ಸಾರ್ವಜನಿಕರಿಗೆ ಕಿರಿಕಿರಿ ತರುತ್ತಿರುವ ಕಾಮಗಾರಿ…ರಸ್ತೆ ಅಗೆದು ನಿರ್ಲಕ್ಷಿಸಿರುವ ವಾ.ವಿ.ನೀ.ಸ.ಮಂಡಳಿ ಅಧಿಕಾರಿಗಳು…

ಸಾರ್ವಜನಿಕರಿಗೆ ಕಿರಿಕಿರಿ ತರುತ್ತಿರುವ ಕಾಮಗಾರಿ…ರಸ್ತೆ ಅಗೆದು ನಿರ್ಲಕ್ಷಿಸಿರುವ ವಾ.ವಿ.ನೀ.ಸ.ಮಂಡಳಿ ಅಧಿಕಾರಿಗಳು…

ಸಾರ್ವಜನಿಕರಿಗೆ ಕಿರಿಕಿರಿ ತರುತ್ತಿರುವ ಕಾಮಗಾರಿ…ರಸ್ತೆ ಅಗೆದು ನಿರ್ಲಕ್ಷಿಸಿರುವ ವಾ.ವಿ.ನೀ.ಸ.ಮಂಡಳಿ ಅಧಿಕಾರಿಗಳು…

ಮೈಸೂರು,ಮಾ29,Tv10 ಕನ್ನಡ
ಪೋಲಾಗುತ್ತಿರುವ ನೀರು ಸ್ಥಗಿತಗೊಳಿಸಲು ಆರಂಭಿಸಲಾದ ಕಾಮಗಾರಿ ಜಡ್ಡು ಹಿಡಿದು ಸಾರ್ವಜನಿಕರಿಗೆ ಕಿರಿಕಿರಿ ತರುತ್ತಿರುವ ಪ್ರಕರಣವೊಂದು ಯಾದವಗಿರಿಯಲ್ಲಿ ಬೆಳಕಿಗೆ ಬಂದಿದೆ.ಚರ್ಚ್ ಬಳಿ ಕುಡಿಯುವ ನೀರು ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿತ್ತು.ಸಾರ್ವಜನಿಕರ ದೂರಿಗೆ ಸ್ಪಂದಿಸಿದ ವಾಣಿವಿಲಾಸ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಪೋಲಾಗುತ್ತಿದ್ದ ನೀರನ್ನ ಸ್ಥಗಿತಗೊಳಿಸಲು ಕಳೆದ ನಾಲ್ಕು ದಿನಗಳ ಹಿಂದೆಯೇ ಕಾಮಗಾರಿ ಕೈಗೊಳ್ಳಲಾಗಿದೆ.ರಸ್ತೆಯನ್ನ ಅಗೆದ ಸಿಬ್ಬಂದಿಗಳು ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷಿಸಿದ್ದಾರೆ.ಒಂದೆಡೆ ನೀರು ಸಹ ಪೋಲಾಗುತ್ತಿದೆ.ಮತ್ತೊಂದೆಡೆ ರಸ್ತೆಯನ್ನೂ ಸಹ ಅಗೆದು ಹಳ್ಳಮಾಡಲಾಗಿದೆ.ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗಿದೆ.ವಾಣಿವಿಲಾಸ ನೀರು ಸರಬರಾಜು ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಕ್ಯಾರೆ ಎನ್ನುತ್ತಿಲ್ಲ.ಇದರಿಂದಾಗಿ ವಾಹನಗಳ ಓಡಾಟಕ್ಕೆ ತೊಂದರೆಯಾಗಿದೆ.ಕಿರಿಕಿರಿ ಅನುಭವಿಸುತ್ತಿರುವ ಸಾರ್ವಜನಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.ಇನ್ನಾದ್ರೂ ಕಾಮಗಾರಿ ಪೂರ್ಣಗೊಳಿಸಲೆಂದು ಆಗ್ರಹಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *