ತಂದೆ ಗೆಲುವಿಗೆ ಮಗನ ಸಾರಥ್ಯ…ಸಿದ್ದರಾಮಯ್ಯ ಪ್ರಚಾರದ ಜವಾಬ್ದಾರಿ ಹೊತ್ತ ಯತೀಂದ್ರ…

ತಂದೆ ಗೆಲುವಿಗೆ ಮಗನ ಸಾರಥ್ಯ…ಸಿದ್ದರಾಮಯ್ಯ ಪ್ರಚಾರದ ಜವಾಬ್ದಾರಿ ಹೊತ್ತ ಯತೀಂದ್ರ…

ತಂದೆ ಗೆಲುವಿಗೆ ಮಗನ ಸಾರಥ್ಯ…ಸಿದ್ದರಾಮಯ್ಯ ಪ್ರಚಾರದ ಜವಾಬ್ದಾರಿ ಹೊತ್ತ ಯತೀಂದ್ರ…

ಮೈಸೂರು,ಏ1,Tv10 ಕನ್ನಡ
ತಂದೆ ಗೆಲ್ಲಿಸುವ ಹೊಣೆ ಮಗನ ಹೆಗಲಿಗೆ ಬಿದ್ದಿದೆ.ವರುಣ ಕ್ಷೇತ್ರಕ್ಕೆ ಸಿದ್ದರಾಮಯ್ಯ ಪ್ರಚಾರಕ್ಕೆ ಬರೋದು ಒಂದೆರಡು ದಿನ ಮಾತ್ರ. ಒಮ್ಮೆ ನಾಮಪತ್ರ ಸಲ್ಲಿಕೆ, ಮತ್ತೊಮ್ಮೆ ಕ್ಷೇತ್ರ ಸಂಚಾರಕ್ಕೆ ಬರುವ ಸಾಧ್ಯತೆ ಅಷ್ಟೇ.ಉಳಿದ ಎಲ್ಲಾ ಜವಾಬ್ದಾರಿ ನಿರ್ವಹಣೆ ಮಗ ಯತೀಂದ್ರ ಸಿದ್ದರಾಮಯ್ಯ ಹೆಗಲಿಗೆ ಏರಿಸಲಾಗಿದೆ.
ಬೆಂಗಾವಲು ಪಡೆಯಿಂದಲೇ ಚಾಮುಂಡೇಶ್ವರಿಯಲ್ಲಿ ಸೋಲು ಅನುಭವಿಸಿದ್ದ ಸಿದ್ದರಾಮಯ್ಯ.
ವರುಣದಲ್ಲಿ ತಪ್ಪು ಮರುಕಳಿಸದಂತೆ ಎಚ್ಚರಿಕೆ ವಹಿಸಿದ್ದಾರೆ.
ಇಡೀ ಚುನಾವಣೆ ಜವಾಬ್ದಾರಿ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಹೆಗಲಿಗೆ ಹಾಕಲಾಗಿದೆ.
ಈಗಾಗಲೇ ಕ್ಷೇತ್ರದಲ್ಲಿ ಸಂಚಾರ ಆರಂಭಿಸಿದ್ದಾರೆ.ಇಂದು
ರಂಗಸಮುದ್ರ ಗ್ರಾಮಕ್ಕೆ ಭೇಟಿ ನೀಡಿ ಮನೆ ಮನೆಯಲ್ಲಿ ಮತಯಾಚನೆ ಮಾಡುತ್ತಿದ್ದಾರೆ.
ತಳಮಟ್ಟದಲ್ಲಿ ಮತದಾರರು, ಕಾರ್ಯಕರ್ತರು, ಮುಖಂಡರ ನಡುವೆ ಸಮನ್ವಯ ಸಾಧಿಸಿರುವ ಯತೀಂದ್ರ ತಂದೆಯ ಗೆಲುವಿಗೆ ಪ್ರಮುಖ ಪಾತ್ರ ನಿರ್ವಹಿಸಲು ಸಜ್ಜಾಗಿದ್ದಾರೆ.

ಸಧ್ಯ ಸಿದ್ದರಾಮಯ್ಯ ಸ್ಪರ್ಧೆಯಿಂದ ವರುಣ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ.ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಸುಲಭವಾದಂತೆ ಕಾಣುತ್ತಿದೆ.
ಕೊನೆ ಚುನಾವಣೆ ಗೆಲ್ಲಲು ಸಿದ್ದು ದಾರಿ ಸುಲಭ ಎನ್ನಲಾಗುತ್ತಿದೆ.
ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ ಯತೀಂದ್ರ ನಿರ್ಧಾರ ಸಾರ್ಥಕವಾಗಬೇಕಿದೆ.ಈ ಹಿನ್ನಲೆ ತಂದೆಗಾಗಿ ಪ್ರಚಾರ ಆರಂಭಿಸಿದ್ದಾರೆ.
ವಿಜಯೇಂದ್ರ ವರುಣದಿಂದ ಸ್ಪರ್ಧಿಸಲ್ಲ ಎಂದು ಯಡಿಯೂರಪ್ಪ ಘೋಷಣೆ ನಂತರ ಕಾಂಗ್ರೆಸ್ಸಿಗರು ನಿರಾಳರಾಗಿದ್ದಾರೆ.
ವರುಣದಲ್ಲಿ ನೇರಹಣಾಹಣಿ ತಪ್ಪಿದ್ದರಿಂದ ಸಿದ್ದು ಗೆಲವು ಸುಲಭ ಎನ್ನಲಾಗುತ್ತಿದೆ. ಯಡಿಯೂರಪ್ಪ ನಿರ್ಧಾರ ವರುಣಾ ಕ್ಷೇತ್ರದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡುತ್ತಿದೆ.
ಕಾಂಗ್ರೆಸ್ ಪರವಾಗಿ ರಾಜ್ಯಾದ್ಯಂತ ಸಿದ್ದು ಪ್ರವಾಸ ಕೈಗೊಳ್ಳಲಿದ್ದಾರೆ.
ವರುಣಾದಲ್ಲಿ ಜೆಡಿಎಸ್ ಅಷ್ಟಾಗಿ ಪ್ರಾಬಲ್ಯವಿಲ್ಲ,
ಬಿಜೆಪಿಯಲ್ಲಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಯುತ್ತಿದೆ.
ಮತ್ತೆ ಕಾ.ಪು ಸಿದ್ದಲಿಂಗಸ್ವಾಮಿ ಹೆಸರು ಮುನ್ನಲೆಗೆ ಬಂದಿದೆ.
2013 ರ ಚುನಾವಣೆಯಲ್ಲಿ ಸ್ಪರ್ಧಿಸಿ ಸಿದ್ದುಗೆ ಪೈಪೋಟಿ ನೀಡಿದ್ದ ಕಾ.ಪು.
ಈ ಬಾರಿಯೂ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ. ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ.
ವಿಜಯೇಂದ್ರ ಬರುತ್ತಾರೆಂದು ಸೈಲೆಂಟಾಗಿದ್ದ ಕಮಲ ಪಡೆಯ ಆಕಾಂಕ್ಷಿಗಳು.
ಇದೀಗ ವಿಜಯೇಂದ್ರ ಕಣದಿಂದ ಹಿಂದೆ ಸರಿದದ್ದರಿಂದ ಚುರುಕಾದ ಲಾಭಿ ಶುರುವಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *