ಕೆ.ಆರ್.ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಫೈಟ್…ರಾಮದಾಸ್.ರಾಜೀವ್ ನಡುವೆ ಜಿದ್ದಾಜಿದ್ದಿ…

ಕೆ.ಆರ್.ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಫೈಟ್…ರಾಮದಾಸ್.ರಾಜೀವ್ ನಡುವೆ ಜಿದ್ದಾಜಿದ್ದಿ…

  • Politics
  • March 28, 2023
  • No Comment
  • 175

ಮೈಸೂರು,ಮಾ28,Tv10 ಕನ್ನಡ
ಮೈಸೂರು ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ಗಾಗಿ ಹಾಲಿ ಶಾಸಕ ಎಸ್.ಎ.ರಾಮದಾಸ್ ಹಾಗೂ ಮುಡಾ ಮಾಜಿ ಅಧ್ಯಕ್ಷ ರಾಜೀವ್ ನಡುವೆ ಜಿದ್ದಾಜಿದ್ದಿ ಶುರುವಾಗಿದೆ.ಒಂದೆಡೆಮುಡಾ ಅಧ್ಯಕ್ಷ ಸ್ಥಾನ ಅಲಂಕರಿಸಿ ಮಾಜಿ ಆಗಿದ್ದರೂ
ಟಿಕೆಟ್‌ಗಾಗಿ ಹೆಚ್‌ವಿ ರಾಜೀವ್ ಪಟ್ಟುಬಿಡದೆ ಹೈ ಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ.
ಮತ್ತೊಂದೆಡೆ ಟಿಕೆಟ್ ಪಡೆಯಲು ಹಾಲಿ ಶಾಸಕ ರಾಮದಾಸ್ ಹರಸಹಾಸ ನಡೆಸುತ್ತಿದ್ದಾರೆ.
ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್‌ಗೆ ಟಿಕೆಟ್ ನೀಡುವಂತೆ ಒತ್ತಡ ಹೆಚ್ಚುತ್ತಿದೆ.
ಈಗಾಗಲೇ ರಾಮದಾಸ್ ವಿರುದ್ಧ ಬ್ರಾಹ್ಮಣ, ವೀರಶೈವ ಲಿಂಗಾಯತ ಸಮುದಾಯ ತಿರುಗಿ ಬಿದ್ದಿದೆ.ಒಂದೆಡೆ ರಾಮದಾಸ್‌ಗೆ ಟಿಕೆಟ್ ನೀಡದಂತೆ ಹೈಕಮಾಂಡ್ ಮೇಲೆ ನರಂತರವಾಗಿ ಒತ್ತಡ ಹೆರುತ್ತಿದ್ದರೆ
ಮತ್ತೊಂದೆಡೆ ರಾಜೀವ್‌ಗೆ ಟಿಕೆಟ್ ಸಿಗಲೆಂದು ಅಭಿಮಾನಿಗಳು ದೇವರ ಮೊರೆ ಹೋಗುತ್ತಿದ್ದಾರೆ.ಇಬ್ಬರ ನಾಯಕರ ನಡೆ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಗೊಂದಲ ಮೂಡಿಸಿರುವುದಲ್ಲದೆ
ಕುತೂಹಲ ಹೆಚ್ಚಿಸಿದೆ.ಇಬ್ಬರಲ್ಲಿ
ಯಾರಿಗೆ ಮಣೆ ಹಾಕಲಿದೆ ಹೈಕಮಾಂಡ್…?ಎಂಬ ಪ್ರಶ್ನೆ ಉದ್ಭವವಾಗಿದೆ.ಇಬ್ಬರ ಜಗಳ ಮೂರನೆಯವರಿಗೆ ಟಿಕೆಟ್ ಪಾಲಾಗಲಿದೆಯೇ ಎಂಬ ಆಂಶವೂ ಕ್ಷೇತ್ರದಲ್ಲಿ ಗಂಭೀರವಾಗಿ ಚರ್ಚೆ ನಡೆಯುತ್ತಿದೆ.
2013ರ ಚುನಾವಣೆಯಲ್ಲಿ ಕೆಜಿಪಿಯಿಂದ ಸ್ಪರ್ಧಿಸಿ ರಾಮದಾಸ್ ಸೋಲಿಗೆ ಕಾರಣವಾಗಿದ್ದ
ರಾಜೀವ್ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬೆಂಬಲಿಗ.ಇದೀಗ ಮತ್ತೊಮ್ಮ ರಾಮದಾಸ್‌ಗೆ ಮುಳುವಾಗಲಿದ್ದಾರೆಯೇ ಅಥವಾ
ಕಳೆದ ಬಾರಿ ಬಿಜೆಪಿ ಮುಖಂಡರ ಒತ್ತಡಕ್ಕೆ ಮಣಿದು ಚುನಾವಣೆಯಿಂದ ಹಿಂದೆ ಸರಿದಂತೆ ಈ ಬಾರಿಯೂ ಇಂತಹ ನಿರ್ಧಾರ ಕೈಗೊಳ್ಳುವರೇ ಎಂಬ ಪ್ರಶ್ನೆ ಮೂಡಿದೆ.ಟಿಕೆಟ್ ಗಾಗಿ ಪಟ್ಟು ಹಿಡಿದರುವ ರಾಜೀವ್ ಮತ್ತೊಮ್ಮೆ ಸೋಲಿನ ರುಚಿ ತೋರಿಸಲು ಸಜ್ಜಾಗುತ್ತಿರುವಂತೆ ಭಾಸವಾಗುತ್ತಿದೆ.
ಕೆ.ಆರ್ ಕ್ಷೇತ್ರದಲ್ಲಿ ರಾಮದಾಸ್ ವಿರುದ್ಧ ದಿನೇ ದಿನೇ ಅಸಮಾಧಾನ ಹೆಚ್ಚಾಗುತ್ತಿದೆ. ಕ್ಷೇತ್ರದ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದ್ದರೂ ಬ್ರಾಹ್ಮಣ ಹಾಗೂ ಲಿಂಗಾಯಿತ,ವೀರಶೈವ ವರ್ಗ ಯಾಕೋ ಮುನಿಸಿಕೊಂಡಿದೆ.ನಮ್ಮನ್ನ ಸಂಪೂರ್ಣ ಕಡೆಗಣಿಸಿದ್ದಾರೆಂದು ಈಗಾಗಲೇ ಎರಡೂ ವರ್ಗದ ಜನ ಬೇಸರ ವ್ಯಕ್ತಪಡಿಸಿದ್ದಾರೆ.
ನಾನು ಈ ಬಾರಿ ಟಿಕೆಟ್ ಬಯಸಿದ್ದೇನೆ.
ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ನಮ್ಮ ನಾಯಕರು ನನ್ನ ಬಗ್ಗೆ ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ನನ್ನ ಪರವಾಗಿದ್ದಾರೆ.
ಈಗಾಗಲೇ ಸಾಕಷ್ಟು ಬಾರಿ ಹಾಲಿ ಶಾಸಕರಿಗೆ ಅವಕಾಶ ಕೊಟ್ಟಿದ್ದಾರೆ.
ಈಗ ಕ್ಷೇತ್ರದ ಜನ ಹೊಸ ಮುಖ ಬಯಸಿದ್ದಾರೆ ಎಂದು ರಾಜೀವ್ ಹೇಳಿಕೆ ನೀಡಿದ್ದರೆ ತನಗೇ ಟಿಕೆಟ್ ಗ್ಯಾರೆಂಟಿ ಎಂಬ ವಿಶ್ವಾಸದಲ್ಲಿ ರಾಮದಾಸ್ ಇದ್ದಾರೆ.ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಇಬ್ಬರ ನಾಯಕರಲ್ಲೂ ತಳಮಳ ಹೆಚ್ಚಾಗುತ್ತಿದೆ.ಅಂತಿಮ ಛಾನ್ಸ್ ಯಾರಿಗೆ ಹೈಕಮಾಂಡ್ ಗೆ ಬಿಟ್ಟಿದ್ದು…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *