ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್: ರಾಜ್ಯ ಬಿಜೆಪಿ ವಿರುದ್ಧ ಕೆಂಡಾಮಂಡಲ

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್: ರಾಜ್ಯ ಬಿಜೆಪಿ ವಿರುದ್ಧ ಕೆಂಡಾಮಂಡಲ

  • Politics
  • April 17, 2023
  • No Comment
  • 190

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್: ರಾಜ್ಯ ಬಿಜೆಪಿ ವಿರುದ್ಧ ಕೆಂಡಾಮಂಡಲ.
ಬೆಂಗಳೂರು,ಏಪ್ರಿಲ್,13 ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಇಂದು ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದರು. ಇದರೊಂದಿಗೆ 35 ವರ್ಷಕ್ಕೂ ಹೆಚ್ಚು ಕಾಲ ಬಿಜೆಪಿಯೊಂದಿಗಿನ ನಂಟು ಕಳೆದುಕೊಂಡರು.

ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ರಾಜ್ಯ ಬಿಜೆಪಿ ಕೆಲವೇ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. ರಾಜ್ಯ ಬಿಜೆಪಿ ಬೆಳವಣಿಗೆ ವರಿಷ್ಠರ ಗಮನಕ್ಕೆ ಬಂದಿಲ್ಲ ಅನ್ನಿಸುತ್ತೆ. ಕೆಲ ಬಿಜೆಪಿ ನಾಯಕರು ತಮ್ಮ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದಾರೆ. ನಾನು ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಟೀಕೆ ಮಾಡುತ್ತಿಲ್ಲ. ಲಿಂಗಾಯತ ನಾಯಕರಲ್ಲಿ ಬಿಎಸ್ವೈ ಬಿಟ್ಟರೆ ನಾನೇ ಹಿರಿಯ. ಅದಕ್ಕಾಗಿ ನನ್ನನ್ನು ಪಕ್ಷದಿಂದ ಹೊರಹಾಕಿರಬೇಕು ಎಂದು ಟೀಕಿಸಿದರು.
ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಬಿಜೆಪಿ ನನಗೆ ಎಲ್ಲಾ ಗೌರವ ಹಾಗೂ ಸ್ಥಾನಮಾನ ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ಬಿಜೆಪಿ ಕಟ್ಟಿ ಬೆಳೆಸುವ ಕೆಲಸ ಮಾಡಿದ್ದೇನೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ನಾನು ಜನಸಂಘ, ಸಂಘ ಪರಿವಾರದ ಕುಟುಂಬದಿಂದ ಬಂದ ವ್ಯಕ್ತಿ. ಕಳೆದ 6 ತಿಂಗಳಿನಿಂದ ಕಡೆಗಣಿಸಿದ್ದರು, ನನಗೆ ಗೌರವ ಕೊಡಲಿಲ್ಲ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು..

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *