ನೀರು ತುಂಬಿಸಲು ಕೆರೆ ಕೋಡಿಯನ್ನು ಭದ್ರಪಡಿಸಿ: ಡಾ:ಎಚ್ ಎಲ್ ನಾಗರಾಜ್

ನೀರು ತುಂಬಿಸಲು ಕೆರೆ ಕೋಡಿಯನ್ನು ಭದ್ರಪಡಿಸಿ: ಡಾ:ಎಚ್ ಎಲ್ ನಾಗರಾಜ್

ನೀರು ತುಂಬಿಸಲು ಕೆರೆ ಕೋಡಿಯನ್ನು ಭದ್ರಪಡಿಸಿ: ಡಾ:ಎಚ್ ಎಲ್ ನಾಗರಾಜ್

ಮಂಡ್ಯ,ಮಾ28:-ಕಳೆದ ಬಾರಿ ಭಾರಿ ಮಳೆಯ‌ ಹಿನ್ನಲೆ ಕೆರೆ ಕೋಡಿಗಳು ಹೊಡೆದಿರುತ್ತದೆ. ಮಳೆ ನೀರು ತುಂಬಿಸಲು ಕೆರೆ ಕೋಡಿಯನ್ನು ಭದ್ರಪಡಿಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಎಚ್.ಎಲ್ ನಾಗರಾಜ್ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಸಿಲಿನ ತೀವ್ರತೆ ಹೆಚ್ಚಿದ್ದು, ಕೆರೆ ಹಾಗೂ ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ತಮ್ಮ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಪರಿಶೀಲಿಸಿ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಿ. ಕುಡಿಯುವ ನೀರಿನ ಕೊರತೆ ಉಂಟಾಗುವ ಗ್ರಾಮಗಳನ್ನು ಪಟ್ಟಿ ಮಾಡಿಕೊಂಡು ಯೋಜನೆ ಸಿದ್ಧಪಡಿಸಿ ಎಂದರು.

ತೀವ್ರ ಬಿಸಿಲು ಹಾಟ್ ವೇವ್ ನಿಂದ ಉಂಟಾಗುವ ತೊಂದರೆಯ ಬಗ್ಗೆ ಜಿಲ್ಲೆಯಲ್ಲಿ ಕಳೆದ ಸಾಲುಗಳಲ್ಲಿ ಯಾವುದೇ ವರದಿಯಾಗದಿರುವ ಬಗ್ಗೆ ಹಾಗೂ 26 ವಾರಗಳವರೆಗೆ ಜಾನುವಾರುಗಳಿಗೆ ಮೇವಿನ ಸಂಗ್ರಹಣೆ ಇರುವುದನ್ನು ಅಧಿಕಾರಿಗಳಿಂದ ಮಾಹಿತಿ ಪಡೆದು ಖಚಿತ ಪಡಿಸಿಕೊಂಡರು.

ಜಿಲ್ಲೆಯಲ್ಲಿ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರು ಒದಗಿಸಬೇಕಾದ ಸಂದರ್ಭದಲ್ಲಿ ಸರ್ಕಾರ ನೀಡಿರುವ ನಿಯಮಗಳನ್ನು ಪಾಲಿಸಿ ಉಪವಿಭಾಗಾಧಿಕಾರಿಗಳ ಮೂಲಕ ಪಾವತಿಗಾಗಿ ಬಿಲ್ ಸಲ್ಲಿಸಿ ಎಂದರು.

2022-23 ನೇ ಸಾಲಿನಲ್ಲಿ ಮಳೆಹಾನಿಯಾದ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ನೀಡಲಾಗಿರುವ ಹಲವು ದುರಸ್ತಿ ಕಾಮಗಾರಿಗಳು ಪೂರ್ಣಗೊಂಡಿಲ್ಲ. 15 ದಿನದೊಳಗಾಗಿ ದುರಸ್ತಿ ಕಾಮಗಾರಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಪೂರ್ಣಗೊಳಿಸಿ ವರದಿ ನೀಡಬೇಕು ಎಂದು ಎಚ್ಚರಿಕೆ‌ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಹೆಚ್ ಎಸ್ ಕೀರ್ತನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಎನ್ ಧನಂಜಯ, ತಹಶೀಲ್ದಾರ್ ವಿಜಯಕುಮಾರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಂಜುನಾಥ್ ಜಂಟಿ ಕೃಷಿ ನಿರ್ದೇಶಕ ಅಶೋಕ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *