಜಿಲ್ಲೆಯಲ್ಲಿ ಟಗರು ಮೊಡಿ ಮಾಡಲು ಸಿದ್ದವಾಗುತ್ತಿದೆ.
ಟಗರಿನ ಆಗಮನದಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗುತ್ತಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *