ತಂದೆ ಗೆಲುವಿಗೆ ಮಗನ ಸಾರಥ್ಯ…ಸಿದ್ದರಾಮಯ್ಯ ಪ್ರಚಾರದ ಜವಾಬ್ದಾರಿ ಹೊತ್ತ ಯತೀಂದ್ರ…

ತಂದೆ ಗೆಲುವಿಗೆ ಮಗನ ಸಾರಥ್ಯ…ಸಿದ್ದರಾಮಯ್ಯ ಪ್ರಚಾರದ ಜವಾಬ್ದಾರಿ ಹೊತ್ತ ಯತೀಂದ್ರ…

ತಂದೆ ಗೆಲುವಿಗೆ ಮಗನ ಸಾರಥ್ಯ…ಸಿದ್ದರಾಮಯ್ಯ ಪ್ರಚಾರದ ಜವಾಬ್ದಾರಿ ಹೊತ್ತ ಯತೀಂದ್ರ…

ಮೈಸೂರು,ಏ1,Tv10 ಕನ್ನಡ
ತಂದೆ ಗೆಲ್ಲಿಸುವ ಹೊಣೆ ಮಗನ ಹೆಗಲಿಗೆ ಬಿದ್ದಿದೆ.ವರುಣ ಕ್ಷೇತ್ರಕ್ಕೆ ಸಿದ್ದರಾಮಯ್ಯ ಪ್ರಚಾರಕ್ಕೆ ಬರೋದು ಒಂದೆರಡು ದಿನ ಮಾತ್ರ. ಒಮ್ಮೆ ನಾಮಪತ್ರ ಸಲ್ಲಿಕೆ, ಮತ್ತೊಮ್ಮೆ ಕ್ಷೇತ್ರ ಸಂಚಾರಕ್ಕೆ ಬರುವ ಸಾಧ್ಯತೆ ಅಷ್ಟೇ.ಉಳಿದ ಎಲ್ಲಾ ಜವಾಬ್ದಾರಿ ನಿರ್ವಹಣೆ ಮಗ ಯತೀಂದ್ರ ಸಿದ್ದರಾಮಯ್ಯ ಹೆಗಲಿಗೆ ಏರಿಸಲಾಗಿದೆ.
ಬೆಂಗಾವಲು ಪಡೆಯಿಂದಲೇ ಚಾಮುಂಡೇಶ್ವರಿಯಲ್ಲಿ ಸೋಲು ಅನುಭವಿಸಿದ್ದ ಸಿದ್ದರಾಮಯ್ಯ.
ವರುಣದಲ್ಲಿ ತಪ್ಪು ಮರುಕಳಿಸದಂತೆ ಎಚ್ಚರಿಕೆ ವಹಿಸಿದ್ದಾರೆ.
ಇಡೀ ಚುನಾವಣೆ ಜವಾಬ್ದಾರಿ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಹೆಗಲಿಗೆ ಹಾಕಲಾಗಿದೆ.
ಈಗಾಗಲೇ ಕ್ಷೇತ್ರದಲ್ಲಿ ಸಂಚಾರ ಆರಂಭಿಸಿದ್ದಾರೆ.ಇಂದು
ರಂಗಸಮುದ್ರ ಗ್ರಾಮಕ್ಕೆ ಭೇಟಿ ನೀಡಿ ಮನೆ ಮನೆಯಲ್ಲಿ ಮತಯಾಚನೆ ಮಾಡುತ್ತಿದ್ದಾರೆ.
ತಳಮಟ್ಟದಲ್ಲಿ ಮತದಾರರು, ಕಾರ್ಯಕರ್ತರು, ಮುಖಂಡರ ನಡುವೆ ಸಮನ್ವಯ ಸಾಧಿಸಿರುವ ಯತೀಂದ್ರ ತಂದೆಯ ಗೆಲುವಿಗೆ ಪ್ರಮುಖ ಪಾತ್ರ ನಿರ್ವಹಿಸಲು ಸಜ್ಜಾಗಿದ್ದಾರೆ.

ಸಧ್ಯ ಸಿದ್ದರಾಮಯ್ಯ ಸ್ಪರ್ಧೆಯಿಂದ ವರುಣ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ.ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಸುಲಭವಾದಂತೆ ಕಾಣುತ್ತಿದೆ.
ಕೊನೆ ಚುನಾವಣೆ ಗೆಲ್ಲಲು ಸಿದ್ದು ದಾರಿ ಸುಲಭ ಎನ್ನಲಾಗುತ್ತಿದೆ.
ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ ಯತೀಂದ್ರ ನಿರ್ಧಾರ ಸಾರ್ಥಕವಾಗಬೇಕಿದೆ.ಈ ಹಿನ್ನಲೆ ತಂದೆಗಾಗಿ ಪ್ರಚಾರ ಆರಂಭಿಸಿದ್ದಾರೆ.
ವಿಜಯೇಂದ್ರ ವರುಣದಿಂದ ಸ್ಪರ್ಧಿಸಲ್ಲ ಎಂದು ಯಡಿಯೂರಪ್ಪ ಘೋಷಣೆ ನಂತರ ಕಾಂಗ್ರೆಸ್ಸಿಗರು ನಿರಾಳರಾಗಿದ್ದಾರೆ.
ವರುಣದಲ್ಲಿ ನೇರಹಣಾಹಣಿ ತಪ್ಪಿದ್ದರಿಂದ ಸಿದ್ದು ಗೆಲವು ಸುಲಭ ಎನ್ನಲಾಗುತ್ತಿದೆ. ಯಡಿಯೂರಪ್ಪ ನಿರ್ಧಾರ ವರುಣಾ ಕ್ಷೇತ್ರದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡುತ್ತಿದೆ.
ಕಾಂಗ್ರೆಸ್ ಪರವಾಗಿ ರಾಜ್ಯಾದ್ಯಂತ ಸಿದ್ದು ಪ್ರವಾಸ ಕೈಗೊಳ್ಳಲಿದ್ದಾರೆ.
ವರುಣಾದಲ್ಲಿ ಜೆಡಿಎಸ್ ಅಷ್ಟಾಗಿ ಪ್ರಾಬಲ್ಯವಿಲ್ಲ,
ಬಿಜೆಪಿಯಲ್ಲಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಯುತ್ತಿದೆ.
ಮತ್ತೆ ಕಾ.ಪು ಸಿದ್ದಲಿಂಗಸ್ವಾಮಿ ಹೆಸರು ಮುನ್ನಲೆಗೆ ಬಂದಿದೆ.
2013 ರ ಚುನಾವಣೆಯಲ್ಲಿ ಸ್ಪರ್ಧಿಸಿ ಸಿದ್ದುಗೆ ಪೈಪೋಟಿ ನೀಡಿದ್ದ ಕಾ.ಪು.
ಈ ಬಾರಿಯೂ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ. ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ.
ವಿಜಯೇಂದ್ರ ಬರುತ್ತಾರೆಂದು ಸೈಲೆಂಟಾಗಿದ್ದ ಕಮಲ ಪಡೆಯ ಆಕಾಂಕ್ಷಿಗಳು.
ಇದೀಗ ವಿಜಯೇಂದ್ರ ಕಣದಿಂದ ಹಿಂದೆ ಸರಿದದ್ದರಿಂದ ಚುರುಕಾದ ಲಾಭಿ ಶುರುವಾಗಿದೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *