ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ…ಜಿಲ್ಲಾಧಿಕಾರಿ…ಡಾ.ಕೆ ವಿ ರಾಜೇಂದ್ರ

ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ…ಜಿಲ್ಲಾಧಿಕಾರಿ…ಡಾ.ಕೆ ವಿ ರಾಜೇಂದ್ರ

ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ…ಜಿಲ್ಲಾಧಿಕಾರಿ…ಡಾ.ಕೆ ವಿ ರಾಜೇಂದ್ರ

ಮೈಸೂರು,ಏ17,Tv10 ಕನ್ನಡ
2023 ರ ಸಾರ್ವರ್ತಿಕ ಚುನಾವಣೆಯು ಮೇ 10 ರಂದು ನಡೆಯಲಿದ್ದು ಮತದಾನದಲ್ಲಿ ಮೂಲ ಸೌಕರ್ಯಗಳ ಅಗತ್ಯತೆಗಾಗಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯವಾಗಿದ್ದು ಅವರ ಸಹಕಾರ ಪಡೆದುಕೊಳ್ಳಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮುಖ್ಯ ಚುನಾವಣಾ ಅಧಿಕಾರಿಯಾದ ಡಾ. ಕೆ ವಿ ರಾಜೇಂದ್ರ ಸಲಹೆ ನೀಡಿದರು.ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಮತದಾನಿಗಳಿಗೆ ವ್ಯವಸ್ಥೆ ಕಲ್ಪಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಯಸ್ಸಾದ ಮತದಾರರನ್ನು ಜೋಪಾನವಾಗಿ ಮತಗಟ್ಟೆಗೆ ಕರೆದು ತಂದು ಮತ ಹಾಕಿಸಲು ಸಹಾಯ ಮಾಡುವ ಹಾಗೂ ಕೆಲ ಮತದಾರರು ಮತಗಟ್ಟೆಯವರೆಗೂ ಬರಲು ತೊಂದರೆ ಇದ್ದಲ್ಲಿ ಅಂತವರನ್ನು ವ್ಹೀಲ್ ಚೇರ್ ಮುಖಾಂತರ ಮತಗಟ್ಟೆಗೆ ಕರೆದು ತಂದು ಮತ ಹಾಕಿಸುವ ಕಾರ್ಯಕ್ಕೆ ಈ ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಧಿಗಳು ಸಹಕರಿಸುವಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಮತಗಟ್ಟೆಗಳಲ್ಲಿ ಪುರುಷ ಹಾಗೂ ಮಹಿಳೆಯ ಸರದಿ ಸಾಲುಗಳ ನಿರ್ವಹಣೆಗೂ ಕೂಡ ಎನ್ ಸಿಸಿ ವಿದ್ಯಾರ್ಧಿಗಳಿಗೆ ಶಿಕ್ಷಕರು ತರಬೇತಿಯನ್ನು ನೀಡಬೇಕು. ಮಕ್ಕಳನ್ನು ಈ ರೀತಿಯ ಕಾರ್ಯಗಳಿಗೆ ಬಳಸಿಕೊಳ್ಳುವುದರಿಂದ ಅವರಿಗೆ ಪ್ರಜಾಪ್ರಭುತ್ವದ ಬಗ್ಗೆ ಜ್ಞಾನ ಹೆಚ್ಚಾಗುತ್ತದೆ ಎಂದು ಅವರು ತಿಳಿಸಿದರು.
ಮತದಾನಕ್ಕೆ ಮೂರು ದಿನ ಬಾಕಿ ಇರುವ ಸಂದರ್ಭದಲ್ಲಿ ಸೀರೆ ಹಂಚುವುದು ಹಣ ಹಂಚುವುದು ಮತದಾರರಿಗೆ ಆಮಿಷ ಒಡ್ಡುವುದು ಹಾಗೂ ಇನ್ನಿತರ ಅನೈತಿಕ ಚಟುವಟಿಕೆಗಳು ನಡೆಯುವುದು ಹೆಚ್ಚಾಗಿರುವುದರಿಂದ ಅಧಿಕಾರಿಗಳು ಹಾಗೂ ಸ್ಥಳೀಯವಾಗಿರುವ ಶಿಕ್ಷಕರು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಾಯತ್ರಿ , ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶರಾದ ರಾಮಚಂದ್ರರಾಜೇ ಅರಸ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *