ಕೆ.ಆರ್.ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಫೈಟ್…ರಾಮದಾಸ್.ರಾಜೀವ್ ನಡುವೆ ಜಿದ್ದಾಜಿದ್ದಿ…

ಕೆ.ಆರ್.ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಫೈಟ್…ರಾಮದಾಸ್.ರಾಜೀವ್ ನಡುವೆ ಜಿದ್ದಾಜಿದ್ದಿ…

  • Politics
  • March 28, 2023
  • No Comment
  • 144

ಮೈಸೂರು,ಮಾ28,Tv10 ಕನ್ನಡ
ಮೈಸೂರು ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ಗಾಗಿ ಹಾಲಿ ಶಾಸಕ ಎಸ್.ಎ.ರಾಮದಾಸ್ ಹಾಗೂ ಮುಡಾ ಮಾಜಿ ಅಧ್ಯಕ್ಷ ರಾಜೀವ್ ನಡುವೆ ಜಿದ್ದಾಜಿದ್ದಿ ಶುರುವಾಗಿದೆ.ಒಂದೆಡೆಮುಡಾ ಅಧ್ಯಕ್ಷ ಸ್ಥಾನ ಅಲಂಕರಿಸಿ ಮಾಜಿ ಆಗಿದ್ದರೂ
ಟಿಕೆಟ್‌ಗಾಗಿ ಹೆಚ್‌ವಿ ರಾಜೀವ್ ಪಟ್ಟುಬಿಡದೆ ಹೈ ಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ.
ಮತ್ತೊಂದೆಡೆ ಟಿಕೆಟ್ ಪಡೆಯಲು ಹಾಲಿ ಶಾಸಕ ರಾಮದಾಸ್ ಹರಸಹಾಸ ನಡೆಸುತ್ತಿದ್ದಾರೆ.
ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್‌ಗೆ ಟಿಕೆಟ್ ನೀಡುವಂತೆ ಒತ್ತಡ ಹೆಚ್ಚುತ್ತಿದೆ.
ಈಗಾಗಲೇ ರಾಮದಾಸ್ ವಿರುದ್ಧ ಬ್ರಾಹ್ಮಣ, ವೀರಶೈವ ಲಿಂಗಾಯತ ಸಮುದಾಯ ತಿರುಗಿ ಬಿದ್ದಿದೆ.ಒಂದೆಡೆ ರಾಮದಾಸ್‌ಗೆ ಟಿಕೆಟ್ ನೀಡದಂತೆ ಹೈಕಮಾಂಡ್ ಮೇಲೆ ನರಂತರವಾಗಿ ಒತ್ತಡ ಹೆರುತ್ತಿದ್ದರೆ
ಮತ್ತೊಂದೆಡೆ ರಾಜೀವ್‌ಗೆ ಟಿಕೆಟ್ ಸಿಗಲೆಂದು ಅಭಿಮಾನಿಗಳು ದೇವರ ಮೊರೆ ಹೋಗುತ್ತಿದ್ದಾರೆ.ಇಬ್ಬರ ನಾಯಕರ ನಡೆ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಗೊಂದಲ ಮೂಡಿಸಿರುವುದಲ್ಲದೆ
ಕುತೂಹಲ ಹೆಚ್ಚಿಸಿದೆ.ಇಬ್ಬರಲ್ಲಿ
ಯಾರಿಗೆ ಮಣೆ ಹಾಕಲಿದೆ ಹೈಕಮಾಂಡ್…?ಎಂಬ ಪ್ರಶ್ನೆ ಉದ್ಭವವಾಗಿದೆ.ಇಬ್ಬರ ಜಗಳ ಮೂರನೆಯವರಿಗೆ ಟಿಕೆಟ್ ಪಾಲಾಗಲಿದೆಯೇ ಎಂಬ ಆಂಶವೂ ಕ್ಷೇತ್ರದಲ್ಲಿ ಗಂಭೀರವಾಗಿ ಚರ್ಚೆ ನಡೆಯುತ್ತಿದೆ.
2013ರ ಚುನಾವಣೆಯಲ್ಲಿ ಕೆಜಿಪಿಯಿಂದ ಸ್ಪರ್ಧಿಸಿ ರಾಮದಾಸ್ ಸೋಲಿಗೆ ಕಾರಣವಾಗಿದ್ದ
ರಾಜೀವ್ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬೆಂಬಲಿಗ.ಇದೀಗ ಮತ್ತೊಮ್ಮ ರಾಮದಾಸ್‌ಗೆ ಮುಳುವಾಗಲಿದ್ದಾರೆಯೇ ಅಥವಾ
ಕಳೆದ ಬಾರಿ ಬಿಜೆಪಿ ಮುಖಂಡರ ಒತ್ತಡಕ್ಕೆ ಮಣಿದು ಚುನಾವಣೆಯಿಂದ ಹಿಂದೆ ಸರಿದಂತೆ ಈ ಬಾರಿಯೂ ಇಂತಹ ನಿರ್ಧಾರ ಕೈಗೊಳ್ಳುವರೇ ಎಂಬ ಪ್ರಶ್ನೆ ಮೂಡಿದೆ.ಟಿಕೆಟ್ ಗಾಗಿ ಪಟ್ಟು ಹಿಡಿದರುವ ರಾಜೀವ್ ಮತ್ತೊಮ್ಮೆ ಸೋಲಿನ ರುಚಿ ತೋರಿಸಲು ಸಜ್ಜಾಗುತ್ತಿರುವಂತೆ ಭಾಸವಾಗುತ್ತಿದೆ.
ಕೆ.ಆರ್ ಕ್ಷೇತ್ರದಲ್ಲಿ ರಾಮದಾಸ್ ವಿರುದ್ಧ ದಿನೇ ದಿನೇ ಅಸಮಾಧಾನ ಹೆಚ್ಚಾಗುತ್ತಿದೆ. ಕ್ಷೇತ್ರದ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದ್ದರೂ ಬ್ರಾಹ್ಮಣ ಹಾಗೂ ಲಿಂಗಾಯಿತ,ವೀರಶೈವ ವರ್ಗ ಯಾಕೋ ಮುನಿಸಿಕೊಂಡಿದೆ.ನಮ್ಮನ್ನ ಸಂಪೂರ್ಣ ಕಡೆಗಣಿಸಿದ್ದಾರೆಂದು ಈಗಾಗಲೇ ಎರಡೂ ವರ್ಗದ ಜನ ಬೇಸರ ವ್ಯಕ್ತಪಡಿಸಿದ್ದಾರೆ.
ನಾನು ಈ ಬಾರಿ ಟಿಕೆಟ್ ಬಯಸಿದ್ದೇನೆ.
ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ನಮ್ಮ ನಾಯಕರು ನನ್ನ ಬಗ್ಗೆ ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ನನ್ನ ಪರವಾಗಿದ್ದಾರೆ.
ಈಗಾಗಲೇ ಸಾಕಷ್ಟು ಬಾರಿ ಹಾಲಿ ಶಾಸಕರಿಗೆ ಅವಕಾಶ ಕೊಟ್ಟಿದ್ದಾರೆ.
ಈಗ ಕ್ಷೇತ್ರದ ಜನ ಹೊಸ ಮುಖ ಬಯಸಿದ್ದಾರೆ ಎಂದು ರಾಜೀವ್ ಹೇಳಿಕೆ ನೀಡಿದ್ದರೆ ತನಗೇ ಟಿಕೆಟ್ ಗ್ಯಾರೆಂಟಿ ಎಂಬ ವಿಶ್ವಾಸದಲ್ಲಿ ರಾಮದಾಸ್ ಇದ್ದಾರೆ.ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಇಬ್ಬರ ನಾಯಕರಲ್ಲೂ ತಳಮಳ ಹೆಚ್ಚಾಗುತ್ತಿದೆ.ಅಂತಿಮ ಛಾನ್ಸ್ ಯಾರಿಗೆ ಹೈಕಮಾಂಡ್ ಗೆ ಬಿಟ್ಟಿದ್ದು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *