ತವರಿಗೆ ಮರಳಿದ ಮಾಜಿ ಸಿಎಂ ಸಿದ್ದರಾಮಯ್ಯ…ಮೈಸೂರು ಭಾಗದ ಕಾಂಗ್ರೆಸ್ ಗೆ ಹೆಚ್ಚಿದ ಬಲ…

ತವರಿಗೆ ಮರಳಿದ ಮಾಜಿ ಸಿಎಂ ಸಿದ್ದರಾಮಯ್ಯ…ಮೈಸೂರು ಭಾಗದ ಕಾಂಗ್ರೆಸ್ ಗೆ ಹೆಚ್ಚಿದ ಬಲ…

ಮೈಸೂರು,ಮಾ25,Tv10 ಕನ್ನಡ
ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.ಮಾಜಿ ಸಿಎಂ ಸಿದ್ದರಾಮಯ್ಯ ಸೇರದಂತೆ 124 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.ಒಂದು ವಿಚಾರ ಅಂದರೆ ಮಾಜಿ ಸಿಎಂ ಸಿದ್ದರಾಮಯ್ಯ ತವರಿಗೆ ಮರಳಿದ್ದಾರೆ.ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಊಹಾಪೋಹಗಳಿಗೆ ಇಂದು ಅಂತ್ಯ ಹಾಡಲಾಗಿದೆ.ಸಿದ್ದರಾಮಯ್ಯ ತಮ್ಮ ತವರು ಕ್ಷೇತ್ರದ ವರುಣಾದಿಂದ ಸ್ಪರ್ಧಿಸಲಿದ್ದಾರೆ.ತಂದೆಗಾಗಿ ಪುತ್ರ ಡಾ.ಯತೀಂದ್ತ ಸಿದ್ದರಾಮಯ್ಯ ಕ್ಷೇತ್ರ ತ್ಯಾಗ ಮಾಡಿದ್ದಾರೆ.ಸಧ್ಯ ವರುಣಾ ಕ್ಷೇತ್ರದಲ್ಲಿ ಸಿದ್ದು ಅಭಿಮಾನಿಗಳಲ್ಲಿ ಸಂತಸ ಮೂಡಿದೆ.ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿಯುವುದರಿಂದ
ಮೈಸೂರು ಭಾಗದ ಕಾಂಗ್ರೆಸ್ ಗೆ ಬಲ ಹೆಚ್ಚಿದಂತಾಗಿದೆ.
ಹಳೇ ಮೈಸೂರು ಭಾಗದಲ್ಲಿ ಮತ್ತೆ ಕೈ ಬಲಾಢ್ಯವಾಗಲಿದೆ.ಕಳೆದ ಬಾರಿ ಬಾದಾಮಿಯಲ್ಲಿ ಗೆದ್ದ ಕಾರಣ ಬಹುತೇಕ ಸಮಯ ಆ ಕ್ಷೇತ್ರದ ಅಭಿವೃದ್ದಿಗೆ ಸಿದ್ದರಾಮಯ್ಯ ಒತ್ತು ನೀಡಿದ್ದರು.ಇದೀಗ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದರಿಂದ
ಮೈಸೂರು, ಮಂಡ್ಯ, ಚಾಮರಾಜನಗರದ ಅಭ್ಯರ್ಥಿಗಳಿಗೆ ಸಿದ್ದು ಶ್ರೀರಕ್ಷೆಯಾಗಲಿದ್ದಾರೆ.
ಸಿದ್ದರಾಮಯ್ಯರನ್ನೇ ನಂಬಿರುವ ಕೈ ಅಭ್ಯರ್ಥಿಗಳಲ್ಲಿ ಸಂಚಲನ ಮೂಡಿದೆ.
ಕೈ ಅಭ್ಯರ್ಥಿಗಳಿಗೆ ಸಿದ್ದು ವರ್ಚಸ್ಸು, ಪ್ರಭಾವ ವರದಾನವಾಗಲಿದೆ.
ಮೈಸೂರಿನ ಕೈ ಅಭ್ಯರ್ಥಿಗಳಾದ
ಟಿ. ನರಸೀಪುರ ಹೆಚ್.ಸಿ ಮಹದೇವಪ್ಪ
ಕೆ.ಆರ್ ನಗರ ರವಿಶಂಕರ್, ಹುಣಸೂರು ಹೆಚ್.ಪಿ ಮಂಜುನಾಥ್,
ಹೆಚ್.ಡಿ ಕೋಟೆ ಅನಿಲ್ ಚಿಕ್ಕಮಾದು.
ಪಿರಿಯಾಪಟ್ಟಣ ವೆಂಕಟೇಶ್.
ನರಸಿಂಹರಾಜ ತನ್ವೀರ್ ಸೇಠ್‌ಗೆ ಬಲ ಹೆಚ್ಚಿದಂತಾಗಿದೆ.
ತವರು ಜಿಲ್ಲೆಯಲ್ಲಿ ಟಗರು ಮೊಡಿ ಮಾಡಲು ಸಿದ್ದವಾಗುತ್ತಿದೆ.
ಟಗರಿನ ಆಗಮನದಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗುತ್ತಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *