ನಿಗೂಢ ಕೊಲೆ ರಹಸ್ಯ ಬಯಲು…ಪ್ರಿಯಕರ ಅಂದರ್…ಅಕ್ರಮ ಸಂಭಂಧ ಹಿನ್ನಲೆ ಕೊಲೆ…ಸಾಲ ಹಿಂದಿರುಗಿಸುವಂತೆ ಒತ್ತಡ ಹೇರಿದ್ದಕ್ಕೆ ಹತ್ಯೆ…

ನಿಗೂಢ ಕೊಲೆ ರಹಸ್ಯ ಬಯಲು…ಪ್ರಿಯಕರ ಅಂದರ್…ಅಕ್ರಮ ಸಂಭಂಧ ಹಿನ್ನಲೆ ಕೊಲೆ…ಸಾಲ ಹಿಂದಿರುಗಿಸುವಂತೆ ಒತ್ತಡ ಹೇರಿದ್ದಕ್ಕೆ ಹತ್ಯೆ…

ನಂಜನಗೂಡು,ಏ18,Tv10 ಕನ್ನಡ
ಮಹಿಳೆಯ ನಿಗೂಢ ಕೊಲೆ ರಹಸ್ಯ ಭೇಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.ಅಕ್ರಮ ಸಂಭಂದ ಇರಿಸಿಕೊಂಡಿದ್ದ ಪ್ರಿಯತಮ ಅಂದರ್ ಆಗಿದ್ದಾನೆ.ಸಾಲವಾಗಿ ಕೊಟ್ಟ ಹಣ ವಾಪಸ್ ಕೇಳಿದ ಪ್ರಿಯತಮೆಯನ್ನ ಪ್ರಿಯಕರ ಬರ್ಭರವಾಗಿ ಕೊಲೆ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ಮಳವಳ್ಳಿಯ ನಿವಾಸಿ ಶ್ಯಾಂಪ್ರಸಾದ್ ಬಂಧಿತ ಆರೋಪಿ.ಪ್ರಿಯಕರನ ಕೈಲಿ ಹತ್ಯೆಗೊಳಗಾದವಳು ಕನಕಪುರದ ನಿವಾಸಿ ಮಂಜುಳ(40).

ಎರಡು ದಿನಗಳ ಹಿಂದೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಳಿ ಇರುವ ಹದಿನಾರುಕಾಲಿನ ಮಂಟಪದ ಬಳಿ ಅಪರಿಚಿತ ಮಹಿಳೆ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಪೊಲೀಸರು ಮೃತ ಮಹಿಳೆಯ ಮಾಹಿತಿ ಜಾಲಾಡಿದಾಗ ಕನಕಪುರದ ಮಂಜುಳಾ ಎಂದು ತಿಳಿದುಬಂತು.ಮೂಲತಃ ಮಳವಳ್ಳಿ ತಾಲೂಕಿನ ಮಂಜುಳಾ ವಿವಾಹಿತಳು.ಮಹದೇವಾಚಾರಿ ಎಂಬುವರನ್ನ ವಿವಾಹವಾಗಿದ್ದ ಮಂಜುಳಾ ಎರಡು ಮಕ್ಕಳ ತಾಯಿ.ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಂಜುಳಾಗೆ ಶ್ಯಾಂಪ್ರಸಾದ್ ಪರಿಚಯವಾಯಿತು.ಸ್ನೇಹ ಪ್ರಣಯಕ್ಕೆ ತಿರುಗಿ ಅಕ್ರಮ ಸಂಭಂಧಕ್ಕೆ ದಾರಿಯಾಯಿತು.ಈ ವಿಚಾರ ಪತಿ ಮಹದೇವಾಚಾರಿಗೆ ತಿಳಿದು ಗಲಾಟೆ ನಡೆದಿದೆ.ಶ್ಯಾಂಪ್ರಸಾದ್ ಸಹವಾಸ ಬಿಡುವಂತೆ ಪತಿ ಮನವಿ ಮಾಡಿದ್ದಾರೆ.3 ಲಕ್ಷ ಸಾಲ ಕೊಟ್ಟಿದ್ದೀನಿ ವಾಪಸ್ ತಗೊಂಡು ಸಹವಾಸ ಬಿಡ್ತೀನಿ ಅಂತ ಮಾತು ಕೊಟ್ಟಿದ್ದಾರೆ.ನಂತರ ಮಹದೇವಾಚಾರಿ ತನ್ನ ಪತ್ನಿ ಹಾಗೂ ಮಕ್ಕಳ ಸಮೇತ ಕನಕಪುರದಲ್ಲಿ ನೆಲೆಸಿದ್ದಾರೆ.ಹೀಗಿದ್ದೂ ಇಬ್ಬರ ನಡುವೆ ಅಕ್ರಮ ಸಂಭಂಧ ಮುಂದುವರೆದಿದೆ.ಏಪ್ರಿಲ್ 8 ರಂದು ದೇವಸ್ಥಾನಕ್ಕೆ ಎಂದು ಮನೆ ಬಿಟ್ಟ ಮಂಜುಳಾ ಮನೆಗೆ ಹಿಂದಿರುಗಿಲ್ಲ.ಪ್ರಿಯಕರನ ಜೊತೆ ಹೋಗಿದ್ದಾಳೆಂದು ಖಚಿತಪಡಿಸಿಕೊಂಡ ಪತಿ ಮೌನಕ್ಕೆ ಶರಣಾಗಿದ್ದಾರೆ.ಏಪ್ರಿಲ್ 15 ರಂದು ಬೆಳಿಗ್ಗೆ ಹದಿನಾರುಕಾಲು ಮಂಟಪದ ಬಳಿ ಮಂಜುಳಾ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ.ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಠಾಣೆ ಪೊಲೀಸರು ತನಿಖೆ ಆರಂಭಿಸಿ ಆರೋಪಿಯನ್ನ ಬಂಧಿಸಿದ್ದಾರೆ.ಹಣ ಹಿಂದಿರುಗಿಸುವಂತೆ ಒತ್ತಡ ಹೇರಿದ್ದ ಪತ್ನಿಯನ್ನ ಶ್ಯಾಮ್ ಪ್ರಸಾದ್ ಕೊಲೆ ಮಾಡಿರುವುದಾಗಿ ಪತಿ ಮಹದೇವಾಚಾರಿ ದೂರು ನೀಡಿದ್ದಾರೆ.ಅಕ್ರಮ ಸಂಭಂಧಕ್ಕೆ ಹಾತೊರೆದು ಹಣ ಕಳೆದುಕೊಂಡ ಮಂಜುಳಾ ಪ್ರಾಣವನ್ನೂ ಕಳೆದುಕೊಂಡಿದ್ದಾಳೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *