ದೈವ ಸೂಚನೆಗೆ ಬದ್ದರಾದರಾ ಸಿದ್ದರಾಮಯ್ಯ…ಹಾಗೇ ಎನಿಸುತ್ತಿದೆ ಇತ್ತೀಚಿನ ಬೆಳವಣಿಗೆ…

ದೈವ ಸೂಚನೆಗೆ ಬದ್ದರಾದರಾ ಸಿದ್ದರಾಮಯ್ಯ…ಹಾಗೇ ಎನಿಸುತ್ತಿದೆ ಇತ್ತೀಚಿನ ಬೆಳವಣಿಗೆ…

  • Politics
  • March 29, 2023
  • No Comment
  • 175

ದೈವ ಸೂಚನೆಗೆ ಬದ್ದರಾದರಾ ಸಿದ್ದರಾಮಯ್ಯ…ಹಾಗೇ ಎನಿಸುತ್ತಿದೆ ಇತ್ತೀಚಿನ ಬೆಳವಣಿಗೆ…

ಮೈಸೂರು,ಮಾ29,Tv10 ಕನ್ನಡ
ದೇವರು ನೀಡಿದ ಸೂಚನೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬದ್ದರಾಗುತ್ತಿದ್ದಾರಾ ಎಂಬ ಮಾತು ನಿಜವಾಗುತ್ತಿದೆ.ಬೊಟ್ಟೆನಹಳ್ಳಿ ಗ್ರಾಮದ ಆದಿನಾಡು ಚಿನ್ನಮ್ಮ ದೇವಾಲಯದ ಅರ್ಚಕರ ಮೇಲೆ ದೇವಿ ಬಂದು ಎರಡು ಕಡೆ ಸ್ಪರ್ಧಿಸುವಂತೆ ಸೂಚನೆ ನೀಡಿತ್ತು.ದೇವಿಯ ಮಾತಿಗೆ ಪುಷ್ಟಿ ನೀಡುವಂತೆ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ.ದೇವಿ ನೀಡಿದ ಸಲಹೆ ಸಿದ್ದರಾಮಯ್ಯ ಪಾಲಿಸುತ್ತಿದ್ದಾರೆ ಎ ಎಂಬಂತಿದೆ ಇತ್ತೀಚಿನ ರಾಜಕೀಯ ಬಳವಣಿಗೆ.ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ
ಸಿದ್ದರಾಮಯ್ಯನವರ ಹೆಸರನ್ನು ಈಗಾಗಲೇ ವರುಣದಿಂದ ಸ್ಪರ್ಧಿಸಲು ಸೂಚಿಸಿದೆ. ಆದರೆ ಸಿದ್ದರಾಮಯ್ಯನವರು ನಾನು ಕೋಲಾರದಿಂದಲೂ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಸಿದ್ದರಾಮನವರು 2 ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಯೇ ಎಂಬುದಕ್ಕೆ ಕಾಂಗ್ರಸ್ ಹೈ ಕಮಾಂಡ್ ಇನ್ನೂ ಅಧಿಕೃತವಾಗಿ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ.
ಕಾಂಗ್ರೆಸ್ ಪಕ್ಷ ಪ್ರಕಟಿಸಿರುವ ಮೊದಲ ಪಟ್ಟಿಯಲ್ಲಿ ಸಿದ್ದು ಹೆಸರನ್ನು ಸೂಚಿಸಿದೆ. ಆದರೆ ಕೋಲಾರ ಹಾಗೂ ಬಾದಾಮಿಗೆ ಯಾವುದೆ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಿಲ್ಲ.
ಕಾಂಗ್ರೆಸ್ ನ ಈ ನಡೆಯಿಂದ ಸಿದ್ದು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದು ಪಕ್ಕಾ ಎಂಬಂತೆ ಭಾಸವಾಗುತ್ತಿದೆ. ಜನವರಿ ತಿಂಗಳಲ್ಲಿ ಬೊಟ್ಟೆನ ಹಳ್ಳಿ ಗ್ರಾಮದಲ್ಲಿನ ಆದಿನಾಡು ಚಿನ್ನಮ್ಮ ದೇವಸ್ಥಾನಕ್ಕೆ ಸಿದ್ದರಾಮಯ್ಯನವ ಪುತ್ರ ಹಾಗೂ ವರುಣಾ ಶಾಸಕ ಯತೀಂದ್ರ ಅವರು ತೆರಳಿದ್ದಾಗ ದೇವಾಲಯದ ಅರ್ಚಕರ ಮೈಮೇಲೆ ದೇವಿ ಆವಾಹನೆಯಾಗಿ 2 ಕ್ಷೇತ್ರದಲ್ಲಿ ಸಿದ್ದರಾಮಯ್ಯ ನಿಲ್ಲುವಂತೆ ಸೂಚಿಸಿ, ಒಂದೇ ಕ್ಷೇತ್ರದಲ್ಲಿ ನಿಂತರೆ ಸಮಸ್ಯೆ ಎಂದು ಹೇಳಿ ಎರಡು ಕ್ಷೇತ್ರದಲ್ಲಿ ನಿಲ್ಲುವಂತೆ ಸೂಚಿಸಿತ್ತು.ದೇವಿಯ ಸೂಚನೆಯಂತೆ ಸಿದ್ದರಾಮಯ್ಯ ಇದೀಗ ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಅಂದು ಯತೀಂದ್ರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, 2 ಕಡೆ ನಿಲ್ಲುವಂತೆ ದೇವಿ ಹೇಳಿರುವುದು ನಿಜ. ಆದರೆ 2 ಕ್ಷೇತ್ರಗಳಲ್ಲಿ ನಮ್ಮ ತಂದೆ ಅವರು ನಿಲ್ಲುವುದಿಲ್ಲ. ಕೋಲಾರದಿಂದಲೇ ಸ್ಪರ್ಧಿಸಲಿದ್ದಾರೆಂದು ಯತಿಂದ್ರ ಹೇಳಿದ್ದರು.ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಎನ್ನುತ್ತಿದ್ದ ಸಿದ್ದರಾಮಯ್ಯ ಎರಡು ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದಾರೆ.ಹೀಗಾಗಿ ದೇವಿಯ ಸೂಚನೆ ಪಾಲಿಸಲು ಖಡಕ್ ಆಗಿ ರೆಡಿಯಾಗುತ್ತಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *