.ಆರ್.ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಜಿದ್ದಾಜಿದ್ದಿ…ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಗೊಂದಲ…

.ಆರ್.ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಜಿದ್ದಾಜಿದ್ದಿ…ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಗೊಂದಲ…

ಕೆ.ಆರ್.ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಜಿದ್ದಾಜಿದ್ದಿ…ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಗೊಂದಲ…

ಮೈಸೂರು,ಏ3,Tv10 ಕನ್ನಡ
ಕೆ.ಆರ್ ಕ್ಷೇತ್ರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ಟಿಕೆಟ್ ಗಾಗಿ ಜಿದ್ದಾಜಿದ್ದಿ ನಡೆಯುತ್ತಿದೆ.ಟಿಕೆಟ್ ಗಾಗಿ ಆಕಾಂಕ್ಷಿಗಳು ನಡೆಸುತ್ತಿರುವ ಕಸರತ್ತು ಕಾರ್ಯಕರ್ತರಲ್ಲಿ ಗೊಂದಲ ಶುರುವಾಗಿದೆ.ಯಾರ ಪರವಾಗಿ ಪ್ರಚಾರಕ್ಕೆ ಇಳಿಯಬೇಕೆಂಬ ವಿಚಾರದಲ್ಲಿ ಸಂಧಿಗ್ಧ ಪರಿಸ್ಥಿತಿಗೆ ತಲುಪಿದ್ದಾರೆ.ಒಂದೆಡೆ ಬಿಜೆಪಿಯಲ್ಲಿ ಹಾಲಿ ಶಾಸಕ ಎಸ್.ಎ.ರಾಮದಾಸ್ ಹಾಗೂ ಮುಡಾ ಮಾಜಿ ಅಧ್ಯಕ್ಷ ರಾಜೀವ್ ನಡುವೆ ಪೈಪೋಟಿ ನಡೆಯುತ್ತಿದ್ದರೆ ಮತ್ತೊಂದೆಡೆ ಕಾಂಗ್ರೆಸ್‌ನಲ್ಲಿ ಮೂವರ ನಡುವೆ ಕಿತ್ತಾಟ ಶುರುವಾಗಿದೆ.ಟಿಕೆಟ್ ಗಾಗಿ ತಮ್ಮ ನೆಚ್ಚಿನ ನಾಯಕರ ಬೆನ್ನು ಬಿದ್ದಿರುವ ಆಕಾಂಕ್ಷಿಗಳು ಶತಾತ ಗತಾಯ ಟಿಕೆಟ್ ಪಡೆಯಲು ಪಟ್ಟು ಹಿಡಿದು ಕುಳಿತಿದ್ದಾರೆ.ಕೈ ಆಕಾಂಕ್ಷಿಗಳಾದ
ಮಾಜಿ ಶಾಸಕ ಎಂ.ಕೆ ಸೋಮಶೇಖರ್, ನವೀನ್ ಕುಮಾರ್, ಮಾಜಿ ನಗರಪಾಲಿಕೆ ಸದಸ್ಯ ಪ್ರದೀಪ್ ಕುಮಾರ್ ಸ್ಪರ್ಧೆಗೆ ಇಳಿದಿದ್ದಾರೆ.
ಚುನಾವಣೆ ಸನಿಹಬರುತ್ತಿದ್ದಂತೆ ಮತದಾರರನ್ನ ಸೆಳೆಯಲು ಕೈ ಆಕಾಂಕ್ಷಿಗ ಫೀಲ್ಡಿಗಿಳಿದಿದ್ದಾರೆ.
ಮತದಾರರನ್ನ ಸೆಳೆಯಲು ಹಲವು ಕಾರ್ಯಕ್ರಮಗಳ ಮೂಲಕ ಆಕರ್ಷಿಸಿದ್ದಾರೆ.
ಬ್ರಾಹ್ಮಣ ಸಮುದಾಯದ ಮತದಾರರು ಹೆಚ್ಚಾಗಿರುವ ಕ್ಷೇತ್ರ ಇದಾಗಿದೆ.
ಈಗಾಗಲೇ ಎರಡು ಬಾರಿ ಗೆದ್ದಿರುವ ಸೋಮಶೇಖರ್‌ಗೆ ನವೀನ್ ಕುಮಾರ್ ಹಾಗೂ ಪ್ರದೀಪ್ ಕುಮಾರ್ ಸ್ಪರ್ಧೆ ನೀಡುತ್ತಿದ್ದಾರೆ.
ಮೂರು ಸಮುದಾಯಕ್ಕೆ ಸೇರಿದ ಆಕಾಂಕ್ಷಿಗಳಲ್ಲಿ ಕಾಂಪಿಟಿಷನ್ ಶುರುವಾಗಿದೆ.
ಕುರುಬ ಸಮುದಾಯಕ್ಕೆ ಸೇರಿದ ಸೋಮಶೇಖರ್, ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಪ್ರದೀಪ್ ಕುಮಾರ್, ಬ್ರಾಹ್ಮಣ ಸಮುದಾಯಕ್ಕೆ ಸೇರಿದ ನವೀನ್ ಕುಮಾರ್ ನಡುವೆ ಟಿಕೆಟ್ ಫೈಟ್ ನಡೆಯುತ್ತಿದೆ.
ಕಮಲ ಟಿಕೆಟ್‌ಗಾಗಿ ಶಾಸಕ ರಾಮದಾಸ್, ಮುಡಾ ಅಧ್ಯಕ್ಷ ಹೆಚ್.ವಿ ರಾಜೀವ್ ನಡುವೆ ಈಗಾಗಲೇ ಪೈಪೋಟಿ ಶುರುವಾಗಿದೆ.ಈ ಬೆಳವಣಿಗರ ಎರಡು ರಾಷ್ಟ್ರೀಯ ಪಕ್ಷಗಳ ನಾಯಕರಲ್ಲಿ ಗೊಂದಲ ಮೂಡಿಸಿದೆ.ಸಧ್ಯ ಕೆ.ಆರ್ ಕ್ಷೇತ್ರ ಕಗ್ಗಂಟಾಗಿದೆ.
ಬಿಜೆಪಿಯಲ್ಲಿ ಹೊಸಬರಿಗೆ ಅವಕಾಶ ಕೊಡಿ ಎಂದು ಕ್ಷೇತ್ರ ಮತದಾರರು ಒತ್ತಾಯಿಸಿದ್ದಾರೆ.
ಇತ್ತ ಕಾಂಗ್ರೆಸ್ ಮತದಾರರಲ್ಲಿ ಯಾವುದೇ ವಿರೋಧವಿಲ್ಲದಿದ್ದರು ಆಕಾಂಕ್ಷಿಗಳಲ್ಲಿ ಸ್ಪರ್ಧೆ ಹೆಚ್ಚಾಗಿದೆ.
ಚುನಾವಣೆ ಘೋಷಣೆಯಾದ್ರು, ಎರಡು ಪಕ್ಷಗಳಿಂದ ಅಭ್ಯರ್ಥಿಗಳ ಘೋಷಣೆಯಾಗಿಲ್ಲ.ಕಾರ್ಯಕರ್ತರಂತೂ
ಗೊಂದಲಕ್ಕೆ ಸಿಲುಕಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *