ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ.

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ.

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯದ ವ್ಯಕ್ತಿಗಳಿಗೆ ಮೊದಲು ಪ್ರಶಸ್ಯ ನೀಡಿ: ಡಾ. ಹೆಚ್.ಎನ್ ಗೋಪಾಲ ಕೃಷ್ಣ.

ಮಂಡ್ಯ,ಮಾ,27:-ಅಲೆಮಾರಿ/ಅರೆ ಅಲೆಮಾರಿ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ವರ್ಗದವರನ್ನು ಗುರುತಿಸಿ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳನ್ನು ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.

ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಗಳ. ಅಲೆಮಾರಿ/ ಅರೆ ಅಲೆಮಾರಿ / ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ಸಾಲ ಸೌಲಭ್ಯ ಕೋರಿರುವ ಅರ್ಜಿದಾರರನ್ನು ಆಯ್ಕೆ ಮಾಡುವ ಸಂಬಂಧ ಅವರು ಇಂದು ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಅಭಿವೃದ್ಧಿ ಪಡಿಸಲು ವಿವಿಧ ಇಲಾಖೆಗಳಲ್ಲಿ ಹಲವಾರು ಯೋಜನೆಗಳಿವೆ. ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ ನೇರ ಸಾಲ ಯೋಜನೆ ಅಡಿ ಒಟ್ಟು 71 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 17 ಫಲಾನುಭವಿಗಳು, ಗಂಗಾ ಕಲ್ಯಾಣ ಯೋಜನೆ ಅಡಿ ಒಟ್ಟು 3 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 2 ಫಲಾನುಭವಿಗಳು, ಉದ್ಯಮ ಶೀಲತಾ ಸಾಲ ಸೌಲಭ್ಯ (2.00 ಲಕ್ಷ) ಯೋಜನೆ ಅಡಿ ಒಟ್ಟು 13 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 4 ಫಲಾನುಭವಿಗಳು , ಉದ್ಯಮ ಶೀಲತಾ ಸಾಲ ಸೌಲಭ್ಯ (3.50 ಲಕ್ಷ) ಯೋಜನೆ ಅಡಿ ಒಟ್ಟು 9 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 3 ಫಲಾನುಭವಿಗಳು, ದ್ವಿಚಕ್ರ ವಾಹನ ಯೋಜನೆ ಅಡಿ ಒಟ್ಟು 6 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 6 ಫಲಾನುಭವಿಗಳು, ಮೈಕ್ರೋ ಫೈನಾನ್ಸ್ ಯೋಜನೆ ಅಡಿ 2 ಗುಂಪುಗಳನ್ನು ಅಯ್ಕೆಯಾಗಿರುತ್ತದೆ ಎಂದರು

ಅದೇ ರೀತಿ ಪರಿಶಿಷ್ಟ ವರ್ಗದ ಸಮುದಾಯದವರಿಗೆ ನೇರ ಸಾಲ ಯೋಜನೆ ಅಡಿ ಒಟ್ಟು 82 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 5 ಫಲಾನುಭವಿಗಳು, ಉದ್ಯಮ ಶೀಲತಾ ಸಾಲ ಸೌಲಭ್ಯ (2.00 ಲಕ್ಷ) ಯೋಜನೆ ಅಡಿ ಒಟ್ಟು 40 ಅರ್ಜಿಗಳು ಸ್ವೀಕರಿಸಿದ್ದು ಅದರಲ್ಲಿ 2 ಫಲಾನುಭವಿಗಳು ಆಯ್ಕೆ ಮಾಡಲಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು

ಹಾಗೆಯೇ ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಯೋಜನೆಗಳ ಅಡಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸೋಣ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಆಡಳಿತ ಕಾರ್ಯದರ್ಶಿ ಬಾಬು.ಎಂ, ಕೇಂದ್ರ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ತುಷಾರರಾಣಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದಶಕರಾದ ಸಿದ್ದಲಿಂಗೇಶ್, ಅಲೆಮಾರಿ ಅಭಿವೃದ್ಧಿ ಕೋಶದ ನಾಮ ನಿರ್ದೇಶಿತ ಸದಸ್ಯರುಗಳಾದ ನವರಂಗ್, ಗೋಪಾಲ್, ವಿಷಕಂಠ, ರವಿಕುಮಾರ್ ಹಾಗೂ ಇನ್ನಿತರರಿದ್ದರು.

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *