ಬಿಜೆಪಿ ಟಿಕೆಟ್ ಘೋಷಣೆ…ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿರುವ ಮೈಸೂರು…

ಬಿಜೆಪಿ ಟಿಕೆಟ್ ಘೋಷಣೆ…ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿರುವ ಮೈಸೂರು…

  • Politics
  • April 12, 2023
  • No Comment
  • 167

ಮೈಸೂರು,ಏ12,Tv10 ಕನ್ನಡ
ಬಿಜೆಪಿ ಟಿಕೆಟ್ ಘೋಷಣೆಯಿಂದ ಸಾಂಸ್ಕೃತಿಕ ನಗರಿ ಮೈಸೂರು ರಣಾಂಗಣವಾಗಲಿದೆ.
ಹೈ ವೊಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿದೆ.
ಘಟಾನುಘಟಿ ನಾಯಕರುಗಳಿಂದ ತೀವ್ರ ಪೈಪೋಟಿ ಶುರುವಾಗಲಿದೆ.ಈಗಾಗಲೇ
ಚಾಮುಂಡೇಶ್ವರಿ, ವರುಣ, ಹುಣಸೂರಿನಲ್ಲಿ ಚುನಾವಣಾ ಅಖಾಡ ರಂಗೇರಿದೆ.
ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ. ಸೋಮಣ್ಣ ಕಣಕ್ಕೆ ಇಳಿಯಲಿದ್ದಾರೆ. ವರುಣ ವಿಧಾನ ಸಭಾ ಕ್ಷೇತ್ರ ಕಾವು ಪಡೆದುಕೊಂಡು ರಾಜ್ಯದ ಗಮನ ಸೆಳೆಯಲಿದೆ.
ಹುಣಸೂರಿನಲ್ಲಿ ಜೆಡಿಎಸ್‌ ತೊರೆದು ಕಮಲ ಹಿಡಿದಿರುವ ದೇವರಹಳ್ಳಿ ಸೋಮಶೇಖರ್ ಕಣಕ್ಕೆ ಇಳಿಯಲಿದ್ದು ಜೆಡಿಎಸ್ ಗರ ತೊಡೆ ತಟ್ಟಿದ್ದಾರೆ.
ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸೋತಿದ್ದ ದೇವರಹಳ್ಳಿ ಸೋಮಶೇಖರ್
ಈ ಬಾರಿ ಜೆಡಿಎಸ್‌ನಿಂದ ಟಿಕೆಟ್ ತಪ್ಪಿದ ಹಿನ್ನಲೆ ಬಿಜೆಪಿ ಸೇರಿದ್ದಾರೆ.
ಹುಣಸೂರಿನಲ್ಲಿ ಮೂರು ಪಕ್ಷಗಳಲ್ಲೂ ತೀವ್ರ ಹಣಾಹಣಿ ನಡೆಯುತ್ತಿದೆ.
ಕಾಂಗ್ರೆಸ್ ಹೆಚ್.ಪಿ ಮಂಜುನಾಥ್, ಜೆಡಿಎಸ್‌ನ ಹರೀಶ್‌ಗೌಡ, ಬಿಜೆಪಿಯ ದೇವರಹಳ್ಳಿ ಸೋಮಶೇಖರ್ ನಡುವೆ ಬಿಗ್ ಫೈಟ್ ಇದೆ.ಚಾಮುಂಡೇಶ್ವರಿಯಲ್ಲಿ ಅಭ್ಯರ್ಥಿಗಳ ಎದೆ ಬಡಿತ ಜೋರಾಗಿದೆ.ಇದೀಗ
ಚಾಮುಂಡೇಶ್ವರಯಲ್ಲಿ ಮತದಾರರೇ ಸಾರ್ವಭೌಮರು.
ಜೆಡಿಎಸ್‌ನ ಜಿಟಿ ದೇವೇಗೌಡ, ಕಾಂಗ್ರೆಸ್‌ನ ಮಾವಿನಹಳ್ಳಿ ಸಿದ್ದೇಗೌಡ, ಕಾಂಗ್ರೆಸ್‌ನ ವಾಸು ಪುತ್ರ ಬಿಜೆಪಿಯ ಕವೀಶ್‌ಗೌಡ ನಡುವೆ ಪ್ರಬಲ ಪೈಪೋಟಿ ಇದೆ.
ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳು ತೀವ್ರ ಕುತೂಹಲ ಮೂಡಿಸಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *