ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ…ಜಿಲ್ಲಾಧಿಕಾರಿ…ಡಾ.ಕೆ ವಿ ರಾಜೇಂದ್ರ

ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ…ಜಿಲ್ಲಾಧಿಕಾರಿ…ಡಾ.ಕೆ ವಿ ರಾಜೇಂದ್ರ

ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ…ಜಿಲ್ಲಾಧಿಕಾರಿ…ಡಾ.ಕೆ ವಿ ರಾಜೇಂದ್ರ

ಮೈಸೂರು,ಏ17,Tv10 ಕನ್ನಡ
2023 ರ ಸಾರ್ವರ್ತಿಕ ಚುನಾವಣೆಯು ಮೇ 10 ರಂದು ನಡೆಯಲಿದ್ದು ಮತದಾನದಲ್ಲಿ ಮೂಲ ಸೌಕರ್ಯಗಳ ಅಗತ್ಯತೆಗಾಗಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯವಾಗಿದ್ದು ಅವರ ಸಹಕಾರ ಪಡೆದುಕೊಳ್ಳಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮುಖ್ಯ ಚುನಾವಣಾ ಅಧಿಕಾರಿಯಾದ ಡಾ. ಕೆ ವಿ ರಾಜೇಂದ್ರ ಸಲಹೆ ನೀಡಿದರು.ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಮತದಾನಿಗಳಿಗೆ ವ್ಯವಸ್ಥೆ ಕಲ್ಪಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಯಸ್ಸಾದ ಮತದಾರರನ್ನು ಜೋಪಾನವಾಗಿ ಮತಗಟ್ಟೆಗೆ ಕರೆದು ತಂದು ಮತ ಹಾಕಿಸಲು ಸಹಾಯ ಮಾಡುವ ಹಾಗೂ ಕೆಲ ಮತದಾರರು ಮತಗಟ್ಟೆಯವರೆಗೂ ಬರಲು ತೊಂದರೆ ಇದ್ದಲ್ಲಿ ಅಂತವರನ್ನು ವ್ಹೀಲ್ ಚೇರ್ ಮುಖಾಂತರ ಮತಗಟ್ಟೆಗೆ ಕರೆದು ತಂದು ಮತ ಹಾಕಿಸುವ ಕಾರ್ಯಕ್ಕೆ ಈ ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಧಿಗಳು ಸಹಕರಿಸುವಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಮತಗಟ್ಟೆಗಳಲ್ಲಿ ಪುರುಷ ಹಾಗೂ ಮಹಿಳೆಯ ಸರದಿ ಸಾಲುಗಳ ನಿರ್ವಹಣೆಗೂ ಕೂಡ ಎನ್ ಸಿಸಿ ವಿದ್ಯಾರ್ಧಿಗಳಿಗೆ ಶಿಕ್ಷಕರು ತರಬೇತಿಯನ್ನು ನೀಡಬೇಕು. ಮಕ್ಕಳನ್ನು ಈ ರೀತಿಯ ಕಾರ್ಯಗಳಿಗೆ ಬಳಸಿಕೊಳ್ಳುವುದರಿಂದ ಅವರಿಗೆ ಪ್ರಜಾಪ್ರಭುತ್ವದ ಬಗ್ಗೆ ಜ್ಞಾನ ಹೆಚ್ಚಾಗುತ್ತದೆ ಎಂದು ಅವರು ತಿಳಿಸಿದರು.
ಮತದಾನಕ್ಕೆ ಮೂರು ದಿನ ಬಾಕಿ ಇರುವ ಸಂದರ್ಭದಲ್ಲಿ ಸೀರೆ ಹಂಚುವುದು ಹಣ ಹಂಚುವುದು ಮತದಾರರಿಗೆ ಆಮಿಷ ಒಡ್ಡುವುದು ಹಾಗೂ ಇನ್ನಿತರ ಅನೈತಿಕ ಚಟುವಟಿಕೆಗಳು ನಡೆಯುವುದು ಹೆಚ್ಚಾಗಿರುವುದರಿಂದ ಅಧಿಕಾರಿಗಳು ಹಾಗೂ ಸ್ಥಳೀಯವಾಗಿರುವ ಶಿಕ್ಷಕರು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಾಯತ್ರಿ , ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶರಾದ ರಾಮಚಂದ್ರರಾಜೇ ಅರಸ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *