ಚುನಾವಣೆ 2023…ಮೈಸೂರಲ್ಲಿ ನೀರಸ ವಾತಾವರಣ…ಫೀಲ್ಡ್ ಗೆ ಇಳಿಯದ ಆಕಾಂಕ್ಷಿಗಳು…

ಚುನಾವಣೆ 2023…ಮೈಸೂರಲ್ಲಿ ನೀರಸ ವಾತಾವರಣ…ಫೀಲ್ಡ್ ಗೆ ಇಳಿಯದ ಆಕಾಂಕ್ಷಿಗಳು…

ಮೈಸೂರು,ಏ5,Tv10 ಕನ್ನಡ
ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿದೆ.ಕೆಲವೆಡೆ ಅಭ್ಯರ್ಥಿಗಳು ಹಾಗೂ ಆಕಾಂಕ್ಷಿಗಳು ಚುರುಕಿನಿಂದ ಓಡಾಡುತ್ತಿದ್ದಾರೆ.ಆದ್ರೆ ಮೈಸೂರು
ಜಿಲ್ಲೆಯಲ್ಲಿ ನೀರಸ ವಾತಾವರಣ ನಿರ್ಮಾಣವಾಗಿದೆ.
ಚುನಾವಣಾ ರಂಗು ಇನ್ನೂ ಕಳೆಗಟ್ಟಿಲ್ಲ.ಪ್ರಮುಖ ಪಕ್ಷಗಳು ತಮ್ಮ
ಅಭ್ಯರ್ಥಿಗಳನ್ನ ಘೋಷಣೆ ಮಾಡದ ಹಿನ್ನಲೆ ನೀರಸ ವಾತಾವರಣ ಕಂಡುಬರುತ್ತಿದೆ.ಈ ಹಿನ್ನಲೆ
ಆಕಾಂಕ್ಷಿಗಳಲ್ಲೂ ಗೊಂದಲವಾಗಿದೆ ಕಾರ್ಯಕರ್ತರಲ್ಲೂ ಗೊಂದಲ ಮೂಡಿದೆ.
ನಾಯಕರ ವಿಳಂಬ ನೀತಿಗೆ ಬೇಸತ್ತಿರುವ ಮುಖಂಡರು, ಕಾರ್ಯಕರ್ತರು ಸೈಲೆಂಟಾಗಿ ಕುಳಿತಿದ್ದಾರೆ.
ಚುನಾವಣೆ ದಿನಾಂಕ ಘೋಷಣೆಯಾದರು ಆಕಾಂಕ್ಷಿಗಳು ಫೀಲ್ಡಿಗಿಳಿಯಲು ಮೀನಾಮೇಷ ಎಣಿಸುತ್ತಿದ್ದಾರೆ.ಕೆಲವು ಕ್ಷೇತ್ರಗಳನ್ನ ಹೊರತುಪಡಿಸಿ ಬಹುತೇಕ ಕ್ಷೇತ್ರಗಳ ಆಕಾಂಕ್ಷಿಗಳು ಮೌನದಿಂದ ಮುಂದಿನ ಬೆಖವಣಿಗೆಗೆ ಕಾದಿದ್ದಾರೆ.ಅಲ್ಲದೆ
ಕಾರ್ಯಕರ್ತರೊಂದಿಗೆ ಬೆರೆಯಲು ಆಕಾಂಕ್ಷಿಗಳು ಹಿಂದೇಟು ಹಾಕುತ್ತಿದ್ದಾರೆ.
ಬಿಜೆಪಿಯಲ್ಲಿ ಅಭ್ಯರ್ಥಿಗಳ ಘೋಷಣೆ ವಿಳಂಬವಾದ ಕಾರಣ ಕಾರ್ಯಕರ್ತರು.
ಯಾರಿಗೆ ಬೆಂಬಲಿಸಬೇಕೆಂದು ಗೊಂದಲಕ್ಕೆ ಸಿಲುಕಿದ್ದಾರೆ.
ಚುನಾವಣೆ ಕೇವಲ 35 ದಿನಗಳು ಮಾತ್ರ ಬಾಕಿ ಇದೆ.ಜಿಲ್ಲೆಯಲ್ಲಿ ಕೆಲವೇ ಕೆಲವು ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳು ಫಿಕ್ಸ್ ಆಗಿದೆ.
ಜೆಡಿಎಸ್, ಕಾಂಗ್ರೆಸ್ ನಲ್ಲಿ ಮಾತ್ರ ಕೆಲವೆಡೆ ಅಭ್ಯರ್ಥಿ ಘೋಷಣೆಯಾಗಿದೆ.
ಚಾಮರಾಜ, ಚಾಮುಂಡೇಶ್ವರಿ, ಕೃಷ್ಣರಾಜಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ನಿಗದಿಯಾಗಿಲ್ಲ.
ಜೆಡಿಎಸ್ ನಲ್ಲಿ ಚಾಮರಾಜ, ಎನ್ ಆರ್, ಹೆಚ್ ಡಿ ಕೋಟೆ, ನಂಜನಗೂಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಾಕಿ ಉಳಿದಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಾದರು ಮೂರು ಪಕ್ಷಗಳಲ್ಲೂ ಅಭ್ಯರ್ಥಿಗಳ ಹೆಸರು ಫೈನಲ್ ಆಗಿಲ್ಲ.
ಜೆಡಿಎಸ್ ಕೆಲ ಕ್ಷೇತ್ರದಲ್ಲಿ ಸಂಘಟನೆಗೆ ಸಮಯ ಕಡಿಮೆ ಹಿನ್ನೆಲೆ ಸ್ಪರ್ಧೆಗೆ ಆಕಾಂಕ್ಷಿಗಳು ಹಿಂದೇಟು ಹಾಕುತ್ತಿದ್ದಾರೆ.ಕಡಿಮೆ ಸಮಯದಲ್ಲಿ ಸಂಘಟನೆ ಕಠಿಣ ಎಂದು ಕೆಲವೆಡೆ ಸ್ಪರ್ಧೆಗೆ ನಿರಾಸಕ್ತಿ ತೋರಿಸುತ್ತಿದ್ದಾರೆ.
ಪ್ರಮುಖ ಮೂರು ಪಕ್ಷಗಳಲ್ಲೂ ವಿಳಂಬ ನೀತಿ ಅನುಸರಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಚುನಾವಣಾ ರಂಗು ಬಾಡಿಹೋಗಿದೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *