5 ರೌಡಿ ಶೀಟರ್ ಗಳಿಗೆ ಗಡೀಪಾರು…ಚುನಾವಣೆ ಹಿನ್ನಲೆ ಚಾಟಿ ಬೀಸಿದ ಮೈಸೂರು ಖಾಕಿ ಪಡೆ…

5 ರೌಡಿ ಶೀಟರ್ ಗಳಿಗೆ ಗಡೀಪಾರು…ಚುನಾವಣೆ ಹಿನ್ನಲೆ ಚಾಟಿ ಬೀಸಿದ ಮೈಸೂರು ಖಾಕಿ ಪಡೆ…

ಮೈಸೂರು,ಮಾ29,Tv10 ಕನ್ನಡ
ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಮೈಸೂರು ನಗರ ಪೊಲೀಸರು ಭಯಮುಕ್ತ ವಾತಾವರಣ ನಿರ್ಮಿಸಲು ಮುಂದಾಗಿದ್ದಾರೆ.ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರು ನಗರದ 5 ರೌಡಿ ಶೀಟರ್/ಎಂ.ಓ.ಆಸಾಮಿಗಳನ್ನ ಗಡೀಪಾರು ಮಾಡಿದ್ದಾರೆ.5 ಮಂದಿ ರೌಡಿ ಶೀಟರ್ ಗಳು ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವ ಪ್ರಯತ್ನ ನಡೆಸುತ್ತಿರುವ ಹಿನ್ನಲೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಎನ್.ಮುತ್ತುರಾಜ್ ರವರು ಗಡೀಪಾರು ಆದೇಶ ಹೊರಡಿಸಿದ್ದಾರೆ.

ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಯಶವಂತ್@ಯಶು@ಮಿಕ್ಕಿ ಯನ್ನ 4 ತಿಂಗಳ ಕಾಲ ಶಿವಮೊಗ್ಗ ಜಿಲ್ಲೆಗೆ, ಎನ್.ಆರ್.ಹಾಗೂ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಬಾನ್.ಆ.ಕೊಯ್ತಾಬಾಬು ವನ್ನ 4 ತಿಂಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಗೆ,ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣ.@.ಕಿಟ್ಟಿ ಯನ್ನ 5 ತಿಂಗಳ ಕಾಲ ದಾವಣಗೆರೆ ಜಿಲ್ಲೆಗೆ,ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಸೈಯದ್ ಅಯೂಬ್.@.ಬಿಡ್ಡ ವನ್ನ 5 ತಿಂಗಳ ಕಾಲ ಚಿಕ್ಕಮಂಗಳೂರು ಜಿಲ್ಲೆಗೆ ಹಾಗೂ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ತೌಸೀಫ್ ಖಾನ್.@.ಡಾನ್ ಗೆ 5 ತಿಂಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಗೆ ಗಡೀಪಾರು ಮಾಡಿ ಆದೇಶಿಸಿರುತ್ತಾರೆ.

ಈ ಎಲ್ಲಾ ರೌಡಿ ಶೀಟರ್ ಗಳು ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದು ಎಚ್ಚರಿಕೆಯ ನಡುವೆಯೂ ಅಪರಾಧ ಚಟುವಟಿಕೆಗಳನ್ನ ಮುಂದುವರೆಸಿ ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನ ನಡೆಸಿರುತ್ತಾರೆ.ಈ ಹಿನ್ನಲೆ ನಗರ ಪೊಲೀಸರು ಗಡೀಪಾರು ಆದೇಶ ಹೊರಡಿಸಿದ್ದಾರೆ.

ಯಾವುದೇ ವ್ಯಕ್ತಿಗಳು ಇಂತಹ ಚಟುವಟಿಕೆಗಳಲ್ಲಿ ಭಾಗಿಯಾದ್ದಲ್ಲಿ ಅಂತಹವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಎಚ್ಚರಿಕೆ ನೀಡಿದ್ದಾರೆ…

Spread the love

Related post

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ ವಂಚನೆ ಪ್ರಕರಣ ದಾಖಲು…

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…

ಮೈಸೂರು,ಮೇ15,Tv10 ಕನ್ನಡ ವ್ಯವಹಾರದ ನಿಮಿತ್ತ ನೀಡಿದ್ದ ಮುಂಗಡ ಹಣಕ್ಕೆ ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನಲೆ ಮೈಸೂರು ಮಹಾನಗರ ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…
ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…

Leave a Reply

Your email address will not be published. Required fields are marked *