ನೀರು ತುಂಬಿಸಲು ಕೆರೆ ಕೋಡಿಯನ್ನು ಭದ್ರಪಡಿಸಿ: ಡಾ:ಎಚ್ ಎಲ್ ನಾಗರಾಜ್

ನೀರು ತುಂಬಿಸಲು ಕೆರೆ ಕೋಡಿಯನ್ನು ಭದ್ರಪಡಿಸಿ: ಡಾ:ಎಚ್ ಎಲ್ ನಾಗರಾಜ್

ನೀರು ತುಂಬಿಸಲು ಕೆರೆ ಕೋಡಿಯನ್ನು ಭದ್ರಪಡಿಸಿ: ಡಾ:ಎಚ್ ಎಲ್ ನಾಗರಾಜ್

ಮಂಡ್ಯ,ಮಾ28:-ಕಳೆದ ಬಾರಿ ಭಾರಿ ಮಳೆಯ‌ ಹಿನ್ನಲೆ ಕೆರೆ ಕೋಡಿಗಳು ಹೊಡೆದಿರುತ್ತದೆ. ಮಳೆ ನೀರು ತುಂಬಿಸಲು ಕೆರೆ ಕೋಡಿಯನ್ನು ಭದ್ರಪಡಿಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಎಚ್.ಎಲ್ ನಾಗರಾಜ್ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಸಿಲಿನ ತೀವ್ರತೆ ಹೆಚ್ಚಿದ್ದು, ಕೆರೆ ಹಾಗೂ ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ತಮ್ಮ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಪರಿಶೀಲಿಸಿ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಿ. ಕುಡಿಯುವ ನೀರಿನ ಕೊರತೆ ಉಂಟಾಗುವ ಗ್ರಾಮಗಳನ್ನು ಪಟ್ಟಿ ಮಾಡಿಕೊಂಡು ಯೋಜನೆ ಸಿದ್ಧಪಡಿಸಿ ಎಂದರು.

ತೀವ್ರ ಬಿಸಿಲು ಹಾಟ್ ವೇವ್ ನಿಂದ ಉಂಟಾಗುವ ತೊಂದರೆಯ ಬಗ್ಗೆ ಜಿಲ್ಲೆಯಲ್ಲಿ ಕಳೆದ ಸಾಲುಗಳಲ್ಲಿ ಯಾವುದೇ ವರದಿಯಾಗದಿರುವ ಬಗ್ಗೆ ಹಾಗೂ 26 ವಾರಗಳವರೆಗೆ ಜಾನುವಾರುಗಳಿಗೆ ಮೇವಿನ ಸಂಗ್ರಹಣೆ ಇರುವುದನ್ನು ಅಧಿಕಾರಿಗಳಿಂದ ಮಾಹಿತಿ ಪಡೆದು ಖಚಿತ ಪಡಿಸಿಕೊಂಡರು.

ಜಿಲ್ಲೆಯಲ್ಲಿ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರು ಒದಗಿಸಬೇಕಾದ ಸಂದರ್ಭದಲ್ಲಿ ಸರ್ಕಾರ ನೀಡಿರುವ ನಿಯಮಗಳನ್ನು ಪಾಲಿಸಿ ಉಪವಿಭಾಗಾಧಿಕಾರಿಗಳ ಮೂಲಕ ಪಾವತಿಗಾಗಿ ಬಿಲ್ ಸಲ್ಲಿಸಿ ಎಂದರು.

2022-23 ನೇ ಸಾಲಿನಲ್ಲಿ ಮಳೆಹಾನಿಯಾದ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ನೀಡಲಾಗಿರುವ ಹಲವು ದುರಸ್ತಿ ಕಾಮಗಾರಿಗಳು ಪೂರ್ಣಗೊಂಡಿಲ್ಲ. 15 ದಿನದೊಳಗಾಗಿ ದುರಸ್ತಿ ಕಾಮಗಾರಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಪೂರ್ಣಗೊಳಿಸಿ ವರದಿ ನೀಡಬೇಕು ಎಂದು ಎಚ್ಚರಿಕೆ‌ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಹೆಚ್ ಎಸ್ ಕೀರ್ತನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಎನ್ ಧನಂಜಯ, ತಹಶೀಲ್ದಾರ್ ವಿಜಯಕುಮಾರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಂಜುನಾಥ್ ಜಂಟಿ ಕೃಷಿ ನಿರ್ದೇಶಕ ಅಶೋಕ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *