ಏ.1ಹಾಗೂ ಏ.2 ರಂದು ಕೆ.ಪಿ.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆ

ಏ.1ಹಾಗೂ ಏ.2 ರಂದು ಕೆ.ಪಿ.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆ

ಮಂಡ್ಯ,ಮಾ,29:-ಕೆ.ಪಿ.ಎಸ್.ಸಿ ವತಿಯಿಂದ ಏಪ್ರಿಲ್ 1 ಹಾಗೂ ಏಪ್ರಿಲ್ 2 ರಂದು ಜಿಲ್ಲೆಯಲ್ಲಿ ನಡೆಯಲಿರುವ ಗ್ರೂಪ್‌ ಸಿ ಹುದ್ದೆಯ ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆ ಯನ್ನು ಸುಸೂತ್ರವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಪರೀಕ್ಷಾ ಸಂಬಂಧ ಸಭೆ ನಡೆಸಿ ಮಾತನಾಡಿದರು.

ಅಧಿಕಾರಿಗಳು ಕರ್ನಾಟಕ ಲೋಕಸೇವಾ ಆಯೋಗದ ಸೂಚನೆಯನ್ನು ಪಾಲನೆ ಮಾಡಿ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಿ, ಜೊತೆಗೆ ಯಾವುದೇ ಆಕ್ರಮಗಳು ನಡೆಯದಂತೆ ಕ್ರಮವಹಿಸಿ ಎಂದರು.

ಏಪ್ರಿಲ್ 1 ರಂದು ಬೆಳಿಗ್ಗೆ 11:00 ಗಂಟೆಯಿಂದ 12:00 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ, ಏಪ್ರಿಲ್ 2 ರಂದು ಬೆಳಿಗ್ಗೆ 10:00 ಗಂಟೆಯಿಂದ 11:30 ಗಂಟೆವರೆಗೆ ಸಾಮಾನ್ಯ ಜ್ಞಾನ ಪರೀಕ್ಷೆ, ಹಾಗೂ ಮಧ್ಯಾಹ್ನ 2:00 ಗಂಟೆಯಿಂದ 4:00 ಗಂಟೆಯವರೆಗೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್, ಕಂಪ್ಯೂಟರ್ ಜ್ಞಾನ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಜಿಲ್ಲೆಯಲ್ಲಿ ತ್ರಿ ಸದಸ್ಯ ಸಮಿತಿ ನೇಮಕಮಾಡಲಾಗಿದೆ. ಜೊತೆಗೆ ಮಾರ್ಗಾಧಿಕಾರಿ, ನಿರೀಕ್ಷಣಾ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಎಲ್ಲಾ ಪರೀಕ್ಷಾ ಕಾರ್ಯಗಳು ಸುಗಮವಾಗಿ ನಡೆಯಲು ಎಲ್ಲಾ ಹಂತದಲ್ಲೂ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಕೊಠಡಿ ಮೇಲ್ವಿಚಾರಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮೊಬೈಲ್ ಫೋನ್ , ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ ಸುತ್ತಳತೆಯಲ್ಲಿ 144 ನೇ ಕಲಂ ಜಾರಿಗೊಳಿಸಿ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್, ಕಂಪ್ಯೂಟರ್ ಹಾಗೂ ಸೈಬರ್ ಅಂಗಡಿಗಳನ್ನು ಮುಚ್ಚಿಸಲು ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳ ವಿರುದ್ಧ ದಂಡ ಪ್ರಕ್ರಿಯೆ ಸಂಹಿತೆ 1973ರ ಸೆಕ್ಷನ್ 107 ಮತ್ತು 110 ಅಡಿಯಲ್ಲಿ ಕ್ರಮವಹಿಸಲಾಗುವುದು ಎಂದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ ಜವರೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಉಮೇಶ್, ಆಯುಷ್ ವೈಧ್ಯಾಧಿಕಾರಿ ಸೀತಾಲಕ್ಷ್ಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್ ಹೆಚ್ ನಿರ್ಮಲ ಸೇರಿದಂತೆ ಇನ್ನಿತರರು ಹಾಜರಿದ್ದರು.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *