ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ.

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ.

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ.

ಮಂಡ್ಯ,ಮಾ,27:-ಅಲೆಮಾರಿ/ಅರೆ ಅಲೆಮಾರಿ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ವರ್ಗದವರನ್ನು ಗುರುತಿಸಿ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳನ್ನು ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.

ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಗಳ. ಅಲೆಮಾರಿ/ ಅರೆ ಅಲೆಮಾರಿ / ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ಸಾಲ ಸೌಲಭ್ಯ ಕೋರಿರುವ ಅರ್ಜಿದಾರರನ್ನು ಆಯ್ಕೆ ಮಾಡುವ ಸಂಬಂಧ ಅವರು ಇಂದು ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಅಭಿವೃದ್ಧಿ ಪಡಿಸಲು ವಿವಿಧ ಇಲಾಖೆಗಳಲ್ಲಿ ಹಲವಾರು ಯೋಜನೆಗಳಿವೆ. ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ ನೇರ ಸಾಲ ಯೋಜನೆ ಅಡಿ ಒಟ್ಟು 71 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 17 ಫಲಾನುಭವಿಗಳು, ಗಂಗಾ ಕಲ್ಯಾಣ ಯೋಜನೆ ಅಡಿ ಒಟ್ಟು 3 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 2 ಫಲಾನುಭವಿಗಳು, ಉದ್ಯಮ ಶೀಲತಾ ಸಾಲ ಸೌಲಭ್ಯ (2.00 ಲಕ್ಷ) ಯೋಜನೆ ಅಡಿ ಒಟ್ಟು 13 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 4 ಫಲಾನುಭವಿಗಳು , ಉದ್ಯಮ ಶೀಲತಾ ಸಾಲ ಸೌಲಭ್ಯ (3.50 ಲಕ್ಷ) ಯೋಜನೆ ಅಡಿ ಒಟ್ಟು 9 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 3 ಫಲಾನುಭವಿಗಳು, ದ್ವಿಚಕ್ರ ವಾಹನ ಯೋಜನೆ ಅಡಿ ಒಟ್ಟು 6 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 6 ಫಲಾನುಭವಿಗಳು, ಮೈಕ್ರೋ ಫೈನಾನ್ಸ್ ಯೋಜನೆ ಅಡಿ 2 ಗುಂಪುಗಳನ್ನು ಅಯ್ಕೆಯಾಗಿರುತ್ತದೆ ಎಂದರು

ಅದೇ ರೀತಿ ಪರಿಶಿಷ್ಟ ವರ್ಗದ ಸಮುದಾಯದವರಿಗೆ ನೇರ ಸಾಲ ಯೋಜನೆ ಅಡಿ ಒಟ್ಟು 82 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 5 ಫಲಾನುಭವಿಗಳು, ಉದ್ಯಮ ಶೀಲತಾ ಸಾಲ ಸೌಲಭ್ಯ (2.00 ಲಕ್ಷ) ಯೋಜನೆ ಅಡಿ ಒಟ್ಟು 40 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 2 ಫಲಾನುಭವಿಗಳು ಆಯ್ಕೆ ಮಾಡಲಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು

ಹಾಗೆಯೇ ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಯೋಜನೆಗಳ ಅಡಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸೋಣ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಆಡಳಿತ ಕಾರ್ಯದರ್ಶಿ ಬಾಬು.ಎಂ, ಕೇಂದ್ರ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ತುಷಾರರಾಣಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದಶಕರಾದ ಸಿದ್ದಲಿಂಗೇಶ್, ಅಲೆಮಾರಿ ಅಭಿವೃದ್ಧಿ ಕೋಶದ ನಾಮ ನಿರ್ದೇಶಿತ ಸದಸ್ಯರುಗಳಾದ ನವರಂಗ್, ಗೋಪಾಲ್, ವಿಷಕಂಠ, ರವಿಕುಮಾರ್ ಹಾಗೂ ಇನ್ನಿತರರಿದ್ದರು.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *