ಕೆ.ಆರ್.ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಫೈಟ್…ರಾಮದಾಸ್.ರಾಜೀವ್ ನಡುವೆ ಜಿದ್ದಾಜಿದ್ದಿ…

ಕೆ.ಆರ್.ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಫೈಟ್…ರಾಮದಾಸ್.ರಾಜೀವ್ ನಡುವೆ ಜಿದ್ದಾಜಿದ್ದಿ…

  • Politics
  • March 28, 2023
  • No Comment
  • 159

ಮೈಸೂರು,ಮಾ28,Tv10 ಕನ್ನಡ
ಮೈಸೂರು ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ಗಾಗಿ ಹಾಲಿ ಶಾಸಕ ಎಸ್.ಎ.ರಾಮದಾಸ್ ಹಾಗೂ ಮುಡಾ ಮಾಜಿ ಅಧ್ಯಕ್ಷ ರಾಜೀವ್ ನಡುವೆ ಜಿದ್ದಾಜಿದ್ದಿ ಶುರುವಾಗಿದೆ.ಒಂದೆಡೆಮುಡಾ ಅಧ್ಯಕ್ಷ ಸ್ಥಾನ ಅಲಂಕರಿಸಿ ಮಾಜಿ ಆಗಿದ್ದರೂ
ಟಿಕೆಟ್‌ಗಾಗಿ ಹೆಚ್‌ವಿ ರಾಜೀವ್ ಪಟ್ಟುಬಿಡದೆ ಹೈ ಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ.
ಮತ್ತೊಂದೆಡೆ ಟಿಕೆಟ್ ಪಡೆಯಲು ಹಾಲಿ ಶಾಸಕ ರಾಮದಾಸ್ ಹರಸಹಾಸ ನಡೆಸುತ್ತಿದ್ದಾರೆ.
ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್‌ಗೆ ಟಿಕೆಟ್ ನೀಡುವಂತೆ ಒತ್ತಡ ಹೆಚ್ಚುತ್ತಿದೆ.
ಈಗಾಗಲೇ ರಾಮದಾಸ್ ವಿರುದ್ಧ ಬ್ರಾಹ್ಮಣ, ವೀರಶೈವ ಲಿಂಗಾಯತ ಸಮುದಾಯ ತಿರುಗಿ ಬಿದ್ದಿದೆ.ಒಂದೆಡೆ ರಾಮದಾಸ್‌ಗೆ ಟಿಕೆಟ್ ನೀಡದಂತೆ ಹೈಕಮಾಂಡ್ ಮೇಲೆ ನರಂತರವಾಗಿ ಒತ್ತಡ ಹೆರುತ್ತಿದ್ದರೆ
ಮತ್ತೊಂದೆಡೆ ರಾಜೀವ್‌ಗೆ ಟಿಕೆಟ್ ಸಿಗಲೆಂದು ಅಭಿಮಾನಿಗಳು ದೇವರ ಮೊರೆ ಹೋಗುತ್ತಿದ್ದಾರೆ.ಇಬ್ಬರ ನಾಯಕರ ನಡೆ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಗೊಂದಲ ಮೂಡಿಸಿರುವುದಲ್ಲದೆ
ಕುತೂಹಲ ಹೆಚ್ಚಿಸಿದೆ.ಇಬ್ಬರಲ್ಲಿ
ಯಾರಿಗೆ ಮಣೆ ಹಾಕಲಿದೆ ಹೈಕಮಾಂಡ್…?ಎಂಬ ಪ್ರಶ್ನೆ ಉದ್ಭವವಾಗಿದೆ.ಇಬ್ಬರ ಜಗಳ ಮೂರನೆಯವರಿಗೆ ಟಿಕೆಟ್ ಪಾಲಾಗಲಿದೆಯೇ ಎಂಬ ಆಂಶವೂ ಕ್ಷೇತ್ರದಲ್ಲಿ ಗಂಭೀರವಾಗಿ ಚರ್ಚೆ ನಡೆಯುತ್ತಿದೆ.
2013ರ ಚುನಾವಣೆಯಲ್ಲಿ ಕೆಜಿಪಿಯಿಂದ ಸ್ಪರ್ಧಿಸಿ ರಾಮದಾಸ್ ಸೋಲಿಗೆ ಕಾರಣವಾಗಿದ್ದ
ರಾಜೀವ್ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬೆಂಬಲಿಗ.ಇದೀಗ ಮತ್ತೊಮ್ಮ ರಾಮದಾಸ್‌ಗೆ ಮುಳುವಾಗಲಿದ್ದಾರೆಯೇ ಅಥವಾ
ಕಳೆದ ಬಾರಿ ಬಿಜೆಪಿ ಮುಖಂಡರ ಒತ್ತಡಕ್ಕೆ ಮಣಿದು ಚುನಾವಣೆಯಿಂದ ಹಿಂದೆ ಸರಿದಂತೆ ಈ ಬಾರಿಯೂ ಇಂತಹ ನಿರ್ಧಾರ ಕೈಗೊಳ್ಳುವರೇ ಎಂಬ ಪ್ರಶ್ನೆ ಮೂಡಿದೆ.ಟಿಕೆಟ್ ಗಾಗಿ ಪಟ್ಟು ಹಿಡಿದರುವ ರಾಜೀವ್ ಮತ್ತೊಮ್ಮೆ ಸೋಲಿನ ರುಚಿ ತೋರಿಸಲು ಸಜ್ಜಾಗುತ್ತಿರುವಂತೆ ಭಾಸವಾಗುತ್ತಿದೆ.
ಕೆ.ಆರ್ ಕ್ಷೇತ್ರದಲ್ಲಿ ರಾಮದಾಸ್ ವಿರುದ್ಧ ದಿನೇ ದಿನೇ ಅಸಮಾಧಾನ ಹೆಚ್ಚಾಗುತ್ತಿದೆ. ಕ್ಷೇತ್ರದ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದ್ದರೂ ಬ್ರಾಹ್ಮಣ ಹಾಗೂ ಲಿಂಗಾಯಿತ,ವೀರಶೈವ ವರ್ಗ ಯಾಕೋ ಮುನಿಸಿಕೊಂಡಿದೆ.ನಮ್ಮನ್ನ ಸಂಪೂರ್ಣ ಕಡೆಗಣಿಸಿದ್ದಾರೆಂದು ಈಗಾಗಲೇ ಎರಡೂ ವರ್ಗದ ಜನ ಬೇಸರ ವ್ಯಕ್ತಪಡಿಸಿದ್ದಾರೆ.
ನಾನು ಈ ಬಾರಿ ಟಿಕೆಟ್ ಬಯಸಿದ್ದೇನೆ.
ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ನಮ್ಮ ನಾಯಕರು ನನ್ನ ಬಗ್ಗೆ ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ನನ್ನ ಪರವಾಗಿದ್ದಾರೆ.
ಈಗಾಗಲೇ ಸಾಕಷ್ಟು ಬಾರಿ ಹಾಲಿ ಶಾಸಕರಿಗೆ ಅವಕಾಶ ಕೊಟ್ಟಿದ್ದಾರೆ.
ಈಗ ಕ್ಷೇತ್ರದ ಜನ ಹೊಸ ಮುಖ ಬಯಸಿದ್ದಾರೆ ಎಂದು ರಾಜೀವ್ ಹೇಳಿಕೆ ನೀಡಿದ್ದರೆ ತನಗೇ ಟಿಕೆಟ್ ಗ್ಯಾರೆಂಟಿ ಎಂಬ ವಿಶ್ವಾಸದಲ್ಲಿ ರಾಮದಾಸ್ ಇದ್ದಾರೆ.ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಇಬ್ಬರ ನಾಯಕರಲ್ಲೂ ತಳಮಳ ಹೆಚ್ಚಾಗುತ್ತಿದೆ.ಅಂತಿಮ ಛಾನ್ಸ್ ಯಾರಿಗೆ ಹೈಕಮಾಂಡ್ ಗೆ ಬಿಟ್ಟಿದ್ದು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *