ನಿಗೂಢ ಕೊಲೆ ರಹಸ್ಯ ಬಯಲು…ಪ್ರಿಯಕರ ಅಂದರ್…ಅಕ್ರಮ ಸಂಭಂಧ ಹಿನ್ನಲೆ ಕೊಲೆ…ಸಾಲ ಹಿಂದಿರುಗಿಸುವಂತೆ ಒತ್ತಡ ಹೇರಿದ್ದಕ್ಕೆ ಹತ್ಯೆ…

ನಿಗೂಢ ಕೊಲೆ ರಹಸ್ಯ ಬಯಲು…ಪ್ರಿಯಕರ ಅಂದರ್…ಅಕ್ರಮ ಸಂಭಂಧ ಹಿನ್ನಲೆ ಕೊಲೆ…ಸಾಲ ಹಿಂದಿರುಗಿಸುವಂತೆ ಒತ್ತಡ ಹೇರಿದ್ದಕ್ಕೆ ಹತ್ಯೆ…

ನಂಜನಗೂಡು,ಏ18,Tv10 ಕನ್ನಡ
ಮಹಿಳೆಯ ನಿಗೂಢ ಕೊಲೆ ರಹಸ್ಯ ಭೇಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.ಅಕ್ರಮ ಸಂಭಂದ ಇರಿಸಿಕೊಂಡಿದ್ದ ಪ್ರಿಯತಮ ಅಂದರ್ ಆಗಿದ್ದಾನೆ.ಸಾಲವಾಗಿ ಕೊಟ್ಟ ಹಣ ವಾಪಸ್ ಕೇಳಿದ ಪ್ರಿಯತಮೆಯನ್ನ ಪ್ರಿಯಕರ ಬರ್ಭರವಾಗಿ ಕೊಲೆ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ಮಳವಳ್ಳಿಯ ನಿವಾಸಿ ಶ್ಯಾಂಪ್ರಸಾದ್ ಬಂಧಿತ ಆರೋಪಿ.ಪ್ರಿಯಕರನ ಕೈಲಿ ಹತ್ಯೆಗೊಳಗಾದವಳು ಕನಕಪುರದ ನಿವಾಸಿ ಮಂಜುಳ(40).

ಎರಡು ದಿನಗಳ ಹಿಂದೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಳಿ ಇರುವ ಹದಿನಾರುಕಾಲಿನ ಮಂಟಪದ ಬಳಿ ಅಪರಿಚಿತ ಮಹಿಳೆ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಪೊಲೀಸರು ಮೃತ ಮಹಿಳೆಯ ಮಾಹಿತಿ ಜಾಲಾಡಿದಾಗ ಕನಕಪುರದ ಮಂಜುಳಾ ಎಂದು ತಿಳಿದುಬಂತು.ಮೂಲತಃ ಮಳವಳ್ಳಿ ತಾಲೂಕಿನ ಮಂಜುಳಾ ವಿವಾಹಿತಳು.ಮಹದೇವಾಚಾರಿ ಎಂಬುವರನ್ನ ವಿವಾಹವಾಗಿದ್ದ ಮಂಜುಳಾ ಎರಡು ಮಕ್ಕಳ ತಾಯಿ.ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಂಜುಳಾಗೆ ಶ್ಯಾಂಪ್ರಸಾದ್ ಪರಿಚಯವಾಯಿತು.ಸ್ನೇಹ ಪ್ರಣಯಕ್ಕೆ ತಿರುಗಿ ಅಕ್ರಮ ಸಂಭಂಧಕ್ಕೆ ದಾರಿಯಾಯಿತು.ಈ ವಿಚಾರ ಪತಿ ಮಹದೇವಾಚಾರಿಗೆ ತಿಳಿದು ಗಲಾಟೆ ನಡೆದಿದೆ.ಶ್ಯಾಂಪ್ರಸಾದ್ ಸಹವಾಸ ಬಿಡುವಂತೆ ಪತಿ ಮನವಿ ಮಾಡಿದ್ದಾರೆ.3 ಲಕ್ಷ ಸಾಲ ಕೊಟ್ಟಿದ್ದೀನಿ ವಾಪಸ್ ತಗೊಂಡು ಸಹವಾಸ ಬಿಡ್ತೀನಿ ಅಂತ ಮಾತು ಕೊಟ್ಟಿದ್ದಾರೆ.ನಂತರ ಮಹದೇವಾಚಾರಿ ತನ್ನ ಪತ್ನಿ ಹಾಗೂ ಮಕ್ಕಳ ಸಮೇತ ಕನಕಪುರದಲ್ಲಿ ನೆಲೆಸಿದ್ದಾರೆ.ಹೀಗಿದ್ದೂ ಇಬ್ಬರ ನಡುವೆ ಅಕ್ರಮ ಸಂಭಂಧ ಮುಂದುವರೆದಿದೆ.ಏಪ್ರಿಲ್ 8 ರಂದು ದೇವಸ್ಥಾನಕ್ಕೆ ಎಂದು ಮನೆ ಬಿಟ್ಟ ಮಂಜುಳಾ ಮನೆಗೆ ಹಿಂದಿರುಗಿಲ್ಲ.ಪ್ರಿಯಕರನ ಜೊತೆ ಹೋಗಿದ್ದಾಳೆಂದು ಖಚಿತಪಡಿಸಿಕೊಂಡ ಪತಿ ಮೌನಕ್ಕೆ ಶರಣಾಗಿದ್ದಾರೆ.ಏಪ್ರಿಲ್ 15 ರಂದು ಬೆಳಿಗ್ಗೆ ಹದಿನಾರುಕಾಲು ಮಂಟಪದ ಬಳಿ ಮಂಜುಳಾ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ.ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಠಾಣೆ ಪೊಲೀಸರು ತನಿಖೆ ಆರಂಭಿಸಿ ಆರೋಪಿಯನ್ನ ಬಂಧಿಸಿದ್ದಾರೆ.ಹಣ ಹಿಂದಿರುಗಿಸುವಂತೆ ಒತ್ತಡ ಹೇರಿದ್ದ ಪತ್ನಿಯನ್ನ ಶ್ಯಾಮ್ ಪ್ರಸಾದ್ ಕೊಲೆ ಮಾಡಿರುವುದಾಗಿ ಪತಿ ಮಹದೇವಾಚಾರಿ ದೂರು ನೀಡಿದ್ದಾರೆ.ಅಕ್ರಮ ಸಂಭಂಧಕ್ಕೆ ಹಾತೊರೆದು ಹಣ ಕಳೆದುಕೊಂಡ ಮಂಜುಳಾ ಪ್ರಾಣವನ್ನೂ ಕಳೆದುಕೊಂಡಿದ್ದಾಳೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *